ರಾಜ್ಯೋತ್ಸವ ನಿಮಿತ್ತ ಸಪ್ನ ಬುಕ್ ಹೌಸ್ ನಲ್ಲಿ ಹಲವು ರಿಯಾಯಿತಿ ಯೋಜನೆ, ಕಾರ್ಯಕ್ರಮಗಳು

ಕಲಬುರಗಿ: ಸಪ್ನ ಕನ್ನಡ ನಾಡಿನ ಜನಪ್ರಿಯ ಪುಸ್ತಕ ಭಂಡಾರ. ಇದು ಪುಸ್ತಕಗಳಿಗಷ್ಟೇ ಸೀಮಿತವಾಗದೇ, ಶಿಕ್ಷಣಕ್ಕೆ ಸಂಬಂಧಪಟ್ಟ ಪೂರಕ ಸಾಮಗ್ರಿಗಳಿಗೂ ಹೆಸರುವಾಸಿ. ಪ್ರತಿ ಬಾರಿಯೂ ಈ ಪುಸ್ತಕ ಭಂಡಾರ ರಾಜ್ಯೋತ್ಸವದ ತಿಂಗಳಿನಲ್ಲಿ ಕನ್ನಡದ ಓದುಗರಿಗಾಗಿ ತನ್ನೆಲ್ಲಾ ಶಾಖೆಗಳಲ್ಲೂ ಕೆಲವು ಜನಪ್ರಿಯ ಯೋಜನೆಗಳನ್ನು ನೀಡುತ್ತಾ ಬಂದಿದೆ. ಈ ಬಾರಿ ಸಹ ಗ್ರಾಹಕರಿಗೆ ಮತ್ತು ಓದುಗರಿಗೆ ಹಲವು ಆಕರ್ಶಕ ಯೋಜನೆಗಳು ಮತ್ತು ಕಾರ್ಯಕ್ರಮ ನೀಡಲು ಮುಂದಾಗಿದೆ.

ರಿಯಾಯಿತಿ ನವೆಂಬರ್ ತಿಂಗಳಿನಲ್ಲಿ ಕನ್ನಡ ಪುಸ್ತಕಗಳಿಗೆ ನಮ್ಮ ಎಲ್ಲಾ ಶಾಖೆಗಳಲ್ಲೂ ವಿಶೇಷವಾಗಿ ಶೇ.10%ರಿಂದ 20%ರಷ್ಟು ರಿಯಾಯಿತಿಯನ್ನು ಕನ್ನಡ ಪುಸ್ತಕ ಪ್ರಿಯರಿಗೆ ಸಪ್ನ ನೀಡುತ್ತಿದೆ.

ಸಪ್ನ ಸದಸ್ಯರ  ಕಾರ್ಡ್ ನವೆಂಬರ್ ತಿಂಗಳಿನಲ್ಲಿ ಕೊಳ್ಳುವ ಪ್ರತಿ ರೂ. 200 ಮೌಲ್ಯದ ನಿವ್ವಳ ಬೆಲೆಗೆ ಈ ಕಾರ್ಡನ್ನು ಗ್ರಾಹಕರಿಗೆ ಕೊಡಲಾಗುತ್ತದೆ. ಇದರಿಂದ ಒಂದು ವರ್ಷದ ಅವಧಿಗೆ ಪುಸ್ತಕ ಪ್ರೇಮಿಗಳು ಕನ್ನಡ ಪುಸ್ತಕಳ ಮೇಲೆ ಯಾವುದೇ ಶಾಖೆಯಲ್ಲಾಗಲೀ ಶೇ.10% ರಷ್ಟು ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಓದುಗರ ಆಯ್ಕೆ ಸಮೃದ್ಧ ಬೆಳೆ ಈ ವಿಶೇಷ ಪುಸ್ತಕ ಪ್ರದರ್ಶನ ವಿಭಾಗದಲ್ಲಿ ಕೆಲವು ಜನಪ್ರಿಯ ಕೃತಿಗಳಿಗೆ ಶೇ.15%ರಷ್ಟು ರಿಯಾಯಿತಿಯನ್ನು ನವೆಂಬರ್ ತಿಂಗಳಿನಾದ್ಯAತ ನಮ್ಮ ಎಲ್ಲಾ ಶಾಖೆಗಳಲ್ಲೂ ನೀಡಲಾಗುತ್ತದೆ.

ಸಪ್ನ ಪ್ರಕಟಣೆಗಳಿಗೆ ಶೇ. 20% ರಿಯಾಯಿತಿ ನವೆಂಬರ್ ತಿಂಗಳಿನಾದ್ಯAತ ಸಪ್ನ ಪ್ರಕಟಿಸಿರುವ ತನ್ನ ಎಲ್ಲಾ ಕನ್ನಡ ಪ್ರಕಟಣೆಗಳಿಗೆ ಶೇ.20% ವಿಶೇಷ ರಿಯಾಯಿತಿಯನ್ನು ಎಲ್ಲಾ ಶಾಖೆಗಳಲ್ಲೂ ನೀಡಲಾಗುವುದು.

ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಗಳು ನವೆಂಬರ್ ತಿಂಗಳಿನ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಸಪ್ನ ಬುಕ್ ಹೌಸ್ ಕಲಬುರಗಿ ಶಾಖೆಯಲ್ಲಿ ಗ್ರಾಹಕರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

3 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

3 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420