ಅಗಲಿದ ನಟನಿಗೆ ಶ್ರದ್ಧಾಂಜಲಿ

0
11

ಕೋಲಾರ: ಕನ್ನಡದ ಸುಪ್ರಸಿದ್ಧ, ಸರಳ ಸಜ್ಜನಿಕೆಯ ನಟ ಪುನೀತ್ ರಾಜ ಕುಮಾರ್ ರವರ ನಿಧನದ ಹಿನ್ನೆಲೆ ತಾಲ್ಲೂಕು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಿ ಸಂತಾಪ ಸೂಚಿಸಲಾಯಿತು.

ಕೋಲಾರ ನಗರದ ಹೊಸಬಸ್ ನಿಲ್ದಾಣದ ವೃತ್ತದಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ನಮನ ಸಲ್ಲಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಕರುನಾಡಿನ ಕಣ್ಮಣಿ ಪುನೀತ್ ರಾಜಕುಮಾರ್ ರವರಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ಗೌಡ ನೇತೃತ್ವದಲ್ಲಿ ಮೇಣದಬತ್ತಿ ಬೆಳಗಿಸಿ ಅಗಲಿದ ನಟನಿಗೆ ಸಂತಾಪ ಸೂಚಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪುನೀತ್ ಅಭಿಮಾನಿಗಳು ನೆರೆದಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here