ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಮುಖ್ಯಮಂತ್ರಿಗೆ ಆರ್.ವಿ.ನಾಯಕ ಒತ್ತಾಯ

ಸುರಪುರ : ನಾರಾಯಣಪುರ ಜಲಾಶಯಕ್ಕೆ ಸಂಬಂಧಿಸಿದಂತೆ ಹಿಂಗಾರು ಹಂಗಾಮಿಗೆ ರೈತರ ಜಮೀನಿಗೆ ಕಾಲುವೆ ಮುಖಾಂತರ ನೀರು ಹರಿಸಲು ಶೀಘ್ರವೇ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಆಯೋಜಿಸಿ ರೈತರಿಗೆ ಕಾಲುವೆ ನೀರಿನ ಕುರಿತಂತೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವ ಅವರು, ಈಗಾಗಲೇ ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯಗಳು ಸಂಪೂರ್ಣ ಭರ್ತಿಯಾಗಿವೆ. ೨೦೨೧-೨೨ನೇ ಸಾಲಿನ ಹಿಂಗಾರು ಹಂಗಾಮಿಗೆ ರೈತರ ಜಮೀನುಗಳಿಗೆ ಸಂಪೂರ್ಣ ನೀರು ಒದಗಿಸುವ ನಿಟ್ಟಿನಲ್ಲಿ ರೈತರ ಹಿತದೃಷ್ಟಿಯನ್ನು ಕಾಪಾಡಲು ತಕ್ಷಣ ನೀರಾವರಿ ಸಲಹಾ ಸಮಿತಿ ಸಭೆ ಕರೆಯಬೇಕು ಎಂದು ತಿಳಿಸಿದ್ದಾರೆ.

ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಮತ್ತು ಹಿಂಗಾರು ಹಂಗಾಮಿಗೆ ಎಲ್ಲಿಯವರೆಗೆ ರೈತರ ಜಮೀನುಗಳಿಗೆ ನೀರು ಹರಿಸಲಾಗುವುದು ಎನ್ನುವ ಕುರಿತು ನಿಖರವಾದ ಮಾಹಿತಿಯನ್ನು ಅಧಿಕಾರಿಗಳು ರೈತರಿಗೆ ಈಗಾಗಲೇ ತಿಳಿಸಬೇಕಾಗಿತ್ತು. ಆದರೆ, ಇಲ್ಲಿಯವರೆಗೆ ಹೇಳಿರುವುದಿಲ್ಲ ಮತ್ತು ಸಭೆಯ ಆಯೋಜನೆ ಕುರಿತಂತೆ ಯಾವುದೇ ಮಾಹಿತಿ ಇಲ್ಲದ ಕಾರಣ ರೈತರು ಗೊಂದಲದಲ್ಲಿದ್ದಾರೆ ಎಂದು ಹೇಳಿದ್ದಾರೆ.

ರೈತರ ಜಮೀನಿಗೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ಈ ಬಾರಿ ನೀರು ಸರ್ಮಪಕವಾಗಿ ಒದಗಿಸಲು ಆಗುವುದಿಲ್ಲಾ ಎನ್ನುವ ವದಂತಿಗಳು ಹರಿದಾಡುತ್ತಿವೆ. ಹೀಗಾಗಿ ಕ್ಷೇತ್ರದ ರೈತರು ಆತಂಕದಲ್ಲಿದ್ದಾರೆ. ಕಾರಣ ರೈತರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ತಾವುಗಳು ಶೀಘ್ರವಾಗಿ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆಯಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು.

