ಹಾನಗಲ್: ಬಿಜೆಪಿ ಅಭ್ಯರ್ಥಿ ಹೀನಾಯವಾಗಿ ಸೋಲಿಗೆ ಕಾರಣ ಏನು.!?

# ಕೆ.ಶಿವು.ಲಕ್ಕಣ್ಣವರ

# ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೀನಾಯವಾಗಿ ಸೋಲಿಗೆ ಕಾರಣವಾದರೂ ಏನು.!?
ಹಾಗೂ ಕಾಂಗ್ರೆಸ್ ನ ಶ್ರೀನಿವಾಸ ಮಾನೆಯವರ ಗೆಲುವಿನ ಕಾರಣಗಳು ಹಲವಾರೂ..!

ನಿರೀಕ್ಷೆಯಂತೆ ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಅಭೂತಪೂರ್ವ ಗೆಲವು ಸಾಧಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಅದರಲ್ಲಿಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾನಗಲ್ ಉಪಚುನಾವಣೆಯ ಸೋಲು ಅತ್ಯಂತ ದೊಡ್ಡ ಹಿನ್ನಡೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಉಪಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ.

# ವಿಜಯಪುರದ ಸಿಂದಗಿಯಲ್ಲಿ ಭರ್ಜರಿ ಜಯಗಳಿಸಿದ ಬಿಜೆಪಿ, ಹಾನಗಲ್‌ನಲ್ಲಿ ಸೋಲು ಕಾಣಲು ಹಲವು ಕಾರಣಗಳಿವೆ.

ಅವುಗಳೆಂದರೆ ಮುಖ್ಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸತತ ಪ್ರಚಾರದ ಬಳಿಕವೂ ಹಾನಗಲ್‌ನಲ್ಲಿ ಬಿಜೆಪಿ ಸೋತಿದೆ. ಇಡೀ ಸರ್ಕಾರವೇ ಹಾನಗಲ್‌ನಲ್ಲಿ ಬೀಡು ಬಿಟ್ಟಿತ್ತು. ಅದರಲ್ಲಿಯೂ ಬಿಜೆಪಿಗೆ ವಲಸೆ ಬಂದು ಮುಖ್ಯಮಂತ್ರಿಯಾದ ಬಸರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾದವರು ಹಾನಗಲ್‌ನಲ್ಲಿಯೇ ಉಳಿದುಕೊಂಡು ಪ್ರಚಾರ ನಡೆಸಿದ್ದರು.

ಇಷ್ಟೆಲ್ಲ ಶಕ್ತಿ ಇದ್ದಾಗಲೂ ಹಾನಗಲ್‌ನಲ್ಲಿ ಬಿಜೆಪಿ ಸೋತಿದೆ. ಆ ಮೂಲಕ ಹಾನಗಲ್ ಕ್ಷೇತ್ರದ ಮತದಾರರು ಪ್ರಜ್ಞಾವಂತರು ಎಂಬುದನ್ನೂ ನಾಡಿಗೆ ತೋರಿಸಿ ಕೊಟ್ಟಿದ್ದಾರೆ ಎನ್ನಲು ಕಾರಣಗಳೇನು? ಜೊತೆಗೆ ಬಿಜೆಪಿ ಸೋಲಿಗೆ ಕಾರಣಗಳೇನು? ಮುಂದಿದೆ ಸಂಪೂರ್ಣ ಇಲ್ಲಿದೆ ಮುಂದಿನ ವಿವರವೂ..!

# ಕೊನೆಯ ಕ್ಷಣದಲ್ಲಿ ಪ್ರಯತ್ನ ನಡೆಸಿದ್ದ ಯಡಿಯೂರಪ್ಪರೂ..? —

ಮಾಜಿ ಸಚಿವ ದಿ.ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿದ್ದ ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಚುನಾವಣೆ ಎದುರಿಸುವಲ್ಲಿ ಪ್ರತಿ ಹಂತದಲ್ಲಿಯೂ ಸೋಲಿನ ಮುನ್ಸೂಚನೆ ಕಂಡು ಬಂದಿತ್ತು. ಹೀಗಾಗಿಯೇ ಬಹಿರಂಗ ಪ್ರಚಾರದ ಕೊನೆ ಕ್ಷಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಒತ್ತಾಯ ಮಾಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಶಿಕಾರಿಪುರದಿಂದ ಕರೆಯಿಸಿಕೊಂಡು ಹಾನಗಲ್‌ನಲ್ಲಿ ರೋಡ್‌ ಶೋ ಮಾಡಿಸಿದ್ದರು. ಆ ಮೂಲಕ ಮತದಾರರ ಮನ ಸೆಳೆಯಲು ಅಂತಿಮ ಪ್ರಯತ್ನ ನಡೆಸಿದ್ದರು. ಬಹುಶಃ ಆಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೋಲಿನ ಮುನ್ಸೂಚನೆ ಸಿಕ್ಕಿತ್ತು.

