ಬಿಸಿ ಬಿಸಿ ಸುದ್ದಿ

ಅಂತರ್ಜಲ ಹೆಚ್ಚಳಕ್ಕೆ ೫೦ ಕೋಟಿ ವೆಚ್ಚದಲ್ಲಿ ಕೆರೆಗಳ ನಿರ್ಮಾಣ: ಗುತ್ತೇದಾರ

ಆಳಂದ: ತಾಲೂಕಿನ ವಿವಿಧಡೆ ಹೊಸ ಹಾಗೂ ಹಳೆಯ ಕೆರೆಗಳ ಪುನರ ನಿರ್ಮಾಣಕ್ಕೆ ಸುಮಾರು ೫೦ ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳುವ ಮೂಲಕ ಜನ ಜಾನುವಾರುಗಳುಗಳಿಗೆ ಬೇಸಿಗೆಯಲ್ಲಿ ನೀರಿನ ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಸುಭಾಷ ಗುತ್ತೇದಾರ ಅವರು ಹೇಳಿದರು.

ತಾಲೂಕಿನ ಮಂಟಕಿ ಗ್ರಾಮದಲ್ಲಿ ಕೆಕೆಆರ್‌ಡಿಬಿ ೨ ಕೋಟಿ ರೂಪಾಯಿ ಅನುದಾನದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆಯ ಹಳೆಯ ಕೆರೆಯ ಪುನರ ನಿರ್ಮಾಣ ಕಾಮಗರಿಗೆ ಭೂಮಿ ಪೂಜೆ ಕೈಗೊಂಡು ಅವರು ಮಾತನಾಡಿದರು.

ತಾಲೂಕಿನಲ್ಲಿ ಎಲ್ಲಡೆ ಕೆರೆಗಳ ನಿರ್ಮಾಣಕ್ಕೆ ಪೂರಕ ವಾತಾವರಣವಿದೆ. ಆದರೆ ಸರ್ಕಾರದ ಅನುದಾನ ಬಂದಂತೆ ಕಾಮಗಾರಿಗೆ ಒತ್ತು ನೀಡಲಾಗುವುದು. ಕೆರೆ ನಿರ್ಮಾಣದಿಂದ ಅಂತರ್ಜಲ ಹೆಚ್ಚಳ ಕೃಷಿಗೆ ವರವಾಗುವ ಜೋತೆಗೆ ಕುಡಿಯುವ ನೀರಿನ ಮೂಲಗಳಿಗೆ ಅನುಕೂಲವಾಗಲಿದೆ. ಭೂಮಿ ನೀಡಲು ಮುಂದಾಗುವ ಗ್ರಾಮಗಳಲ್ಲಿ ಕೆರೆಗಳಿಗೆ ಒತ್ತು ನೀಡಲಾಗುವುದು ಎಂದರು.

ಮಂಟಕಿ ಕೆರೆ ಎರಡು ಬಾರಿ ಒಡೆದು ರೈತರ ಜಮೀನು, ಬೆಳೆ ನಷ್ಟವಾಗಿದೆ. ಈ ಬಾರಿ ಕಾಮಗಾರಿ ಗುಣಮಟ್ಟದಿಂದ ಕೈಗೊಳ್ಳಬೇಕು. ಕೆರೆಯ ಹೂಳೆತ್ತುವುದು ಸೇರಿ ಒಡ್ಡಿನ ಇನಷ್ಟು ಎತ್ತರಕ್ಕೆ ಅನುಮದಾನ ಬೇಕಾದರೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ನಿಂಬರಗಾದಲ್ಲಿ ೨.೫೦ ಕೋಟಿ, ತಡಕಲ್ ೩.೫೦ ಕೋಟಿ, ಕಲವಗಾ, ಒಳವಂಡವಾಡಿ, ಕಡಗಂಚಿ ಹೊಸದಾಗಿ ಖೇಡ ಉಮರಗಾ ಕೆರೆಗಳ ನಿರ್ಮಾಣ ಕಾರ್ಯ ನಡೆಯಲಿದೆ.

ಈಗಾಗಲೇ ೪ ಕೆರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ೨.೫೦ ಕೋಟಿ ವೆಚ್ಚದಲ್ಲಿ ನಿರಗುಡಿ ಗ್ರಾಮಕ್ಕೆ ಬ್ರೀಜ್ ಕಂ- ಬ್ಯಾರೇಜ್ ಕಾಮಗಾರಿ ಶೀಘ್ರವೇ ಪ್ರಾರಂಭಿಸಲು ಸೂಚಿಸಲಾಗಿದೆ. ತೀರ್ಥ ಹಾಗೂ ಸಾಲೇಗಾಂವ ಮಧ್ಯದಲ್ಲಿ ಬ್ಯಾರೇಜ್ ನಿರ್ಮಾಣ ಹೀಗೆ ಪೂರಕವಿರುವ ಸ್ಥಳಗಳಲ್ಲಿ ನೀರಿಟ್ಟುಕೊಳ್ಳಲು ಶ್ರಮಿಸಲಾಗುತ್ತಿದೆ. ಹಲವು ದೇವಸ್ಥಾನ ಜೀರ್ಣೋಧಾರ ಹಾಗೂ ಸಮುದಾಯ ಭವನಗಳು ಗ್ರಾಮ ಸಂಪರ್ಕ ರಸ್ತೆ ನಿರ್ಮಾಣ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ಹಿಂದಿನಂತೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗೃತ ಕ್ರಮವಾಗಿ ಜಲ ಜೀವನ ಯೋಜನೆ ಸೇರಿ ಇನ್ನಿತರ ಅನುದಾನಗಳಲ್ಲಿ ಕೊಳವೆ ಬಾವಿ, ತೆರೆದ ಬಾವಿ ಪೈಪಲೈನ್ ಕಾಮಗಾರಿ ಕೈಗೊಂಡ ಜನರ ಮನೆಬಾಗಿಲಿಗೆ ನೀರೊದಗಿಸುವ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.

