ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಪದಾಧಿಕಾರಿ ಆಯ್ಕೆ

0
75

ಶಹಾಬಾದ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಶಹಾಬಾದ ತಾಲೂಕಾ ಅಧ್ಯಕ್ಷರನ್ನಾಗಿ ಮುತ್ತಗಾ ಗ್ರಾಮದ ಮಲ್ಲಿಕಾರ್ಜುನ ದೂಳಪ್ಪಾ ಅವರನ್ನು ಹಾಗೂ ಉಪಾಧ್ಯಕ್ಷರನ್ನಾಗಿ ಮೆಹಬೂಬ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ.ಬಿ.ಪಾಟೀಲ ಹೇಳಿದರು.

ಅವರು ರವಿವಾರ ನಗರದ ಶರಣಬಸವೇಶ್ವರ ದೇವಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಆಯೋಜಿಸಲಾದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದರು.

Contact Your\'s Advertisement; 9902492681

ರೈತ ಸಂಘದ ರಾಜ್ಯಧ್ಯಕ್ಷರಾದ ಕೊಡಿ ಹಳ್ಳಿ ಚಂದ್ರಶೇಖರ ಅವರ ಆದೇಶದ ಮೇರೆಗೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಇಬ್ಬರು ಯುವಕರು ರೈತರ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಬೇಕಿದೆ. ರೈತರ ಕಷ್ಟಗಳು, ಸಮಸ್ಯೆಗಳನ್ನು ಅರಿತು ಹೋರಾಟ ಮಾಡುವುದರ ಮೂಲಕ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಆಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸ್ಸುಗೌಡ ಬಿರಾದಾರ ಗಂವ್ಹಾರ, ಜಿಲ್ಲಾ ಪ್ರಧಾಣ ಕಾರ್ಯದರ್ಶಿ ಅಲ್ಲಾ ಪಟೇಲ್ ಮಾಲಿ ಬಿರಾದಾರ ಇಜೇರಿ, ಜಿಲ್ಲಾ ಸಂಚಾಲಕ ಮರೆಪ್ಪ ಹಸನಾಪೂರ,ಮಲ್ಕಣ್ಣ ಮುದ್ದಾ, ಮಲ್ಲುಗೌಡ ಹೊನಗುಂಟಿ, ಸೂರ್ಯಕಾಂತ ಕೆಂಚಗುಂಡ,ಮಲ್ಲಿನಾಥ ಮಾಲಿ ಪಾಟೀಲ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here