ಬಿಸಿ ಬಿಸಿ ಸುದ್ದಿ

ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಸ್ವಚ್ಛತೆ ಕಾಪಾಡಿ: ಶರಣು

ಶಹಾಬಾದ: ಸಾರ್ವಜನಿಕರು ಹಸಿ ಕಸ, ಒಣ ಕಸವನ್ನು ಬೇರ್ಪಡಿಸಿ ನೀಡಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಎಸೆಯದೇ ಕಸ ಸಂಗ್ರಹ ಮಾಡುವ ವಾಹನ ಬಂದಾಗ ನೀಡಬೇಕು ಎಂದು ನಗರಸಭೆಯ ಆರೋಗ್ಯ ನಿರೀಕ್ಷಕ ಶರಣು ಹೇಳಿದರು.

ಅವರು ನಗರಸಭೆಯ ಕಾರ್ಯಾಲಯದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತ್ಯಾಜ್ಯ ವಿಂಗಡಣೆ, ಸ್ವಚ್ಛ ಸಾರ್ವಜನಿಕ ಶೌಚಾಲಯಗಳ ಬಳಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ನಗರದ ಸ್ವಚ್ಚತೆ ಮೂಲಕ ಜನರ ಆರೋಗ್ಯ ಕಾಪಾಡಲು ಮುಂದೆ ಬರಬೇಕು. ಸ್ವಚ್ಛ ಭಾರತ ಅಭಿಯಾನವೂ ಸ್ವಚ್ಛತೆಗೆ ಮಾತ್ರ ಸಿಮೀತವಾಗದೇ ನಗರದ ಸಮಗ್ರ ಅಭಿವೃದ್ಧಿಗೂ ಪ್ರೇರಣೆಯಾಗಬೇಕು. ನಗರಸಭೆಯಿಂದ ನಿಮ್ಮ ಮನೆಯ ಮುಂದೆ ಕಸ ಸಂಗ್ರಹ ಮಾಡುವ ವಾಹನ ವ್ಯವಸ್ಥೆ ಮಾಡಿದ್ದಾರೆ.ಕಸವನ್ನು ಮನೆಯ ಮುಂದೆ, ಚರಂಡಿಗಳಲ್ಲಿ ಎಸೆಯುವುದರಿಂದ ರೋಗಗಳ ತಾಣವಾಗಿ ಮಾರ್ಪಟ್ಟು ನಮ್ಮ ಆರೋಗ್ಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಸಾರ್ವಜನಿಕರು ಕಸವನ್ನು ಬೇರ್ಪಡಿಸಿ ನೀಡಬೇಕೆಂದು ಹೇಳಿದರು.

ಆರೋಗ್ಯ ನಿರೀಕ್ಷಕ ರಾಜೇಶ ಮಾತನಾಡಿ, ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ನಗರದ ಸ್ವಚ್ಚತೆಗೆ ಆದ್ಯತೆ ನೀಡುವ ಮೂಲಕ ರಾಷ್ಟ್ರಪಿತ ಗಾಂಧೀಜಿ ಅವರು ಕಂಡ ಕನಸನ್ನು ನನಸು ಮಾಡಲು ಮುಂದೆ ಬರಬೇಕೆಂದು ಇದೇ ಸಂದರ್ಭದಲ್ಲಿ ಓಂ ಸಾಯಿ ಕಲಾ ತಂಡದಿಂದ ಶೌಚಾಲಯ ಬಳಕೆ, ಒಣಕಸ-ಹಸಿ ಕಸ,ಪ್ಲಾಸ್ಟಿಕ್ ಬಳಕೆಯ ಹಾನಿ, ಸರಾಯಿಯಿಂದಾಗುವ ತೊಂದರೆ ಇತರ ವಿಷಯಗಳ ಕುರಿತು ನಗರದ ಜನರಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳಾದ ಹಣಮಂತ ಪವಾರ, ಈರಣ್ಣ ಕುರಿ ಇತರರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

51 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

54 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

57 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago