ಯರ್ರಾಬಿರ್ರಿ ಸಿನೆಮಾ ನಟ ಆಗಮನ:ನೋಡಲು ಕಿಕ್ಕಿರಿದ ಜನಸ್ತೋಮ

ಸುರಪುರ: ನಗರಕ್ಕೆ ಯರ್ರಾಬಿರ್ರಿ ಸಿನೆಮಾದ ನಾಯಕ ನಟ ರೂರಲ್ ಅಂಜನ್ ಆಗಮಿಸಿದ್ದರು.ನೆಚ್ಚಿನ ನಟನನ್ನು ನೋಡಲು ಸುರಪುರ ನಗರ ಮಾತ್ರವಲ್ಲದೆ ಗ್ರಾಮೀಣ ಭಾಗದಿಂದ ಅನೇಕ ಜನ ಸಿನಿರಸಿಕರು ಆಗಮಿಸಿ ನಟನನ್ನು ಕಂಡು ಕೇಕೆ ಹಾಕಿ ಹರ್ಷ ವ್ಯಕ್ತಪಡಿಸಿದರು.

ಬುಧವಾರ ಮದ್ಹ್ಯಾನ ನಗರದ ಮಹಾತ್ಮ ಗಾಂಧಿ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದರು.ಅನೇಕು ನಟನಿಗೆ ಹಸ್ತಲಾಘವ ಮಾಡಲು ಮತ್ತು ಸೆಲ್ಫಿಗಾಗಿ ಮುಗಿಬಿದ್ದಿದ್ದು ಕಂಡುಬಂತು.ಮೊದಲಿ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಎಲ್ಲರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಟ ರೂರಲ್ ಅಂಜನ್,ನಮ್ಮ ಭಾಗದ ಜನರು ತುಂಬಾ ಸಿನಿಪ್ರಿಯರು ತಾವೆಲ್ಲರು ಬೆಂಗಳೂರು ಮೈಸೂರು ಭಾಗದ ಜನತೆಯ ಅನೇಕ ಸಿನೆಮಾಗಳನ್ನು ಗೆಲ್ಲಿಸಿರುವಿರಿ ಅದರಂತೆ ನಮ್ಮ ಯರ್ರಾಬಿರ್ರಿ ಸಿನೆಮಾವು ಇದೇ ತಿಂಗಳು ೧೨ನೇ ತಾರೀಖಿನಂದು ಬಿಡುಗಡೆಯಾಗಲಿದ್ದು ತಾವೆಲ್ಲರು ನೋಡಿ ನಮಗೆ ಹರಸುವಂತೆ ವಿನಂತಿಸಿದರು.ಅಲ್ಲದೆ ಉತ್ತರ ಕರ್ನಾಟಕ,ಕಲ್ಯಾಣ ಕರ್ನಾಟಕ ಭಾಗದ ಕಲಾವಿದರನ್ನು ಬೆಳೆಸುವ ಕೆಲಸವನ್ನು ತಾವೆಲ್ಲರು ಮಾಡಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ,ಈ ಭಾಗದಲ್ಲಿ ಒಳ್ಳೆ ಪ್ರತಿಭಾವಂತರಿದ್ದು ಅವಕಾಶಗಳು ಕಡಿಮೆಯಿವೆ,ತಾವೆಲ್ಲರು ಬೆಳೆಸುವ ಮೂಲಕ ಈ ಭಾಗದ ಪ್ರತಿಭೆಗಳನ್ನು ಮೇಲಕ್ಕೆತ್ತುವಂತೆ ಮನವಿ ಮಾಡಿದರು.

ನಟನ ಆಗಮನದ ಹಿನ್ನೆಲೆಯಲ್ಲಿ ಸಾವಿರಾರು ಜನರು ಸೇರಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ಅರ್ಧಗಂಟೆಗಳ ಕಾಲ ವಾಹನ ಸವಾರರು ಪರದಾಡುವಂತಾಗಿತ್ತು.ಈ ಸಂದರ್ಭದಲ್ಲಿ ಮುಖಂಡರಾದ ಬಲಭೀಮ ನಾಯಕ ಬೈರಿಮಡ್ಡಿ,ವೆಂಕಟೇಶ ನಾಯಕ ಬೈರಿಮಡ್ಡಿ,ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶ್ರವಣಕುಮಾರ ನಾಯಕ ಡೊಣ್ಣಿಗೇರಾ, ಅಂಬ್ರೇಶ ನಾಯಕ ಡೊಣ್ಣಿಗೇರಾ,ರಾಮಣಗೌಡ ಬೈಲಾಪುರ,ವಾಸು ನಾಯಕ ಬೈರಿಮಡ್ಡಿ,ಶಿವರಾಜ ಕಲಕೇರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಅಜ್ಞಾನವೆಂಬ ಕತ್ತಲಿನಿಂದ ಜ್ಞಾನದ ಬೆಳಿಕಿನಡೆಗೆ ಕರೆದೊಯ್ಯುವ ಜ್ಯೋತಿಯೇ ಶಿಕ್ಷಕ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…

6 hours ago

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಗಮನ ಸೆಳೆದ ಚೇತನ ಬಿ.ಕೋಬಾಳ್ ಸಂಗೀತ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…

15 hours ago

15ರಂದು ಮಾನವ ಸರಪಳಿ: ನಾಳೆ ಪೂರ್ವ ಭಾವಿ ಸಭೆ

ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…

16 hours ago

ಸೆಪ್ಟೆಂಬರ್ 17ರಂದು ವಿಮೋಚನಾ ದಿನ ರದ್ದುಪಡಿಸಿ, ಪ್ರಜಾಸತ್ತಾತ್ಮಕ ದಿನ ಆಚರಿಸಿ: ಕೆ ನೀಲಾ

ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…

16 hours ago

ಸಮಿತಿಗಳ ಕಾರ್ಯ ಪರಾಮರ್ಶಿಸಿದ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ

ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…

18 hours ago

SC/STಗೆ ಪಾಲಿಕೆಯಿಂದ ವಿತರಣೆಯಾಗದ ಸಂಸ್ಕೃತಿ ಸಮಾಗ್ರಿ: ಸಚಿನ ಶಿರವಾಳ ಬೇಸರ

ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್‍ ಗಳಾದ, ಬ್ಯಾಂಡ್ ಸೆಟ್‍ಗಳು ಮತ್ತು…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420