ಆಳಂದ: ತಾಲೂಕಿನ ಖಜೂರಿ ವಲಯದ ಬಬಲೇಶ್ವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೨೦-೨೧ನೇ ಸಾಲಿನ ಎಸ್ಡಿಎಂಸಿ ಹಾಗೂ ಪಾಲಕ-ಪೋಷಕರ ಸಭೆ ನಡೆಯಿತು.
ಸಭೆಯಲ್ಲಿ ಗ್ರಾಪಂ ಸದಸ್ಯ ಮಹಾದೇವ ಕಾಂಬಳೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಸುಧಾರಣೆಗೆ ಸಂಬಂಧಿತ ವಿಷಯಗಳನ್ನು ಪ್ರಸ್ತಾಪಿಸಿದರು. ಸರ್ಕಾರದಿಂದ ಹಾಗೂ ಗ್ರಾಪಂನಿಂದ ಶಾಲೆಗೆ ಬರುವ ಸೌಲಭ್ಯಗಳನ್ನು ಶಾಲೆಯವರು ಪಡೆದು ಮಕ್ಕಳಿಗೆ ವಿತರಿಸಬೇಕು. ಉತ್ತಮವಾಗಿ ಬಿಸಿಯೂಟವನ್ನು ನಿರ್ವಹಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.
ಪ್ರಮುಖ ಬಾಬುರಾವ್ ಸುರವಾಸೆ, ಸಿದ್ಧಪ್ಪ ಸುರವಾಸೆ, ನೀಲಪ್ಪಗೌಡ ಪಾಟೀಲ, ಶ್ರೀಶೈಲ ಗೋಧೆ, ಬಸವರಾಜ ಗೋಧೆ, ಸೋಮಯ್ಯ ಸ್ವಾಮಿ ಮತ್ತು ನಿಜಲಿಂಗಪ್ಪ ಕಾಂಬಳೆ, ಗುಂಡಪ್ಪ ಖಂಡಡಾಳೆ ಮತ್ತು ಶಾಲೆಯ ಮುಖ್ಯ ಶಿಕ್ಷಕ ದತ್ತು ಪೂಜಾರಿ, ಎಸ್ಡಿಎಂಸಿ ಉಪಾಧ್ಯಕ್ಷ ಮಹಾನಂದ ಕಾಂಬಳೆ, ಸದಸ್ಯ ನಿಜಲಿಂಗಪ್ಪ ಗೋಧೆ, ಶಾಂತಯ್ಯ ಸ್ವಾಮಿ, ನೀಲಪ್ಪ ಕಾಂಬಳೆ ಹಾಗೂ ವಿದ್ಯಾರ್ಥಿಗಳ ಪಾಲಕ, ಪೋಷಕರು ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕ ಶಿವರಾಜ ಸ್ವಾಗತಿಸಿದರು. ಶಿಕ್ಷಕ ಶ್ರೀಶೈಲ ನಿರೂಪಿಸಿದರು. ಗ್ರಾಪಂ ಸದಸ್ಯ ರಿಜ್ವಾನ ಶೇಖ ವಂದಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…