ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಸ್ವಚ್ಛತೆ ಕಾಪಾಡಿ: ಶರಣು

0
13

ಶಹಾಬಾದ: ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ನೀಡಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಎಸೆಯದೇ ಕಸ ಸಂಗ್ರಹ ಮಾಡುವ ವಾಹನ ಬಂದಾಗ ನೀಡಬೇಕು ಎಂದು ನಗರಸಭೆಯ ಆರೋಗ್ಯ ನಿರೀಕ್ಷಕ ಶರಣು ಹೇಳಿದರು.

ಅವರು ನಗರಸಭೆಯ ಕಾರ್ಯಾಲಯದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತ್ಯಾಜ್ಯ ವಿಂಗಡಣೆ, ಸ್ವಚ್ಛ ಸಾರ್ವಜನಿಕ ಶೌಚಾಲಯಗಳ ಬಳಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Contact Your\'s Advertisement; 9902492681

ನಗರದ ಸ್ವಚ್ಚತೆ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದೆ ಬರಬೇಕು. ಸ್ವಚ್ಛ ಭಾರತ ಅಭಿಯಾನವೂ ಸ್ವಚ್ಛತೆಗೆ ಮಾತ್ರ ಸಿಮೀತವಾಗದೇ ನಗರದ ಸಮಗ್ರ ಅಭಿವೃದ್ಧಿಗೂ ಪ್ರೇರಣೆಯಾಗಬೇಕು. ನಗರಸಭೆಯಿಂದ ನಿಮ್ಮ ಮನೆಯ ಮುಂದೆ ಕಸ ಸಂಗ್ರಹ ಮಾಡುವ ವಾಹನ ವ್ಯವಸ್ಥೆ ಮಾಡಿದ್ದಾರೆ.ಕಸವನ್ನು ಮನೆಯ ಮುಂದೆ, ಚರಂಡಿಗಳಲ್ಲಿ ಎಸೆಯುವುದರಿಂದ ರೋಗಗಳ ತಾಣವಾಗಿ ಮಾರ್ಪಟ್ಟು ನಮ್ಮ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾರ್ವಜನಿಕರು ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಹೇಳಿದರು.

ಆರೋಗ್ಯ ನಿರೀಕ್ಷಕ ರಾಜೇಶ ಮಾತನಾಡಿ, ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ನಗರದ ಸ್ವಚ್ಚತೆಗೆ ಆದ್ಯತೆ ನೀಡುವ ಮೂಲಕ ರಾಷ್ಟ್ರಪಿತ ಗಾಂಧೀಜಿ ಅವರು ಕಂಡ ಕನಸನ್ನು ನನಸು ಮಾಡಲು ಮುಂದೆ ಬರಬೇಕೆಂದು ಇದೇ ಸಂದರ್ಭದಲ್ಲಿ ಓಂ ಸಾಯಿ ಕಲಾ ತಂಡದಿಂದ ಶೌಚಾಲಯ ಬಳಕೆ, ಒಣಕಸ-ಹಸಿ ಕಸ,ಪ್ಲಾಸ್ಟಿಕ್ ಬಳಕೆಯ ಹಾನಿ, ಸರಾಯಿಯಿಂದಾಗುವ ತೊಂದರೆ ಇತರ ವಿಷಯಗಳ ಕುರಿತು ನಗರದ ಜನರಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳಾದ ಹಣಮಂತ ಪವಾರ, ಈರಣ್ಣ ಕುರಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here