ಬಿಸಿ ಬಿಸಿ ಸುದ್ದಿ

ಪುನೀತ್ ಇಲ್ಲದ ಕನ್ನಡ ಚಿತ್ರರಂಗ ಬಡವಾಗಿದೆ: ಸುರೇಶ ಮೆಂಗನ್

ಶಹಾಬಾದ: ಪುನೀತ್ ಇಲ್ಲದ ಕನ್ನಡ ಚಿತ್ರರಂಗ ಬಡವಾಗಿದೆ ಎಂದು ದಲಿತ ಮುಖಂಡ ಸುರೇಶ ಮೆಂಗನ್ ಹೇಳಿದರು.
ಅವರು ಶನಿವಾರ ತಾಲೂಕಿನ ಭಂಕೂರ ಗ್ರಾಮದ ವೃತ್ತದಲ್ಲಿ ಪುನಿತ್ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಪುನಿತ್ ರಾಜಕುಮಾರ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಚಿತ್ರರಂಗದಲ್ಲಿ ಅಪ್ರತಿಮ ಸಾಧಕ ಅಲ್ಲದೆ ನಾಡಿನ ಜನರ ಸೇವೆಗೆ ತಾನೂ ದುಡಿದ ಹಣದಲ್ಲಿಯೇ ಸ್ವಲ್ಪ ಮೀಸಲಿಟ್ಟ ಪ್ರತಿಭಾವಂತ. ಕೊರೊನಾ ಸಂದರ್ಭದಲ್ಲೂ ಜನರ ಆರೋಗ್ಯದ ಹಿತಕ್ಕಾಗಿ ಆಗಿನ ಸಿಎಂ ಯಡಿಯೂರಪ್ಪನವರಿಗೆ ೪೦ ಲಕ್ಷ ರೂ. ನೀಡುವ ಮೂಲಕ ಮಾನವೀಯತೆ ಮೆರೆದಿದ್ದರು. ಇಂತಹ ಅಪರೂಪದ ನಟ ಪುನೀತ್ ಇಲ್ಲ ಎನ್ನುವದು ತುಂಬ ನೋವು ತರಿಸುತ್ತಿದೆ ಎಂದು ಹೇಳಿದರು.

ಸಾಮಾಜಿಕ ಚಿಂತಕ ಈರಣ್ಣ ಕಾರ್ಗಿಲ್ ಮಾತನಾಡಿ,ಬಾಲ್ಯದಲ್ಲಿಯೇ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೇ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ನಟ ಪುನೀತ್ ರಾಜಕುಮಾರ ಆಗಿದ್ದರು. ಪುನೀತ್ ಅವರು ನಾಡಿನಲ್ಲಿ ಅಪಾರ ಸಮಾಜ ಸೇವೆ ಕೈಗೊಂಡಿದ್ದರೂ ಆ ಕುರಿತು ಅವರು ಎಲ್ಲೂ ಪ್ರಚಾರಗಿಟ್ಟಿಸಿಕೊಂಡಿಲ್ಲ. ಇದು ಅವರಲ್ಲಿರುವ ಮೇರುಗುಣಕ್ಕೆ ಸಾಕ್ಷಿ. ಪುನೀತ್ ಅವರು ನಾಡಿನ ಆಸ್ತಿಯಾಗಿದ್ದರೂ ಅವರಿಲ್ಲದ ನಾಡು ದುಃಖದಲ್ಲಿ ಮುಳುಗಿದೆ. ದೇವರು ಅವರ ಕುಟುಂಬಕ್ಕೆ ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪ್ರಕಾಶ ಪಾಟೀಲ, ವಿಜಯಕುಮಾರ ಗುತ್ತೆದಾರ, ಯಲ್ಲಾಲಿಂಗ ಪೂಜಾರಿ, ಭೀಮಯ್ಯ ಗುತ್ತೆದಾರ,ಉಮೇಶ ಗುತ್ತೆದಾರ,ಈರಪ್ಪ ಹೂಗಾರ,ಶಿವಕುಮಾರ ಗುತ್ತೆದಾರ, ಕರಣ್ ಗುತ್ತೆದಾರ,ಶಿವಕುಮಾರ ಭೋಸಗಾ, ಚಂದ್ರಕಾಂತ ಗುತ್ತೆದಾರ, ಬಸವರಾಜ ಗುತ್ತೆದಾರ,ಶಿವಕುಮಾರ ಭಜಂತ್ರಿ, ಬಸವರಾಜ ಜಾಮಗೊಂಡ ಇತರರು ಇದ್ದರು.

ಮುಂಚಿತವಾಗಿ ಎರಡು ನಿಮಿ? ಮೌನಾಚರಣೆ ಮಾಡುವ ಮೂಲಕ ಪುನೀತ್ ಅವರ ಆತ್ಮಕ್ಕೆ ಶಾಂತಿ ಕೋರಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago