ಕಳಪೆ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರನ ಕ್ರಮಕೈಗೊಳ್ಳಲು ಆಗ್ರಹ

0
11

ಶಹಾಬಾದ:ನಗರದಿಂದ ತೊನಸನಹಳ್ಳಿ(ಎಸ್) ಗ್ರಾಮದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಹೋಗುವಾಗ ನಗರದ ಕನಕ ವೃತ್ತದಲ್ಲಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಸಚಿವರಾದ ಕೆ.ಎಸ್.ಈಶ್ವರಪ್ಪನವರಿಗೆ ಘೇರಾವ ಹಾಕಿ ನಗರದ ಬಸವೇಶ್ವರ ವೃತ್ತದಿಂದ ಮರಗೋಳ ಕಾಲೇಜಿನವರೆಗೆ ನಡೆದ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಕಾಮಗಾರಿಯಾಗಿದ್ದು, ಕೂಡಲೇ ಗುತ್ತಿಗೆದಾರನ ಮೇಲೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಅಲ್ಲದೇ ಕೇವಲ ಅರ್ಧ ಕಿಮೀ ರಸ್ತೆ ನಿರ್ಮಾಣಕ್ಕೆ ಸುಮಾರು ೫ ಕೋಟಿ ರೂಪಾಯಿ ಅನುದಾನ ಒದಗಿಸಿದರೂ ಗುತ್ತಿಗೆದಾರ ಸಂಪೂರ್ಣ ಕಳಪೆ ಕಾಮಗಾರಿ ಮಾಡಿದ್ದಾನೆ.ಅಲ್ಲದೇ ಡಾಂಬರೀಕರಣಗೊಳಿಸಿದ ದಿನವೇ ಡಾಂಬರ್ ಕಿತ್ತು ಹೋಗಿದೆ. ರಸ್ತೆಯಲ್ಲು ನೂರಾರು ತಗ್ಗು ಗುಂಡಿಗಳಾಗಿವೆ.ರಸ್ತೆ ಎಂಬುದೇ ಮಾಯವಾಗಿದೆ.ಆ ರಸ್ತೆಗೆ ಈಗಾಗಲೇ ರಾಜಕೀಯವಾಗಿ ಒತ್ತಡ ಹಾಕಿ ಬಿಲ್ ಮಾಡಿಕೊಳ್ಳಲು ಅಧಿಕಾರಿಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಆದ್ದರಿಂದ ಬಿಲ್ ತಡೆಹಿಡಿಯಬೇಕು.ಅಲ್ಲದೇ ಗುತ್ತಿಗೆದಾರನ ಮೇಲೆ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

Contact Your\'s Advertisement; 9902492681

ಬಿಎಸ್‌ಪಿಯ ಅಧ್ಯಕ್ಷ ಶಿವಶಾಲಕುಮಾರ ಪಟ್ಟಣಕರ್,ಉಪಾಧ್ಯಕ್ಷ ಆಂಜನೇಯ ಕುಸಾಳೆ, ಕಾರ್ಯದರ್ಶಿ ಪುನೀತ ಹಳ್ಳಿಕರ್, ಶೇಖ ಬಾಬು ಉಸ್ಮಾನ ಸೇರಿದಂತೆ ಅನೇಕರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here