ಮಹಿಳೆಯನ್ನು ಜೀವಂತವಾಗಿ ಸುಟ್ಟು ಹಾಕಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಿ

0
106

ಶಹಾಬಾದ:ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದ ಮಾದಿಗ ಸಮಾಜದ ಮಹಿಳೆ ಅತ್ಯಾಚಾರ ಯತ್ನವನ್ನು ವಿರೋಧಿಸಿದಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಅದೇ ಗ್ರಾಮದ ನಿವಾಸಿ ಗಂಗಪ್ಪ ಬಸಪ್ಪ ಅಳ್ಳೋಳ್ಳ ಅವನನ್ನು ಗಲ್ಲು ಶಿಕ್ಷೆಗೆ ಒಳಪಡಿಸಿ ಮಹಿಳೆಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ದಲಿತ ಮಾದಿಗ ಸಮನ್ವಯ ಸಮಿತಿಯ ಪತ್ರಿಕಾ ಮಾಧ್ಯಮದ ಜಿಲ್ಲಾಧ್ಯಕ್ಷ ರವಿ ಬೆಳಮಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾತ್ರಿ ೨ ಗಂಟೆಗೆ ಮಹಿಳೆಯ ಮನೆಗೆ ನುಗ್ಗಿ ಅವಳನ್ನು ಅತ್ಯಾಚಾರ ಮಾಡಲು ಯತ್ನಿಸಿದಾಗ, ಅದನ್ನು ವಿರೋಧಿಸಿದಕ್ಕೆ, ಮಹಿಳೆಯನ್ನು ಸಜೀವವಾಗಿ ಸುಟ್ಟುಹಾಕಿದ್ದಾನೆ.ಇಂತಹ ಅಮಾನವೀಯ ಘಟನೆಗೆ ಕಾರಣರಾದ ಆರೋಪಿ ಹಾಗೂ ಸಹಚರರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.

Contact Your\'s Advertisement; 9902492681

ಅಲ್ಲದೇ ನೊಂದ ಕುಟುಂಬಕ್ಕೆ ೫೦ ಲಕ್ಷ ರೂ. ಪರಿಹಾರ ಧನ, ೫ ಎಕರೆ ಭೂಮಿ ಹಾಗೂ ಸರ್ಕಾರಿ ನೌಕರಿ ಒದಗಿಸಬೇಕು. ಜಿಲ್ಲಾಢಳಿತ ಆರೋಪಿಯ ಆಸ್ತಿಯನ್ನು ಮುಟ್ಟುಗೋಳು ಮಾಡಿ ನೊಂದ ಕುಟುಂಬಕ್ಕೆ ನೀಡಬೇಕು. ಕೂಡಲೇ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ರವಿ ಬೆಳಮಗಿ ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here