ಅಲ್ಲದೆ, ರೈತರ ಹಿಂಗಾರು ಬೆಳೆಗಳಿಗೆ ನೀರನ್ನು ಒದಗಿಸುವ ಸ್ಪಷ್ಟ ಮಾಹಿತಿಯನ್ನು ನೀಡಲು ಹಾಗೂ ರೈತರ ಹಿತ ಕಾಯುವ ನಿರ್ಣಯಗಳನ್ನು ಸಭೆಯಲ್ಲಿ ಕೈಗೊಂಡು ರೈತರಿಗೆ ಅನುಕೂಲ ಮಾಡಿಕೊಡಲು ನಿರ್ದೇಶನ ನೀಡಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನು ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೂ ಕೂಡ ಪತ್ರ ಬರೆದು ತಿಳಿಸಿರುತ್ತೇನೆ ಎಂದು ಮಾಜಿ ಶಾಸಕ ಆರ್‌ವಿಎನ್ ಅವರು ಸಿಎಂಗೆ ಬರೆದ ಪತ್ರದಲ್ಲಿ ಹೇಳಿದ್ಧಾರೆ.

emedialine

Recent Posts

ಕಲಬುರಗಿ: ಇಎಸ್ ಐಸಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್, ನರರೋಗ ತಜ್ಞರ ಪ್ರಾರಂಭಕ್ಕೆ ಆಗ್ರಹ

ಕಲಬುರಗಿ: ನಗರದಲ್ಲಿನ ಇಎಸ್ ಐಸಿ ವೈದ್ಯಕೀಯ ಆಸ್ಪತ್ರೆಯಲ್ಲಿ ವಿಕಿರಣಶಾಸ್ತ್ರ ವಿಭಾಗದಲ್ಲಿ ಸಿಟಿ ಸ್ಕ್ಯಾನ್ ಮಾಡುವುದಕ್ಕೆ 30 ದಿನಗಳ ಸಮಯ ತೆಗೆದುಕೊಳ್ಳುತ್ತಿರುವುದನ್ನು…

33 mins ago

ರಾಜ್ಯಮಟ್ಟದ ಗಮಕ‌ ಸಮ್ಮೇಳ‌ನ

ಕಲಬುರಗಿ: ಜೇವರ್ಗಿ ತಾಲೂಕು‌ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮೈಸೂರಿನ ಪರಂಪರೆ ಸಂಸ್ಥಯ ಸಹಯೋಗದಲ್ಲಿ ಜೇವರ್ಗಿಯ ಟೌನ್ ಹಾಲ್ ಹಳೆ…

37 mins ago

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ವಾರ್ಡ್ ಸಂಖ್ಯೆ12 ರಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪುರಸಭೆ ಮಾಜಿ ಅಧ್ಯಕ್ಷ,…

11 hours ago

ಭ್ರಷ್ಟಾಚಾರ ರಹಿತ ವಿವಿಗೆ ಆದ್ಯತೆ: ರಾಘವೇಂದ್ರ ಭೈರಪ್ಪ

ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ನಡೆಯುವ ಪ್ರತಿಯೊಂದು ಕಾರ್ಯವು ಕೂಡ ಭ್ರಷ್ಟಾಚಾರ ರಹಿತವಾಗಿರಬೇಕು ಎನ್ನುವ ಮನೋಭಾವ ಹೊಂದಿ ಕೆಲಸ ಮಾಡುತ್ತಿದ್ದೇನೆ ಎಂದು ಗುಲಬರ್ಗಾ…

12 hours ago

ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕಲಬುರಗಿ: ಸ್ವಸ್ತಿಕ ನಗರದ ಅಮರಾವತಿ ಅಪಾಟೆರ್ಂಟ್ ನಿವಾಸಿಗಳಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ನಮ್ಮ ದೇಶದ ಪ್ರಧಾನಮಂತ್ರಿ ಅವರ ಸ್ವಚ್ಛ…

12 hours ago

ಸಚಿವ ಸಂಪುಟ ಸಭೆಯಲ್ಲಿ ವಿವಿಧ ಬೇಡಿಕೆ ಈಡೇರಿಕ್ಕೆಗೆ ಆಗ್ರಹ

ಕಲಬುರಗಿ:ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ರಾಜ್ಯ ಸರಕಾರದ ವತಿಯಿಂದ ಕಲಬುರಗಿಯಲ್ಲಿ ತೊಗರಿ ಪಾರ್ಕ ಸ್ಥಾಪಿಸಬೇಕು, ಕಲಬುರಗಿ ಅಭಿವೃದ್ದಿ ಮಂಡಳಿಯನ್ನು ಕೆ.ಎಂ.ಎಫ್…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420