ಕಲಬುರಗಿ: ಎಐಎಂಐಎಂ ಪಕ್ಷದ ಭಾವಿ ವಿಧಾನ ಸಭೆಯ ಅಭ್ಯರ್ಥಿ ಇಲಿಯಾಜ್ ಸೇಠ್ ಬಾಗಬಾನ್ ಸಮ್ಮುಖದಲ್ಲಿ ಹಲವು ಕಾಂಗ್ರೆಸ್ ಮುಖಂಡರು ಪಕ್ಷ ತೊರೆದು ಎಐಎಂಐಎಂ ಪಕ್ಷಕ್ಕೆ ಸೇರ್ಪಡೆಯಾದರು.
ಕಲಬುರಗಿ ಉತ್ತರ ಮತ ಯುವ ಅಧ್ಯಕ್ಷರಾಗಿ ಅಜೀಮ್ ಶೇಕ್ ಹಾಗೂ ಶಹಾಬಜಾರ್ ಬ್ಲಾಕ್ ಅಧ್ಯಕ್ಷರಾಗಿ ಮೊದ್ದೀನ್ ಪಟೇಲ್ ಅಣಬಿ ಅವರನ್ನು ಸ್ಥಾನಗಳಿಗೆ ನೇಮಕ ಮಾಡಿ ಪಕ್ಷದ ಶಾಲು ಹೊದಿಸುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಮೊದೀನ್ ಪಟೇಲ್ ಕಲಬುರಗಿ ಕಾಂಗ್ರೆಸ್ ಸಮಿತಿಯ ಜನರಲ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.
ಮೊದ್ದೀನ್ ಪಟೇಲ್ ಮಾತನಾಡಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಾಕರ್ತರಿಗೆ ಯಾವುದೇ ಬೆಲೆ ನೀಡುತ್ತಿಲ್ಲ. ಸ್ವಾರ್ಥಕ್ಕಾಗಿ ಕಾರ್ಯಾಕರ್ತರನ್ನು ಬಳಸಿಕೊಂಡು ಸುಳ್ಳು ಆಶ್ವಾಸನೆಗಳು ನೀಡಿ ದೂರ ತಳ್ಳಲಾಗುತ್ತಿರುವುದಕ್ಕೆ ಮನೊಂದು ಪಕ್ಷ ತೊರೆದಿದ್ದೇನೆ. ಮುಂದಿನದಿನಗಳಲ್ಲಿ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಮಹಾವನಗರ ಪಾಲಿಕೆಯ ಮಾಜಿ ಮಹಾಪೌರ, ಎಐಎಂಐಎಂ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಇಕ್ಬಾಲ್ ಅಹ್ಮದ್ ಸಿನ್ನಿಫರೋಶ್ ಹಲವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…