ನಿಶ್ವಾರ್ಥ ಸೇವೆ, ಪ್ರಾಮಾಣಿಕ ಹೋರಾಟಕ್ಕೆ ಮುಂದಾಗಿ: ಕೊರಳ್ಳಿ

ಆಳಂದ: ಕನ್ನಡ ನಾಡು, ನುಡಿ ಗಡಿ ಭಾಗದ ಜನಪರ ಬೇಡಿಕೆಗಾಗಿ ಪ್ರಾಮಾಣಿಕÀತೆ ಮೈಗೂಡಿಸಿಕೊಂಡು ಜನಧ್ವನಿಯಾಗಿ ಹೋರಾಟಕ್ಕೆ ಮುಂದಾಗಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಕೊರಳ್ಳಿ ಅವರು ಹೇಳಿದರು.

ತಾಲೂಕಿನ ಎಲೆನಾವದಗಿ ಗ್ರಾಮದಲ್ಲಿ ಜಯ ಕರ್ನಾಟಕ ವೇದಿಕೆಯ ಗ್ರಾಮ ಶಾಖೆ ಉದ್ಘಾಟನೆ ಕೈಗೊಂಡು ಅವರು ಮಾತನಾಡಿದರು.

ತಾಲೂಕಿನಲ್ಲಿ ಭಷ್ಟ್ರಾಚಾರ ನಿವಾರಣೆ ಮತ್ತು ಕನ್ನಡ ಕಾರ್ಯಕ್ಕೆ ಸದಾ ನಡೆಸಿದ ಹೋರಾಟಕ್ಕೆ ಕಾರ್ಯಕರ್ತರೆ ಆಸ್ತಿಯಾಗಿದ್ದು, ಮುಂದೆಯೂ ಹಳ್ಳಿಯ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಯಾರ ಬೆದರಿಕೆ, ಒತ್ತಡಕ್ಕೆ ಮಣಿಯದೆ ಅನ್ಯಾಯದ ಮತ್ತು ಭ್ರಷ್ಟಾಚಾರ ವಿರುದ್ಧ ಧ್ವನಿಯಾಗಿ ನಿಂತು ಹೋರಾಡಬೇಕು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಮಾದನಹಿಪ್ಪರಗಾ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳು, ಆಳಂದ ಸಂಸ್ಥಾನ ಹಿರೇಮಠದ ಶ್ರೀ ಸಿದ್ದೇಶ್ವರ ಶಿವಾಚಾರ್ಯರು ಆಶೀರ್ವಚನ ನೀಡಿ, ಬಸವರಾಜ ಕೊರಳ್ಳಿ ನೇತೃತ್ವದಲ್ಲಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಜನಪರ ಹೋರಾಟದಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಇನ್ನೂ ಮುಂದೆಯೂ ಸಂಘಟನೆಯ ಉತ್ತಮವಾಗಿ ಬೆಳೆದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಅವರು ಹೇಳಿದರು.

ಮುಖಂಡ ಸಿದ್ಧರೂಢ ಸರಸಂಬಿ, ಆನಂದರಾವ್ ಪಾಟೀಲ, ವೇದಿಕೆಯ ತಾಲೂಕು ಅಧ್ಯಕ್ಷ ನಾಗರಾಜ ಘೋಡಕೆ, ಉಪಾಧ್ಯಕ್ಷ ಸುನೀಲ ಐರೋಡಗಿ, ಕಾರ್ಯದರ್ಶಿ ಶರಣು ಕಲಕರ್ಣಿ, ಮಾದನಹಿಪ್ಪರಗಾ ವಲಯ ಅಧ್ಯಕ್ಷ ಧರೆಪ್ಪ ಜಕಾಪೂರೆ, ನಿಂಬರಗಾ ವಲಯ ಅಧ್ಯಕ್ಷ ನೀಲಕಂಠ, ಉಪನ್ಯಾಸಕ ಸಂಜಯ ಪಾಟೀಲ, ಯುವ ಅಧ್ಯಕ್ಷ ಪ್ರತೀಕ ಆಲೂರೆ ಸೇರಿ ಗ್ರಾಮದ ಪ್ರಮುಖರು ವೇದಿಕೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದೇ ವೇಳೆ ಎಲೆನಾವದಗಿ ಜನಪರ ವೇದಿಕೆಗೆ ಅಧ್ಯಕ್ಷರಾಗಿ ದತ್ತು ಪೂಜಾರಿ, ಉಪಾಧ್ಯಕ್ಷರಾಗಿ ಚಂದ್ರಶೇಖರ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಗಣಪತಿರಾವ್ ಪಾಟೀಲ ಅವರಿಗೆ ನೇಮಕ ಮಾಡಿ ಸನ್ಮಾನಿಸಲಾಯಿತು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿಯಿಂದ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

1 min ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

24 mins ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

2 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

2 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420