ಇಲಾಖೆಯ ಎಇಇ ಶಾಂತಪ್ಪ ಜಾಧವ ಅವರು ಮಾತನಾಡಿ ಕಾಮಗಾರಿಯ ವಿವರಣೆ ನೀಡಿದರು. ಮುಖಂಡ ಮಲ್ಲಣ್ಣಾ ನಾಗೂರೆ, ಸಿದ್ಧಣ್ಣಾ ಹಳ್ಳೆ ತೀರ್ಥ ಅವರು ಮಾತನಾಡಿ, ಶಾಸಕರು ಜನರ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಅನುದಾನ ತರುವ ಮೂಲಕ ಕಾಮಗಾರಿ ಕೈಗೊಂಡು ಅನುಕೂಲ ಒದಗಿಸುತ್ತಿದ್ದಾರೆ. ರೈತ ರಾಮಲಿಂಗ ಮೂಲಗೆ ಮಾತನಾಡಿ, ಹೆಬಳಿ ಮಂಟಕಿ ರಸ್ತೆ ಕೈಗೊಳ್ಳಬೇಕು. ಪ್ರಹವಾಕ್ಕೆ ಕೊಚ್ಚಿದ ಹೊಲಗಳ ಮಣ್ಣು ಬೆಳೆಯ ಹಾನಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ಗ್ರಾಪಂ ಅಧ್ಯಕ್ಷ ಯಶ್ವಂತರಾವ್ ಎಲ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ತಾಪಂ ಮಾಜಿ ಸದಸ್ಯ ಶರಣಬಸಪ್ಪ ಬಿರಾದಾರ, ಅಬ್ದುಲ್ ಹದರೆ, ಮದುಕರ್ ಪಾಟೀಲ, ನಂದು ಪಾಟೀಲ, ಮಲ್ಲಯ್ಯಾಅ ಗುತ್ತೇದಾರ, ಗುಂಡಪ್ಪ ಅಣೂರೆ, ಮಂಜುನಾಥ ಮೂಲಗೆ, ಮಲ್ಲಿನಾಥ ಮೂಲಗೆ, ಶೇಖರ ವಾಡೆ, ಸಾಯಬಣ್ಣ ಬಿರಾದಾರ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು. ಲಾಯಕಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

emedialine

Recent Posts

ದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡಿದ್ದೇ ರಾಜೀವ್ ಗಾಂಧಿ; ಡಿಸಿಎಂ ಡಿ.ಕೆ.ಶಿವಕುಮಾರ.

ಕಲಬುರಗಿ; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ…

2 hours ago

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ

ಕಲಬುರಗಿ; ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ,ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಸಿದ ಸಾಮಾಜಿಕ ಹರಿಕಾರರು ದಿವಂಗತ ಡಿ…

2 hours ago

ಚಿತ್ತಾಪುರ; ಕಚೇರಿಯಲ್ಲಿ ನಾರಾಯಣಗುರು ಡಿ.ದೇವರಾಜ ಅರಸು ಜಯಂತಿ ಆಚರಣೆ

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ…

2 hours ago

ಗೃಹಲಕ್ಷ್ಮೀ ಯೋಜನೆ ಮತ್ತು ಗ್ಯಾರಂಟಿ ಯೋಜನೆಯ ಪೂರ್ಣ ಮಾಹಿತಿ ಪಡೆಯಿರಿ; ಪಾಶಾ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಗೃಹಲಕ್ಷ್ಮಿ ಯೋಜನೆ ಮತ್ತು ಗ್ಯಾರಂಟಿ ಯೋಜನೆ ಕುರಿತು ಪೂರ್ಣ ಮಾಹಿತಿ ಪಡೆಯಬೇಕು ಎಂದು ತಾಪಂ…

2 hours ago

ಸಮಾಜ ಸುಧಾರಣೆಗೆ ಬದುಕು ಸಮರ್ಪಿಸಿದ ನಾರಾಯಣ ಗುರೂಜಿ : ಸಿದ್ದಲಿಂಗ ಶ್ರೀ

ರಾವೂರ: ಕೇರಳ ರಾಜ್ಯದಲ್ಲಿ ತಲೆತ್ತಿದ್ದ ಜಾತೀಯತೆ, ಅಸ್ಪೃಶ್ಯತೆ, ಸ್ತ್ರೀ ಅಸಮಾನತೆ, ತಾರತಮ್ಯಗಳ ವಿರುದ್ಧ ಹಿಂದುಳಿದ ಕುಲದಲ್ಲಿ ಜನಿಸಿದ ನಾರಾಯಣ ಗುರುಗಳು…

2 hours ago

ದಸ್ತಿ ಅವರಿಗೆ ದಶಕಗಳ ಹೋರಾಟಕ್ಕೆ ಸಂದ ಡಾಕ್ಟರೇಟ್ ಗೌರವ

ಕಲಬುರಗಿ: ಕಲ್ಯಾಣ ನಾಡಿನ ಹಿರಿಯ ಹೋರಾಟಗಾರ ಲಕ್ಷ್ಮಣ ದಸ್ತಿ ಅವರ ದಶಕಗಳ ಹೋರಾಟವನ್ನು ಗುರುತಿಸಿ ಗುಲ್ಬರ್ಗ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420