ಸುರಪುರ: ಶರಣ ಸೇವಾ ಸಂಸ್ಥೆ ಅಧ್ಯಕ್ಷ ಶಿವರಾಜ್ ಕಲಕೇರಿ ಪೂಜ್ಯ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದ ಅಂಗವಾಗಿ ಗ್ರಂಥಾಲಯ ಉದ್ಘಾಟನೆ ಮಾಡಿರುವುದು ಯುವಕರಿಗೂ ಮತ್ತು ವಿದ್ಯಾರ್ಥಿಗಳಿಗೂ ಪ್ರೇರಣಾ ಕಾರ್ಯವಾಗಿದೆ, ಗ್ರಂಥಾಲಯ ಹಿರಿಯ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಾಡಿರುವ ಕಾರ್ಯಕ್ಕೆ ಯಶಸ್ವಿ ಆಗಲಿ, ಶರಣ ಸೇವಾ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಮಾತನಾಡಿ ಶುಭ ಹಾರೈಸಿದರು.
ನಗರದ ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಶ್ರೀ ಶರಣ ಗ್ರಂಥಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ಶಿವರಾಜ ಕಲಕೇರಿಯಂತಹ ಯುವಕರು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಶರಣಪ್ಪ ಕಲಕೇರಿಯವರಿಗೆ ಹಾಗು ಸಂಸ್ಥೆಯ ಅಧ್ಯಕ್ಷ ಶಿವರಾಜ ಕಲಕೇರಿ ಮತ್ತು ಅವರ ಗೆಳೆಯರಿಗೆ ಇನ್ನೂ ಹೆಚ್ಚಿನ ಕೆಲಸ ಮಾಡುವ ಶಕ್ತಿ ಶರಣ ಸಂತ ಮಹಾಂತರು ನೀಡಲೆಂದು ಹಾರೈಸಿದರು.
ಶಿವಾಚಾರ್ಯ ಸ್ವಾಮೀಜಿ ಅವರು ಹಾಗೂ ಕಲಬುರ್ಗಿ- ಯಾದಗಿರಿ ಜಿಲ್ಲೆಯ ಡಿ ಸಿ ಸಿ ಬ್ಯಾಂಕಿ ಉಪಾಧ್ಯಕ್ಷರು, ತಾಲೂಕು ವೀರಶೈವ ಲಿಂಗಾಯತ ಸಮಿತಿ ಸುರಪುರ ಅದ್ಯಕ್ಷ ಸುರೇಶ್ ಸಜ್ಜನ್ ಮಾತನಾಡಿ, ಶ್ರೀ ಶರಣ ಸೇವಾ ಸಂಸ್ಥೆ ವತಿಯಿಂದ ಅನೇಕ ಸಾಮಾಜಿಕ ಕಾರ್ಯಗಳು ಮಾಡುತ್ತಿರುವುದು ನಿಜಕ್ಕೂ ಬಹಳ ಸಂತಸ ವಾಗಿದೆ, ನಾಡಿನ ಮಠಾಧೀಶರ ಶಿವ ಭಕ್ತಿ ಮತ್ತು ಶರಣ ಭಕ್ತಿ ಅವರ ಆಶೀರ್ವಾದದೊಂದಿಗೆ ಸಂಸ್ಥೆಯ ಅಧ್ಯಕ್ಷ ಶಿವರಾಜ್ ಕಲಕೇರಿ ಉತ್ತಮ ಸೇವೆ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದು, ಶಕ್ಷಣಿಕ ಅಭಿವೃದ್ಧಿಗಾಗಿ ವಿದ್ಯಾರ್ಥಿ ಚೇತನ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸುವುದು ಜಿಲ್ಲೆಗೆ ಮಾದರಿ, ಇಂತಹ ಯುವಕರು ಬೆಳೆಯುವುದರಿಂದ ಅನೇಕ ಯುವಕರಿಗೆ ಮಾರ್ಗದರ್ಶನ ಆಗಲಿದೆ ಇನ್ನೂ ಹೆಚ್ಚಿನ ಸೇವಾ ಕಾರ್ಯ ಸಂಸ್ಥೆ ವತಿಯಿಂದ ನಡೆಯಲಿ ಮತ್ತು ಅವರಿಗೆ ನಮ್ಮ ಸಂಪೂರ್ಣವಾದ ಸಹಕಾರ ಇರಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡ ದೇಸಾಯಿ ದೇವರಗೋನಾಲ, ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಡೊಣೂರ , ಕಾಯಕ ಹಾಗೂ ಗ್ರಾಮೀಣ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷ ನಾಗಭೂಷಣ್ ಯಾಳಗಿ, ಸಂಸ್ಥೆಯ ಮುಖಂಡ ಮಲ್ಲಿಕಾರ್ಜುನ್ ಸುಬೇದಾರ್, ಮೌನೇಶ್ , ವಿಜಯ್ ಇತರರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…