ಹೀಗಾಗಿ ಪಕ್ಕದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಗುವ ಹಿನ್ನಡೆಯೆಂದೆ ಭಾವಿಸಿ ಯಡಿಯೂರಪ್ಪ ಅವರೂ ಹಾನಗಲ್‌ಗೆ ಬಂದು ರೋಡ್‌ ಶೋ ನಡೆಸಿದ್ದರು. ಆದರೆ ಮತದಾರರು ಯಡಿಯೂರಪ್ಪ ಅವರ ಮನವಿಗೂ ಮಣೆ ಹಾಕಿಲ್ಲ. ಅದಕ್ಕೆ ಕಾರಣಗಳು ಹಲವಿವೆ..!

# ಅಭ್ಯರ್ಥಿ ಆಯ್ಕೆಯಲ್ಲಿ ಎಡವಿದ್ದ ಬಿಜೆಪಿ ಹೈಕಮಾಂಡೂ..!

ಹಾನಗಲ್ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಯಲ್ಲಿಯೇ ಬಿಜೆಪಿ ಎಡವಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶ್ರೀನಿವಾಸ ಮಾನೆ ಅವರೂ ಹೊರಗಿನವರೇ. ಆದರೆ ಕ್ಷೇತ್ರದ ಮತದಾರರಿಗೆ ಮಾನೆ ಹೊರಗಿನವರು ಎಂಬ ಭಾವನೆ ಬರದಂತೆ ಕಳೆದ ನಾಲ್ಕೈದು ವರ್ಷಗಳಿಂದ ಅಲ್ಲಿಯೇ ಉಳಿದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂಧಿಸುತ್ತಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಅವರು ಚುನಾವಣೆಯಲ್ಲಿ ಗೆದ್ದು ಶಾಸಕರಾಗಲು ಬಂದವರು ಎಂಬ ಭಾವನೆ ಕ್ಷೇತ್ರದ ಮತದಾರರಲ್ಲಿ ಬಂದಿತ್ತು.

ಅದೂ ಕೂಡ ಬಿಜೆಪಿ ಸೋಲಿಗೆ ಪ್ರಮುಖ ಕಾರಣವಾಗಿದೆ. ಜೊತೆಗೆ ಶಿವರಾಜ ಸಜ್ಜನರ್ ಮೇಲಿದ್ದ ಹಾವೇರಿ ಜಿಲ್ಲೆ ಅದರಲ್ಲಿಯೂ ಹಾನಗಲ್ ತಾಲೂಕಿನ ಕಬ್ಬು ಬೆಳೆಗಾರರ ಸಿಟ್ಟು ಬಿಜೆಪಿ ಮೇಲೆ ತಿರುಗಿತ್ತು. ಅದಕ್ಕೆ ಕಾರಣವಾಗಿದ್ದು, ಸಂಗೂರು ಸಹಕಾರಿ ಸಕ್ಕರೆ ಕಾರ್ಖಾನೆ ದಿವಾಳಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ರೈತರು.

# ಶಿವರಾಜ ಸಜ್ಜನರ್‌ಗೆ ತಟ್ಟಿತಾ ಕಬ್ಬು ಬೆಳೆಗಾರರ ಶಾಪ..?

ಕಳೆದ ಎರಡು ದಶಕಗಳ ಹಿಂದೆ ಸಂಗೂರು ಸಹಕಾರಿ ಸಕ್ಕರೆ ಕಾರ್ಖಾನೆ ದಿವಾಳಿ ಆಗಲು ಹಾಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ್ ಕಾರಣ ಎಂಬ ಅಸಮಾಧಾನ ತಾಲೂಕಿನ ರೈತರಲ್ಲಿತ್ತು. ಆದರೆ ಅದನ್ನು ಗಣನೆಗೆ ತೆಗೆದುಕೊಳ್ಳದೇ ಶಿವರಾಜ ಸಜ್ಜನರ್ ಅವರನ್ನು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ಕಣಕ್ಕಿಳಿಸಿದ್ದು ಮತ್ತೊಂದು ಕಾರಣವಸಗಿದೆ.

