ಸುರಪುರ: ಜಾತಿ ಹಂಗು ತೊರೆದು ಪ್ರೇಮಿಗಳಿಬ್ಬರು ವಿವಾಹ ಬಂಧಕ್ಕೊಳಗಾಗಿ ಸರಳವಾಗಿ ಮದುವೆ ಮಾಡಿಕೊಂಡ ಘಟನೆ ನಗರದ ಉಪ ನೊಂದಣಾಧಿಕಾರಿಗಳ ಕಚೇರಿ ಬಳಿ ನಡೆದಿದೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ಮುಖಂಡರ ಸಮ್ಮುಖದಲ್ಲಿ ತಾಲೂಕಿನ ಮುನೀರ್ ಬೊಮ್ಮನಹಳ್ಳಿ ಗ್ರಾಮದ ಯುವತಿ ರೇಣುಕಾ ಹಾಗು ಬಳ್ಳಾರಿಯ ಯುವಕ ಸಂತೋಷ ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.ಇಬ್ಬರ ಪ್ರೀತಿಗೆ ಯಾವುದೇ ಜಾತಿಯ ಗೋಡೆ ಅಡ್ಡಬರದಂತೆ ನೋಡಿಕೊಂಡು ಬುಧವಾರ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಆಹಾರ ಬದಲಾಯಿಸಿಕೊಂಡು ಸರಳವಾಗಿ ಮದುವೆಯಾಗಿದ್ದಾರೆ ಹಾಗು ವಿವಾಹ ನೊಂದಣಿ ಮಾಡಿಸಿಕೊಂಡಿದ್ದಾರೆ.
ವಿವಾಹದ ಕುರಿತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ಜಿಲ್ಲಾ ಉಪ ಪ್ರಧಾನ ಸಂಚಾಲಕ ಮಾಳಪ್ಪ ಕಿರದಹಳ್ಳಿ ಮಾತನಾಡಿ,ಇಬ್ಬರು ಜೋಡಿಗಳು ಯಾವುದೇ ಜಾತಿಯ ಗೊಡವೆಗೆ ಬೀಳದೆ ಪ್ರೇಮಕ್ಕೆ ಒಳಗಾಗಿ ಈಗ ಸರಳವಾಗಿ ಮದುವೆಬಂಧಕ್ಕೆ ಒಳಪಡುವ ಮೂಲಕ ಜಾತಿಯನ್ನು ನಿರ್ಮೂಲನೆಗೊಳಿಸುವ ಸಂದೇಶ ನೀಡಿದ್ದಾರೆ.ಇಬ್ಬರಿಗೂ ಬದುಕಿನಲ್ಲಿ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.ಅಲ್ಲದೆ ಅವರ ಎಲ್ಲ ಸಂದರ್ಭಕ್ಕೂ ನಮ್ಮ ಸಂಘಟನೆ ಅವರ ಜೊತೆಗಿರಲಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಚಾಲಕ ಶರಣಪ್ಪ ತಳವಾರಗೇರಾ,ಮಲ್ಲು ಪರಸನಹಳ್ಳಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…