ಭಾಲ್ಕಿ: ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಅವರಿಂದ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮದಲ್ಲಿ ೨೦೨೧ ರ ನವೆಂಬರ್ ೪ ರಿಂದ ಒಂದು ತಿಂಗಳು ಪರ್ಯಂತ ಪ್ರತಿದಿನ ಬೆಳಿಗ್ಗೆ ೬-೩೦ ರಿಂದ ೭-೩೦ ರವರೆಗೆ ಆಧ್ಯಾತ್ಮಿಕ ಪ್ರವಚನ ಏರ್ಪಡಿಸಲಾಗಿದ್ದು, ಪೂರ್ವಭಾವಿಯಾಗಿ ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯಸನ್ನಿಧಾನದಲ್ಲಿ ಬಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು.
ವಿಜಯಪುರದ ಶ್ರೀ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳು ಸರ್ವಧರ್ಮ ದರ್ಶನಗಳ ಸಾರವನ್ನೆಲ್ಲ ಅರಗಿಸಿಕೊಂಡಿರುವ ಮಹಾನುಭಾವಿಗಳು ನಡೆ-ನುಡಿಗಳನ್ನು ಒಂದಾಗಿಸಿಕೊಂಡು ಆದರ್ಶ ಜೀವನ ನಡೆಸುವವರು. ಇಂತಹ ಪೂಜ್ಯರ ಆದ್ಯಾತ್ಮಿಕ ಪ್ರವಚನ ತಿಂಗಳ ಪರ್ಯಂತ ನಡೆಯಲಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಲು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು. ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು, ಪೂಜ್ಯ ಶ್ರೀ ಮಹಾಲಿಂಗ ಸ್ವಾಮಿಗಳು ಉಪಸ್ಥಿತರಿದ್ದರು.
ಶರಣ ಸೋಮನಾಥಪ್ಪ ಅಷ್ಟೂರೆ, ಶರಣ ಸುಭಾಷ ಕಾರಾಮುಂಗೆ, ಶರಣ ಉಮಾಕಾಂತ ವಾರದ, ಶರಣ ಬಸವ ವಂಕೆ, ಶರಣ ಚನ್ನಬಸವಣ್ಣ ಬಳತೆ, ಶರಣ ಪ್ರಸನ್ನ ಖಂಡ್ರೆ, ಶರಣ ಸಾಗರ ಖಂಡ್ರೆ, ಶರಣ ಶಶಿಧರ ಕೋಸಂಬೆ, ಶರಣ ಸಾಗರ ಮಾಲಾನಿ, ಶರಣ ಗಣಪತಿ ಬೋಚರೆ, ಶರಣ ಬಂಡೆಪ್ಪ ಕಾರಾಮುಂಗೆ ಮುಂತಾದವರು ಉಪಸ್ಥಿತರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…