ಕಲಬುರಗಿ: ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಅಭಿವೃದ್ಧಿಗಾಗಿ ವರ್ಷದ ೩೬೫ ದಿನವೂ ಅವಿರತವಾಗಿ ಶ್ರಮಿಸುವುದರ ಜತೆಗೆ ಕನ್ನಡ ಸಾಹಿತ್ಯದ ಸೌಗಂಧವನ್ನು ಜನಸಾಮಾನ್ಯರ ಮನೆ ಬಾಗಿಲಿಗೆ ಕೊಂಡೊಯ್ಯುವುದಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ನಗರದ ಶ್ರೀ ಶರಣಬಸವೇಶ್ವರ ಸಂಸ್ಥಾನದಲ್ಲಿ ತಮ್ಮ ಸಾಂಸ್ಕೃತಿಕ ಬಳಗ ಹಾಗೂ ವಿವಿಧ ಕ್ಷೇತ್ರದ ಪ್ರಮುಖರ ಸಮ್ಮುಖದಲ್ಲಿ ಜರುಗಿದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವೆಂಬರ ೨೧ ರಂದು ನಡೆಯಲಿರುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷದ ೩೬೫ ದಿನವೂ ಒಂದಿಲ್ಲೊಂದು ವಿಶಿಷ್ಟ ಮತ್ತು ವಿಭಿನ್ನ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಹೊಸ ವಾತಾವರಣ ಸೃಷ್ಠಿಸುವುದಾಗಿ ಭರವಸೆ ನೀಡಿದರು.
ಸಮಗ್ರ ಸಮಾಜದ ಪರಿವರ್ತನೆಯನ್ನು ಉದ್ದೇಶಿಸಿ ಯೋಜಿಸಿದ ರಾಜ್ಯ ಮಟ್ಟದ ವಿವಿಧ ಸಾಹಿತ್ಯ ಸಮ್ಮೇಳನಗಳು, ಸಾಹಿತ್ಯ ಸಂಭ್ರಮ, ಪೊಲೀಸ್ ಸಾಹಿತಿಗಳ ಸಮಾವೇಶ, ಶಿಕ್ಷಕ ಸಾಹಿತಿಗಳ ಸಮಾವೇಶ, ಹರಟೆ, ಪತ್ರಕರ್ತರ ವಿಶೇಷ ಕವಿಗೋಷ್ಠಿಗಳು ಸೇರಿದಂತೆ ಈ ನೆಲದ ಇತಿಹಾಸವನ್ನು ಪ್ರತಿಬಿಂಬಿಸುವ ಆಲೋಚನಾಪೂರ್ಣ ಮತ್ತು ಆರೋಗ್ಯಪೂರ್ಣ ಕಾರ್ಯಕ್ರಮಗಳು ಸಾಮಾಜಿಕ ನ್ಯಾಯದ ಚಿಮತನಾ ನೆಲೆಗಟ್ಟಿನಲ್ಲಿ ನಡೆಸಿಕೊಂಡು ಬರಲಾಗಿದೆ. ಈ ರೀತಿಯಾದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರೇರಣೆಯಿಂದಾಗಿ ಸಾರಸ್ವತ ಲೋಕಕ್ಕೆ ಹನ್ನೆರಡು ಕೃತಿಗಳನ್ನು ಸಂಪಾದಿಸಿ, ರಚಿಸಿ ಸಮರ್ಪಿಸಿದ್ದೇನೆ ಎಂದರು.
ಪ್ರಣಾಳಿಕೆ ಬಿಡುಗಡೆಗೊಳಿಸಿದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮಾತೋಶ್ರೀ ದಾಕ್ಷಾಯಣಿ ಡಾ.ಶರಣಬಸವಪ್ಪ ಅಪ್ಪಾ ಅವರು, ಈ ಭಾಗದಲ್ಲಿ ಸಂಘಟಕ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಮಾಡಲು ಮತ್ತು ನುಡಿ ಸೇವೆಗೈಯ್ಯಲು ಕಲಬುರಗಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ತೇಗಲತಿಪ್ಪಿ ಅವರನ್ನು ಬೆಂಬಲಿಸಲಿ ಎಂದು ಹಾರೈಸಿದರು.
ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷರೂ ಆದ ಡಿಸಿಸಿ ಬ್ಯಾಂಕಿನ ನೂತನ ನಿರ್ದೇಶಕ ಕಲ್ಯಾಣಪ್ಪ ಪಾಟೀಲ ಮಳಖೇಡ, ಕನ್ನಡ ಅಭಿವೃದ್ಶಿ ಪ್ರಾಧಿಕಾರದ ಸದಸ್ಯ ಸುರೇಶ ಡಿ.ಬಡಿಗೇರ, ಸಂಶೋಧಕ ಮುಡುಬಿ ಗುಂಡೇರಾವ, ಹಿರಿಯ ಕವಿ ನಾಗೇಂದ್ರಪ್ಪ ಮಾಡ್ಯಾಳೆ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಗುರುಬಸಪ್ಪ ಸಜ್ಜನಶೆಟ್ಟಿ, ಪ್ರಮುಖರಾದ ಜಗದೀಶ ಮರಪಳ್ಳಿ, ಮಾಲಾ ದಣ್ಣೂರ, ಮಾಲಾ ಕಣ್ಣಿ, ಶಿವಲೀಲಾ ತೆಗನೂರ, ಪ್ರಸಾದ ಜೋಷಿ, ಶಿವಶರಣ ಕುಸನೂರ, ಡಾ.ಶರಣರಾಜ್ ಛಪ್ಪರಬಂದಿ, ಪ್ರಭುಲಿಂಗ ಮೂಲಗೆ, ಡಾ.ಬಾಬುರಾವ ಶೇರಿಕಾರ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ವಿದ್ಯಾಸಾಗರ ದೇಶಮುಖ, ಪರಮೇಶ್ವರ ಶಟಕಾರ, ರವೀಂದ್ರಕುಮಾರ ಭಂಟನಳ್ಳಿ, ಪ್ರಸನ್ನ ವಾಂಜರಖೇಡೆ, ಕಲ್ಯಾಣಕುಮಾರ ಶೀಲವಂತ, ಪ್ರಭವ ಪಟ್ಟಣಕರ್, ಶರಣಬಸವ ಜಂಗಿನಮಠ, ಶರಣಬಸಪ್ಪ ನರೂಣಿ, ವಿಶ್ವನಾಥ ತೊಟ್ನಳ್ಳಿ, ಧರ್ಮಣ್ಣ ಧನ್ನಿ, ಶಿವಕುಮಾರ ಸಿ.ಎಚ್., ಆರ್.ಹೆಚ್.ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…