ಸಂಗೂರು ಸಕ್ಕರೆ ಕಾರ್ಖಾನೆ ದಿವಾಳಿಯಾದಾಗ ನಿಜಕ್ಕೂ ಸಂಕಷ್ಟಕ್ಕೆ ಒಳಗಾಗಿದ್ದು ಹಾಗನಲ್ ತಾಲೂಕಿನ ದೊಡ್ಡ, ಸಣ್ಣ ಹಾಗೂ ಅತಿಚಿಕ್ಕ ರೈತರು. ಆಗ ಕಬ್ಬು ಹಾಗೂ ಬತ್ತದ ಹಾನಗಲ್ ತಾಲೂಕಿನ ಪ್ರಮುಖ ಬೆಳೆಗಳಾಗಿದ್ದವು. ರೈತರು ಕಬ್ಬು ಬೆಳೆಯುವದರೊಂದಿಗೆ ಆರ್ಥಿಕವಾಗಿ ಸ್ವಲ್ಪವೇ ಚೇತರಿಸಿಕೊಳ್ಳುತ್ತಿದ್ದರು. ಆದರೆ ಅದಕ್ಕೆ ಕಲ್ಲಿ ಹಾಕಿದ್ದು ಶಿವರಾಜ ಸಜ್ಜನರ್ ಎಂಬ ಆರೋಪವನ್ನೂ ಈಗಲೂ ರೈತರು ಮಾಡುತ್ತಾರೆ. ಇದು ಕೂಡ ಬಿಜೆಪಿ ಸೋಲಿಗೆ ಮತ್ತೊಂದು ಪ್ರಮುಖ ಕಾರಣವಾಯಿತು.

# ಕೊರೊನಾ ವೈರಸ್‌ ಸಂಕಷ್ಟದಲ್ಲಿ ಜನರೊಂದಿಗಿದ್ದ ಮಾನೆಯೂ..!

ಜೊತೆಗೆ ಕೊರೊನಾ ವೈರಸ್ ಕೂಡ ಬಿಜೆಪಿ ಸೋಲಿಗೆ ಮತ್ತೊಂದು ಕಾರಣವಾಗಿದೆ. ಅದರೊಂದಿಗೆ ಲಿಂಗಾಯತ ಮತಗಳು ವಿಭಜನೆ ಆಗಿರುವುದು ಮೇಲ್ನೋಟಕ್ಕೇ ಕಂಡು ಬಂದಿದೆ. ಕೊರೊನಾ ವೈರಸ್ ಸಂಕಷ್ಟ ಕಾಲದಲ್ಲಿ ಸಿ.ಎಂ.ಉದಾಸಿ ಅವರೂ ಕೂಡ ಅನಾರೋಗ್ಯಕ್ಕೆ ಒಳಗಾಗಿದ್ದರು.

ಹೀಗಾಗಿ ಸಂಸದ ಶಿವಕುಮಾರ್ ಉದಾಸಿ ಅವರು ಸಹಜವಾಗಿಯೇ ತಮ್ಮ ತಂದೆ ಸಿ.ಎಂ.ಉದಾಸಿ ಅವರನ್ನು ನೋಡಿಕೊಳ್ಳಲು ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದರು. ಆಗ ಅಕ್ಷರಶಃ ಅನಾಥರಾಗಿದ್ದು ಹಾನಗಲ್ ತಾಲೂಕಿನ ಜನರು. ಇಡೀ ತಾಲೂಕಿನಲ್ಲಿ ಹೇಳುವವರು, ಕೇಳುವವರು ಇಲ್ಲದಂತಾಗಿದೆ ಜನರು ತೀವ್ರತರವಾದ ಸಮಸ್ಯೆಗಳನ್ನು ಎದುರಿಸಿದ್ದರು..!

