ಬಿಸಿ ಬಿಸಿ ಸುದ್ದಿ

ನಿಮ್ಮ ಕಾನೂನು ಹಕ್ಕುಗಳ ಸಂರಕ್ಷಣೆ ಬಗ್ಗೆ ಅರಿವು

ಮಾಲೂರು: ತಾಲ್ಲೂಕಿನ ಕಸಬಾ ಹೋಬಳಿ ತೊರ‍್ನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಹಾಗೂ ಜಿಲ್ಲಾ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ “ಕಾನೂನು ಸೇವೆಗಳ ಪ್ರಾಧಿಕಾರಗಳು ನಿಮ್ಮ ಕಾನೂನು ಹಕ್ಕುಗಳ ಸಂರಕ್ಷಣೆ” ಬಗ್ಗೆ ಉಚಿತ ಕಾನೂನು ನೆರವು ಸಲಹೆ ಹಾಗೂ ಲೋಕ್ ಅದಾಲತ್ ಕಾರ್ಯಕ್ರಮವನ್ನು ತೊರ‍್ನಹಳ್ಳಿ ಗ್ರಾಮ ಪಂಚಾಯಿತಿಯ ಎಲ್ಲಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪಿಡಿಓ ಚೌಡರೆಡ್ಡಿ ಮಾತನಾಡಿ 1987ರ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ ಕಾಲಂ 12ರಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಲು ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದವರು ಮಾನಸಿಕ ಅಥವಾ ಬೇರೆ ಯಾವುದೇ ನ್ಯೂನ್ಯತೆ ಹೊಂದಿರುವವರು, ಮಹಿಳಾ ಮತ್ತು ಮಕ್ಕಳ ಕಾರ್ಖಾನೆಯ ಕಾರ್ಮಿಕರು ಗುಂಪು ಘರ್ಷಣೆ, ಪ್ರವಾಹ, ಭೂಕಂಪ, ಮುಂತಾದವುಗಳಿಗೆ ತುತ್ತಾದವರು ಹಾಗೂ ಇತರೇ ಯಾವುದೇ ಪ್ರಸ್ತುತ ಕಾನೂನಿನ ಅಡಿಯಲ್ಲಿ ಉಚಿತ ಕಾನೂನು ಸಲಹೆ ಮತ್ತು ನೆರವನ್ನು ಪಡೆಯಲು ಅರ್ಹ ವ್ಯಕ್ತಿಗಳಾಗಿರುತ್ತಾರೆ.

ಕರ್ನಾಟಕದಾದ್ಯಂತ ಇ-ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಮಾಡಿಕೊಳ್ಳಲು ಲೋಕ್ ಅದಾಲತ್ ಒಂದು ಸುವರ್ಣ ಅವಕಾಶವಾಗಿರುತ್ತದೆ. ಇದರ ಸದುಪಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದರು.

*ಈ ಕಾರ್ಯಕ್ರಮವು ತೊರ‍್ನಹಳ್ಳಿ ಗ್ರಾ.ಪಂ.ನ ತೊರ‍್ನಹಳ್ಳಿ, ಬೈರ‍್ನಹಳ್ಳಿ, ಸೊಣ್ಣನಾಯಕನಹಳ್ಳಿ, ಗೇರುಪುರ, ಬೆಳ್ಳಾವಿ, ಹೆಡಗಿನಬೆಲೆ, ಸೀತನಾಯಕನಹಳ್ಳಿ ಗ್ರಾಮಗಳಲ್ಲಿ ತೊರ‍್ನಹಳ್ಳಿ ಗ್ರಾ.ಪಂ. ಅಧ್ಯಕ್ಷ ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.*

ಈ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷ ಮುನಿಯಪ್ಪ,
ಉಪಾಧ್ಯಕ್ಷ ಸುಮಿತ್ರ ಲೋಕೇಶ್, ಗ್ರಾ.ಪಂ. ಸದಸ್ಯರಾದ ಬಿ.ಎಂ.ನಾಗರಾಜ್, ಶಿಲ್ಪ ಸಂತೋಷ್, ಮುರಳಿ, ಬಿ.ಜೆ.ವೀರಭದ್ರ, ವಕೀಲರಾದ ಸಾಗರ್‌ಗೌಡ, ಮುಖ್ಯಶಿಕ್ಷಕ ನಾಗರಾಜ್, ಶಿಕ್ಷಕ ಎಂ.ರಾಮಾಂಜನೇಯ, ಬೆಳ್ಳೂರಪ್ಪ, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಲ್‌ಕಲೆಕ್ಟರ್ ಎಂ.ನಾಗರಾಜ್, ಕಂಪ್ಯೂಟರ್ ಆಪರೇಟರ್ ಟಿ. ಕೆ.ಮುನಿರಾಜ ಹಾಗೂ ಗ್ರಾಮಸ್ಥರು ಹಾಜರಿದ್ದರು.

emedialine

Recent Posts

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

16 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

16 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

17 hours ago

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

17 hours ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

17 hours ago

ಪ್ರಜ್ವಲ್‍ಗೆ ಸನ್ಮಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…

18 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420