ಬಿಸಿ ಬಿಸಿ ಸುದ್ದಿ

ಜೇವರ್ಗಿ: ಮನೆ ಬಾಗಿಲಿಗೆ ಲಸಿಕೆ -ವಿನೂತನ ಪ್ರಯೋಗ

ಜೇವರ್ಗಿ; ಕೋವಿಡ್ ನಿರ್ಮೂಲನೆಗೆ ಸರಕಾರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸತತವಾಗಿ ಎಷ್ಟೇ ಪ್ರಯತ್ನಿಸಿದರೂ ಕೋವಿಡ್ ಲಸಿಕೆ ತೆಗೆದುಕೊಳ್ಳದೇ ಇರುವ ಜನರಿಗೆ ಜೇವರ್ಗಿ ತಾಲೂಕು ಆಡಳಿತ ಮನೆ ಮನೆಯ ಬಾಗಿಲಿಗೆ ಹೋಗಿ ಆರತಿ ಬೆಳಗಿ ಲಸಿಕೆಯನ್ನು ನೀಡುವ ವಿನೂತನ ಪ್ರಯೋಗ ಗಮನ ಸೆಳೆಯಿತು.

ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದಲ್ಲಿ ಇಲ್ಲಿಯವರೆಗೆ 82 ಶೇಕಡಾವಾರು ಜನರು ಲಸಿಕೆ ಪಡೆದಿದ್ದು ಉಳಿದ ಕೆಲ ಜನರು ಲಸಿಕೆ ಪಡೆಯಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ತಿಳಿ ಹೇಳಿದರು.

ಕೆಲ ಜನರು ಮೌಢ್ಯದ ಕಾರಣ ಹಾಗೂ ಲಸಿಕೆ ಪಡೆದರೇ ಅಡ್ಡ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಪಡೆದಿರಲಿಲ್ಲ .ಆದ್ದರಿಂದ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮದಲ್ಲಿ ಜೇವರ್ಗಿ ತಹಶೀಲ್ದಾರ್ ವಿನಯಕುಮಾರ ಪಾಟೀಲ ಹಾಗೂ ತಾಲೂಕು ವೈದ್ಯಾಧಿಕಾರಿ ಡಾ.ಸಿದ್ದು ಪಾಟೀಲ ಅವರ ಗಮನಕ್ಕೆ ಬಂದಾಗ ತಕ್ಷಣವೇ ಕಾರ್ಯಪ್ರವೃತ್ತರಾಗಿ ಯಾರೂ ಲಸಿಕೆ ಪಡೆದಿಲ್ಲವೋ ಅಂತವರ ಮನೆ ಮನೆಗೆ ಹೋಗಿ ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ ಎಂದು ಸಾರ್ವಜನಿಕರ ಮನವೊಲಿಸಿ ,ಅವರಿಗೆ ಆರತಿಯನ್ನು ಬೆಳಗಿ ಲಸಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಪ್ಪ ಗುಬ್ಯಾಡ. ತಾಲ್ಲೂಕು ಸಿಡಿಪಿಓ ಸಂಗಣಗೌಡ ಪಾಟೀಲ. ಮಂದೇವಾಲ ಪ್ರಾಥಮಿಕ ಆರೋಗ್ಯ ಅಧಿಕಾರಿ ರೇಣುಕಾ ದೇವರಮನಿ.ಆಹಾರ ನೀರಿಕ್ಷಕ ಡಿ.ಬಿ.ಪಾಟೀಲ. ಅಬಕಾರಿ ವೃತ್ತ ನಿರೀಕ್ಷಕಿ ವನಿತಾ ಸೀತಾಳೆ. ತೋಟಗಾರಿಕೆ ಇಲಾಖೆ ಅಧಿಕಾರಿ ಸುಷ್ಮಾ ಪಾಟೀಲ. ಹಿಂದುಳಿದ ವರ್ಗ ಇಲಾಖೆ ಅಧಿಕಾರಿ ಶಕುಂತಲಾ.ಪಿಡಿಓ ಬಿ.ಆರ್.ಪಾಟೀಲ. ಮಲ್ಲಿಕಾರ್ಜುನ ಬಿರಾದಾರ ಗ್ರಾಮ ಪಂಚಾಯಿತಿ ಸದಸ್ಯರಾದ ವೀರಭದ್ರಯ್ಯ ಹಿರೇಮಠ ನಾಗನಗೌಡ ಪಾಟೀಲ ಹಾಗೂ ಆರೋಗ್ಯ ಕಾರ್ಯಕರ್ತರಾದ ಅಜರುದ್ದೀನ ಶ್ವೇತಾ. ಅಂಗನವಾಡಿ ಕಾರ್ಯಕರ್ತೆಯರಾದ ಭಾರತಿ ಗುಜಗೊಂಡ.ಸುಧಾ ಗುತ್ತೆದಾರ ಹಾಗೂ ಆಶಾ ಕಾರ್ಯಕರ್ತೆಯರಾದ ಲಕ್ಷ್ಮೀ ಜೇರಟಗಿ ಸಾವಿತ್ರಿ ಕೋರವಾರ ಸೇರಿದಂತೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago