ನೀರು ತುಂಬಿದ್ದ ತಗ್ಗು ಗುಂಡಿಯಲ್ಲಿ ಮುಳುಗಿ ಮೂವರು ಬಾಲಕರ ದುರ್ಮರಣ

0
27

ಕಲಬುರಗಿ: ಮನೆ ಕಟ್ಟಲು ಹಾಕಿರುವ ಅಡಿಪಾಯದ ತಗ್ಗು ಗುಂಡಿಯಲ್ಲಿ ಈಜಾಡಲು ಹೋಗಿ ಮೂವರು ಬಾಲಕರು ಸಾವನಪ್ಪಿರುವ ಘಟನೆ ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದರ್ಶನ್ (12), ಪ್ರಶಾಂತ (10), ವಿಘ್ನೇಶ್ (9) ಮೃತಪಟ್ಟ ಬಾಲಕುರು ಎಂದು ಗುರುತಿಸಲಾಗಿದ್ದು, ಲಾಲಗಿರಿ ಕ್ರಾಸ್ ಹತ್ತಿರದ ಮಹಾಲಕ್ಷ್ಮಿ ಲೇಔಟ್ನಲ್ಲಿ ಮನೆ ಕಟ್ಟುವುದಕ್ಕೆ ಕಾಲಮ್ ಹಾಕಿ ತಗ್ಗು ತೋಡಲಾಗಿತ್ತು. ಕಳೆದ ರಾತ್ರಿ ಸುರಿದ ಧಾರಕಾರ ಮಳೆಯಿಂದ ತಗ್ಗುಗುಂಡಿ ಜಲಾವೃತವಾಗಿತ್ತು. ಇದರಲ್ಲಿ ಮೂವರು ಈಜಾಡಲು ಹೋಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಘಟನಾ ಸ್ಥಳಕ್ಕೆ ನ್ಯೂ ರಾಘವೇಂದ್ರ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರ ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here