ಪ್ರಜ್ಞಾವಂತ ಯುವಕರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ: ರಾಮಣ್ಣ

0
25

ಶಹಾಬಾದ: ಪ್ರಜ್ಞಾವಂತ ಯುವಕರು ಮುಂದೆ ಬಂದಾಗ ಮಾತ್ರ ಸಮಾಜದಲ್ಲಿ ಬದಲಾವಣೆಯಾಗಲು ಸಾಧ್ಯ ಎಂದು ಎಸ್‌ಯುಸಿಐ (ಸಿ) ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ ಇಬ್ರಾಹಿಂಪೂರ ಹೇಳಿದರು.

ಅವರು ಸೋಮವಾರ ನಗರದ ಎಐಡಿವೈಓ ಸಂಘಟನೆವತಿಯಿಂದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ೫ನೇ ಯುವಜನ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದರು.

Contact Your\'s Advertisement; 9902492681

ಇಂದಿನ ಬೆಲೆ ಏರಿಕೆ, ಭ್ರಷ್ಟಾಚಾರ, ನಿರೋದ್ಯೋಗ, ಕೋಮುವಾದದ ವಿರುದ್ಧ ಹೋರಾಡುವ ಮೂಲಕ ಸಮಾಜವಾದಿ ಸಮಾಜವನ್ನು ನಿರ್ಮಿಸುವತ್ತ ಹೆಜ್ಜೆ ಹಾಕುವ ಅನಿವಾರ್ಯತೆ ಎಂದಿಗಿಂತಲೂ ಇಂದು ಬೇಕಾಗಿದೆ. ಇಂದು ಪ್ರತಿಯೊಬ್ಬ ಯುವಕರು ಇಂದು ನಿರುದ್ಯೋಗ ಸಮಸ್ಯೆಯಿಂದ ತೊಳಲಾಡುತ್ತಿದ್ದಾರೆ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕಾಗಿದೆ. ಸರಕಾರಗಳು ಈ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿಪ್ರಥಮ ಆದ್ಯತೆ ನೀಡಬೇಕು.ಸರ್ಕಾರಗಳು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರ ಬಂದ ಸರಕಾರಗಳಿಂದ ದೇಶದ ಅಭಿವೃದ್ಧಿ ಅಸಾಧ್ಯ. ಅಭಿವೃದ್ಧಿ ಹೊಂದುತ್ತಿರುವ ದೇಶದಲ್ಲಿ ನಿರುದ್ಯೋಗವೇ ಮಗ್ಗುಲ ಮುಳ್ಳಾಗಿ ಕಾಡುತ್ತಿದೆ. ಸರಕಾರಗಳು ಯುವಕರಿಗೆ ನಿರುದ್ಯೋಗ ಸೃಷ್ಟಿಸುವ ಕೆಲಸಕ್ಕೆ ಮುಂದಾಗುವುದನ್ನು ಮೊದಲು ಆಲೋಚಿಸಬೇಕು. ಅಂದಾಗ ಮಾತ್ರ ಭಾರತ ದೇಶ ಅಭಿವೃದ್ಧಿ ಪಥದತ್ತ ಸಾಗಿ ದೊಡ್ಡ ರಾ?ವಾಗಿ ಮಾರ್ಪಡಲು ಸಾಧ್ಯವಿದೆ ಎಂದರು.

ಎಐಡಿವೈಒ ಜಿಲ್ಲಾ ಅಧ್ಯಕ್ಷರಾದ ನಿಂಗಣ್ಣ ಎಸ್ ಜಂಬಗಿ ಮಾತನಾಡಿ, ಪ್ರಪಂಚದಲ್ಲಿಯೆ ಭಾರತವು ಯುವಕರ ಸಂಖ್ಯೆ ಹೆಚ್ಚು ಹೊಂದಿದ್ದು, ಸರಕಾರವು ಸರಿಯಾಗಿ ನಡೆಸಿಕೊಳ್ಳದೆ ಇರುವದರಿಂದ ನಿರುದ್ಯೋಗ, ಬಡತನದಿಂದ ಯುವಕರು ತೀವ್ರ ಹತಾಸೆಗೆ ಒಳಗಾಗಿದ್ದಾರೆ. ಅಲ್ಲದೇ ಸರಕಾರದ ಜನ ವಿರೋಧಿ ನೀತಿಗಳಿಂದ ತತ್ತರಿಸಿ ಹೋಗಿದ್ದಾರೆ. ಇವೆಲ್ಲಾ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟ ಕಟ್ಟಲು ಯುವಜನರು ಮುಂದೆ ಬರಬೇಕೆಂದರು.

ಈ ಸಂಧರ್ಭದಲ್ಲಿ ಅತಿಥಿಗಳಾಗಿ ಸರಕಾರಿ ಕಾಲೇಜಿನ ಪ್ರಾಚಾರ್ಯರಾದ ಶಮ್‌ಶೋದ್ದಿನ್ ಪಟೇಲ್, ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಜಗನ್ನಾಥ.ಎಸ್.ಹೆಚ್, ವಾಸುದೇವ ಚವ್ಹಾಣ ಮಾತನಾಡಿದರು . ಎಐಡಿವೈಓ ಅಧ್ಯಕ್ಷರಾದ ಸಿದ್ದು ಚೌದ್ರಿ ಅಧ್ಯಕ್ಷತೆ ವಹಿಸಿದರು.
ಸ್ಥಳೀಯ ಕಾರ್ಯದರ್ಶಿ ಪ್ರವೀಣ ಬಣಮಿಕರ್, ತೀಮ್ಮಯ್ಯಾ ನೀಲಕಂಠ ಹುಲಿ ,ಶಿವಕುಮಾರ.ಇ.ಕೆ ಸೇರಿದಂತೆ ಅನೇಕ ಯುವಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here