# ಜನರಿಗೆ ಸಹಾಯ ಹಸ್ತ, ಲಿಂಗಾಯತ ಮತಗಳ ವಿಭಜನೆಯೂ..!

ಆಗ ಜನ-ಸಾಮಾನ್ಯರ ಸಹಾಯಕ್ಕೆ ನಿಂತಿದ್ದು ಶ್ರೀನಿವಾಸ ಮಾನೆ ಅವರು ಮಾತ್ರ. ಕೊರೊನಾ ಎರಡು ಅಲೆಗಳ ಸಂಕಷ್ಟದ ಕಾಲದಲ್ಲಿ ತಾಲೂಕಿನ ಬಡ ಜನರ ಕಷ್ಟಕ್ಕೆ ಸ್ಪಂದಿಸಿದ್ದು, ಮೇಲ್ವರ್ಗದ ಜನರಿಗೆ ಆಸ್ಪತ್ರೆ ಅನುಕೂಲ ಮಾಡಿಕೊಟ್ಟಿದ್ದು, ಜೊತೆಗೆ ಆಹಾರವಿಲ್ಲವದವರಿಗೆ ಆಹಾರ ಕೊಟ್ಟಿದ್ದನ್ನು ಜನರು ಮರೆಯಲಿಲ್ಲ.

ತಮ್ಮ ಮತಗಳನ್ನು ಶ್ರೀನಿವಾಸ ಮಾನೆ ಅವರಿಗೆ ಕೊಡುವ ಮೂಲಕ ಹಾನಗಲ್ ಜನರು ಕೃತಜ್ಞತೆ ಮೆರೆದಿದ್ದಾರೆ ಎನ್ನಬಹುದಾಗಿದೆ. ಜೊತೆಗೆ ಮೊದಲ ಬಾರಿ ಕ್ಷೇತ್ರದಲ್ಲಿ ಲಿಂಗಾಯತ ಮತಗಳು ವಿಭಜನೆ ಆಗಿವೆ. ಪಂಚಮಸಾಲಿ ಲಿಂಗಾಯತ ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೋಗಿವೆ. ಈ ಎಲ್ಲ ಕಾರಣಗಳಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆದ್ದಿದ್ದಾರೆ ಎಂಬ ವಿಶ್ಲೇಷಣೆಯು‌ ಸುಳ್ಳಲ್ಲ.

ಹಾನಗಲ್‌ ಉಪ ಚುನಾವಣೆಯಲ್ಲಿ ತಮ್ಮ ಗೆಲುವಿನ ಕುರಿತು ಪ್ರತಿಕ್ರಿಯೆ ಕೊಟ್ಟಿರುವ ಶ್ರೀನಿವಾಸ ಮಾನೆ ಅವರು, “ಹಾನಗಲ್‌ನಲ್ಲಿ ಜನಬಲ ಗೆದ್ದಿದೆ. ಹಣ ಬಲ ಸೋತಿದೆ. ಹಾನಗಲ್ ಜನರಿಗೆ ಶಿರಸಾಷ್ಟಾಂಗ ನಮಸ್ಕಾರ ಸಲ್ಲಿಸುವೆ. ನಮ್ಮ ನಾಯಕರೂ ಪರಿಶ್ರಮ ಹಾಕಿದ್ದಾರೆ. ಸರ್ಕಾರದ ತಂತ್ರಗಳೆಲ್ಲಾ ಮಣಿಸಿದ್ದಾರೆ.

ಜನರು ಸರ್ಕಾರದ ಜನವಿರೋಧಿ ನೀತಿಗಳಿಂದ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ. ಇನ್ನಾದ್ರು ಜನರ ಕಲ್ಯಾಣ ಮಾಡಲಿ ಬಿಜೆಪಿ ಸರ್ಕಾರ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ ಕೂಡ” ಜನಪರವಾಗಿ ಹೇಳಿದ್ದಾರೆ ಕಾಂಗ್ರೆಸ್ ನ‌ ಶ್ರೀನಿವಾಸ ಮನೆಯವರು..!

ಇದು ಮುಖ್ಯವಾದ ವಿಷಯವಾಗಿದೆ. ಇನ್ನಾದರೂ ಈ ನರೇಂದ್ರ ಮೋದಿಯವರ ಬಿಜೆಪಿ ಸರ್ಕಾರದ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಶ್ರೀನಿವಾಸ ಮಾನೆ ಗೆಲುವಿನ ಧರ್ಮವನ್ನು ಮತ್ತು ಮರ್ಮವನ್ನೂ ಅರಿಯಲಿ ಎಂಬುದೇ ಈ ಸುದ್ದಿ ಜಾಲದ ಕಳಕಳಿ ಮತ್ತು ಕಾಳಜಿಯಾಗಿದೆಯೂ..!

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420