ಬಿಸಿ ಬಿಸಿ ಸುದ್ದಿ

ರೈಲು ನಿಲುಗಡೆಗಾಗಿ ಆಗ್ರಹಿಸಿ ಬಿಎಸ್‌ಪಿಯಿಂದ ಧರಣಿ

ಶಹಾಬಾದ: ಕೋವಿಡ್‌ಕ್ಕಿಂತಲೂ ಮುಂಚೆ ನಿಲ್ಲುತ್ತಿದ್ದ ಎಲ್ಲಾ ರೈಲುಗಳನ್ನು ಶಹಾಬಾದ ರೇಲ್ವೆ ನಿಲ್ದಾಣದಲ್ಲಿ ನಿಲ್ಲಬೇಕೆಂದು ಆಗ್ರಹಿಸಿ ಗುರುವಾರ ಬಹುಜನ ಸಮಾಜ ಪಕ್ಷದ ವತಿಯಿಂದ ರೇಲ್ವೆ ನಿಲ್ದಾಣದ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ನಂತರ ಮಾತನಾಡಿದ ಪ್ರತಿಭಟನಾಕಾರರು ನಗರದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ವಾಸಿಸುತ್ತಿದ್ದಾರೆ.ಇಲ್ಲಿನ ಜನರಿಗೆ ಕಲಬುರಗಿಗೆ, ಸೋಲಾಪೂರಗೆ ಹೋಗಳೂ ತೊಂದರೆಯಾಗುತ್ತಿದೆ. ನೌಕರಸ್ಥರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಎಲ್ಲಿಲ್ಲದ ತೊಂದರೆಯಾಗುತ್ತಿದೆ. ಕೇವಲ ಕಡಿಮೆ ಜನಸಂಖ್ಯೆ ಹೊಂದಿರುವ ಚಿತ್ತಾಪೂರ ರೇಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಯಾಗುತ್ತಿದೆ.ಅದೇ ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ನಗರದಲ್ಲಿ ರೈಲು ನಿಲುಗಡೆಯಾಗುತ್ತಿಲ್ಲ.ಇದೆಂಥ ನಿಯಮ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಮೊದಲು ನಿಲ್ಲುತ್ತಿದ್ದ ಎಲ್ಲಾ ರೈಲುಗಳನ್ನು೧೦ ದಿನಗಳ ಒಳಗಾಗಿ ನಿಲ್ಲಬೇಕು. ಮಾಸಿಕ ಪಾಸ್ ಹಾಗೂ ಜೆನರಲ್ ಟಿಕೆಟ್‌ಗಳನ್ನು ನೀಡಬೇಕೆಂದು ಆಗ್ರಹಿಸಿದರು.

ನಂತರ ರೇಲ್ವೆ ಮೇಲಾಧಿಕಾರಿಗಳ ಜತೆಗೆ ಮಾತನಾಡಿದರು. ಮುಂಬರುವ ಮಂಗಳವಾರದಂದು ಡಿಆರ್‌ಎಮ್ ಸೋಲಾಪೂರ ಕಚೇರಿಗೆ ಬನ್ನು ಮಾತಾಡೋಣ ಎಂದು ರೇಲ್ವೆ ಅಧಿಕಾರಿಗಳು ತಿಳಿಸಿದರು.ಅಲ್ಲದೇ ಈಗಾಗಲೇ ಎರಡು ರೈಲುಗಳ ನಿಲುಗಡೆಗೆ ಹಾಗೂ ಲೋಕಲ್ ವಡಿ- ಕಲಬುರಗಿ ರೈಲು ಓಡಿಸಲು ಪ್ರಸ್ತಾವನೆ ಮೇಲಾಧಿಕಾರಿಗಳಿಗೆ ಕಳಿಸಿದ್ದೆವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಎಸ್‌ಪಿಯ ಅಧ್ಯಕ್ಷ ಶಿವಶಾಲಕುಮಾರ ಪಟ್ಟಣಕರ್,ಉಪಾಧ್ಯಕ್ಷ ಆಂಜನೇಯ ಕುಸಾಳೆ, ಕಾರ್ಯದರ್ಶಿ ಪುನೀತ ಹಳ್ಳಿಕರ್, ಶೇಖ ಬಾಬು ಉಸ್ಮಾನ,ಕಿರಣ ಜಡಗಿಕರ್ ಸೇರಿದಂತೆ ಅನೇಕರು ಹಾಜರಿದ್ದರು.

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

1 hour ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

15 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

16 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

16 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

16 hours ago