ಸುರಪುರ: ಹಾನಗಲ್ ಕುಮಾರಸ್ವಾಮಿ ಜಯಂತಿ ಪೂರ್ವಭಾವಿ ಸಭೆ

ಸುರಪುರ: ನಗರದ ಬಸವೇಶ್ವರ ಪತ್ತಿನ ಸಹಕಾರ ಭವನದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಹಾಗು ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಯುವ ಘಟಕದ ಮುಖಂಡರು ಸಭೆಯನ್ನು ನಡೆಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ,ಮಹಾಸಭಾ ಸುರಪುರ ತಾಲೂಕ ಘಟಕ ಹಾಗೂ ಯುವ ಘಟಕದ ವತಿಯಿಂದ ಶೀಘ್ರದಲ್ಲಿ ಹಾನಗಲ್ ಶ್ರೀ ಕುಮಾರೇಶ್ವರ ಜಯಂತ್ಯೋತ್ಸವ ಹಾಗೂ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಮತ್ತು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗುವುದು ಹಾಗು ಸಮಾಜದ ಸಂಘಟನೆಯ ದೃಷ್ಠಿಯಿಂದ ಬರುವ ದಿನಗಳಲ್ಲಿ ತಾಲೂಕಿನ ಪ್ರತಿ ಹೊಬಳಿಗಳಲ್ಲಿ ಸದಸ್ಯತ್ವ ಅಭಿಯಾನ ಚಾಲನೆ ನೀಡಿ, ಸದಸ್ಯತ್ವ ಅಭಿಯಾನಕ್ಕೆ ಒತ್ತು ಕೊಡಲಾಗುವುದು ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಸುರಪುರ ತಾಲೂಕ ಘಟಕದ ಅಧ್ಯಕ್ಷ ಮಂಜುನಾಥ ಜಾಲಹಳ್ಳಿ ಮಾತನಾಡಿ, ಶಿಘ್ರದಲ್ಲಿ ಮಹಾಸಭೆಯ ಸಂಸ್ಥಾಪಕರಾದ ಹಾನಗಲ್‌ದ ಪೂಜ್ಯ ಶ್ರೀ ಕುಮಾರ ಶಿವಯೋಗಿಗಳ ಜಯತ್ಯೋತ್ಸವ ಹಾಗೂ ತಾಲೂಕ ಘಟಕದ ಕಾರ್ಯಚಟುವಟಿಕೆಗಳ ಚಾಲನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ತಾಲೂಕ ಯುವ ಘಟಕದ ಅಧ್ಯಕ್ಷ ಶಿವರಾಜ ಕಲೀಕೆರಿ ಮಾತನಾಡಿ ಮೊದಲಬಾರಿಗೆ ಯುವ ಘಟಕದ ಸಭೆ ಸೇರಿದ್ದು ಬರುವ ದಿನಗಳಲ್ಲಿ ಪ್ರತಿ ತಿಂಗಳು ೨ನೇ ಶನಿವಾರ ಸಮಾಜದ ಸಭೆ ಹಮ್ಮಿಕೊಳ್ಳುವುದರ ಜೊತೆಗೆ ಹುಣಸಗಿ ಮತ್ತು ಸುರಪುರ ತಾಲೂಕಿನ ಪ್ರತಿ ಗ್ರಾಮಗಳಲ್ಲು ಸಮಾಜದ ಯುವಕರನ್ನು ಗುರುತಿಸಿ ಸದಸ್ಯತ್ವ ಅಭಿಯಾನಕ್ಕೆ ಪ್ರೋತ್ಸಾಹಿಸುತ್ತೇವೆ ಎಂದು ಹೇಳಿದರು.

ಮಹಾಸಭೆಯ ಜಿಲ್ಲಾ ಯುವ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಮಲ್ಲು ಬಾದ್ಯಾಪುರ, ತಾಲೂಕ ಘಟಕದ ಉಪಾಧ್ಯಕ್ಷ ಸಿದ್ದಣ್ಣಗೌಡ ಹೆಬ್ಬಾಳ, ಪ್ರಮುಖರಾದ ಜಗದೀಶ ಪಾಟೀಲ್, ಪ್ರದೀಪ ಕದರಾಪುರ, ಕೃಷ್ಣಾರೆಡ್ಡಿ ಮುದನುರು, ಶ್ರವಣ ಅರಳಳ್ಳಿ, ಮಲ್ಲು ಸುಭೇದಾರ, ಪ್ರಕಾಶ ಹೆಮ್ಮಡಗಿ, ಮಲ್ಲು ಹುಗಾರ, ಮಂಜುನಾಥ ಹಿರೇಮಠ, ಆನಂದ ಮಡ್ಡಿ, ಸೂಗುರೇಶ ಸಜ್ಜನ್, ಶರಣು ಜಾಲಿಬೆಂಚಿ, ಲಿಂಗರಾಜ ಶಾಬಾದಿ, ಸ್ವರೂಪ ಭೂದಿಹಾಳ, ಸುಪ್ರಿತ್ ಜಾಕಾ, ಹರೀಶ ಹಳ್ಳದ, ಪ್ರವೀಣ ಜಕಾತಿ, ಸಿದ್ದಪ್ರಸಾದ ಪಾಟಿಲ್, ದೇವರಾಜ ನಂದಗಿರಿ, ಶೇಖು ಬುಮಶೆಟ್ಟಿ ಸೇರಿದಂತೆ ಇತರರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

45 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

1 hour ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

2 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

3 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420