ಸುರಪುರ: ರಾಜ್ಯದಲ್ಲಿ ಕೋವಿಡ್ ನಿಯಮಗಳು ಜಾರಿಯಲ್ಲಿರುವ ಕಾರಣದಿಂದ ಈಬಾರಿಯ ಈದ್ ಮಿಲಾದ್ ಹಬ್ಬ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸುವಂತೆ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ತಿಳಿಸಿದರು.
ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ಈದ್ ಮಿಲಾದ್ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ,ಸರಕಾರದ ನಿಯಮದಂತೆ ಯಾವುದೇ ಮೆರವಣಿಗೆಗೆ ಅವಕಾಶ ಇರುವುದಿಲ್ಲ.ಆದ್ದರಿಂದ ಈದ್ ಮಿಲಾದ್ ಕೂಡ ಮೆರವಣಿಗೆ ನಡೆಸದೆ ನೂರು ಜನಕ್ಕಿಂತಲು ಕಡಿಮೆ ಜನಸಂಖ್ಯೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು.
ಆದರೆ ಪ್ರಾರ್ಥನೆ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧರಿಸಿ ಹಾಗು ಹಸ್ತ ಲಾಘವ ಮಾಡಬೇಡಿ ಎಂದು ತಿಳಿಸಿದರು.ಅದೆರೀತಿಯಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯೂ ಕೂಡ ಸರಳವಾಗಿ ಆಚರಿಸೋಣ,ಇಲ್ಲಿಯೂ ಯಾವುದೇ ಮೆರವಣಿಗೆ ನಡೆಸಬೇಡಿ,ನೂರಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಜನರು ಕಾರ್ಯಕ್ರಮ ನಡೆಸಬಹುದು ಆದರೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಅನೇಕ ಜನರು ಮಾತನಾಡಿ,ಸರಕಾರದ ನಿಯಮಗಳನ್ನು ಪಾಲಿಸುತ್ತೇವೆ,ಆದರೆ ಕೆಲವೊಮ್ಮೆ ಆಚರಣೆ ಸಂದರ್ಭದಲ್ಲಿ ಯಾವುದೇ ಸಣ್ಣ ಪುಟ್ಟ ವ್ಯತ್ಯಾಸಗಳಾದರೆ ಅವುಗಳನ್ನು ಅನುಸರಿಸುವಂತೆ ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ ಬೇಟೆಗಾರ,ಅರ್ಷದ್ ದಖನಿ,ಹರೀಶ್ ತ್ರಿವೇದಿ,ಶಿವಲಿಂಗ ಹಸನಾಪುರ,ಚಂದ್ರಶೇಖರ ಹಸನಾಪುರ ಮತ್ತಿತರರು ಮಾತನಾಡಿದರು.
ವೇದಿಕೆ ಮೇಲೆ ಪೊಲೀಸ್ ಇನ್ಸ್ಪೇಕ್ಟರ್ ಸುನೀಲಕುಮಾರ್ ಮೂಲಿಮನಿ,ಪಿಎಸ್ಐ ಕೃಷ್ಣಾ ಸುಬೇದಾರ ಇದ್ದರು.ಸಭೆಯಲ್ಲಿ ಮುಖಂಡರಾದ ಖಾಜಾ ಖಲೀಲಹ್ಮದ್ ಅರಕೇರಿ,ಭೀಮು ನಾಯಕ ಮಲ್ಲಿಬಾವಿ,ರಾಹುಲ್ ಹುಲಿಮನಿ,ಅಬೀದ್ ಹುಸೇನ್ ಪಗಡಿ,ರವಿಚಂದ್ರ ದರಬಾರಿ,ಮಾನಪ್ಪ ಪ್ಯಾಪ್ಲಿ,ಮಲ್ಲಪ್ಪ ಕಬಾಡಗೇರಾ,ಧರ್ಮರಾಜ ಬಡಿಗೇರ,ನಾಸೀರ್ ಕುಂಡಾಲೆ,ಮಹ್ಮದ್ ಶಕೀಲ್ ಖುರೇಶಿ,ಗಫೂರ್ ಖುರೇಶಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಅತಿವೃಷ್ಟಿ ಮಳೆಯಿಂದ ಹಾನಿಯಾದ ಉದ್ದು, ಹೆಸರು, ತೊಗರಿ ಬೆಳೆ ನಷ್ಟವಾಗಿದ್ದು, ಉತ್ಪಾದನೆ ಆಧಾರದಲ್ಲಿ ಪರಿಹಾರ ಕೊಡುವಂತೆ ಹಾಗೂ ಕಬ್ಬಿನ ಬಾಕಿ…
ಕಲಬುರಗಿ: ಸರದಾರ ವಲ್ಲಭಭಾಯಿ ಪಟೇಲ ರ ಮೂರ್ತಿಗೆ ಮಾಲಾರ್ಪಣೆ ಮತ್ತು ರಾಷ್ಟ್ರೀಯ ಗೀತೆ ವಾಚಿಸುವ ಮೂಲಕ ನೈಜ ಕ. ಕ.…
ಚಿತ್ತಾಪುರ: ಪಟ್ಟಣದ ಕ್ರೀಡಾಂಗಣದಲ್ಲಿ 2024-25 ನೇ ಸಾಲಿನ ಚಿತ್ತಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.19 ರಂದು ಆಯೋಜಿಸಲಾಗಿದೆ ಎಂದು…
ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್…
ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಸಮಾಧಾನ ಇದೆ. ಆದರೆ, ಅದರಲ್ಲಿ ತೆಗೆದುಕೊಂಡ ನಿರ್ಣಯಗಳು ತೃಪ್ತಿಯಿಲ್ಲ…
ಕಲಬುರಗಿಯಲ್ಲಿ ವಕ್ಫ್ ಅದಾಲತ್ ಕಲಬುರಗಿ; ರಾಜ್ಯದಲ್ಲಿರುವ ವಕ್ಫ್ ಆಸ್ತಿ ಸಂರಕ್ಷಣೆಗೆ ಮಂಡಳಿ ಮುಂದಾಗಿದ್ದು, ಪ್ರತಿ ಆಸ್ತಿ ಸುತ್ತ ರಾಜ್ಯ ವಕ್ಫ್…