ಭಾರತೀಯ ಸಂಸ್ಕøತಿ ಪಾಲಿಸಿದರೆ ಕಾನೂನು ಪಾಲಿಸಿದಂತೆ-ನ್ಯಾ: ಚಿದಾನಂದ ಬಡಿಗೇರ

ಸುರಪುರ: ಭಾರತ ಒಂದು ಐತಿಹಾಸಿಕ ದೇಶವಾಗಿದ್ದು ಇಲ್ಲಿಯ ಸಂಸ್ಕøತಿಯನ್ನು ಮನುಷ್ಯ ಪಾಲಿಸಿದರೆ ಇಂದಿನ ಕಾನೂನುಗಳನ್ನು ಪಾಲಿಸಿದಂತಾಗಲಿದೆ ಎಂದು ದಿವಾಣಿ ನ್ಯಾಯಾಧೀಶರು ಹಾಗು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಹಾಗು ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಚಿದಾನಂದ ಬಡಿಗೇರ ಮಾತನಾಡಿದರು.

ತಾಲೂಕು ಕಾನೂನು ಸೇವಾ ಸಮಿತಿ ಹಾಗು ತಾಲೂಕು ನ್ಯಾಯವಾದಿಗಳ ಸಂಘದಿಂದ ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ದೇಶದ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಉದ್ದೇಶದಿಂದ ನಿರಂತರವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಸಲಾಗುತ್ತಿದ್ದು ಸಾರ್ವಜನಿಕರು ಹೆಚ್ಚೆಚ್ಚು ಭಾಗವಹಿಸುವ ಮೂಲಕ ಕಾನೂನುಗಳನ್ನು ತಿಳಿದುಕೊಳ್ಳಬೇಕೆಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನ್ಯಾಯವಾದಿಗಳಾದ ಜಿ.ಆರ್.ಬನ್ನಾಳ ಹಾಗು ನಂದನಗೌಡ ಪಾಟೀಲ್ ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರಕುಳ ನಿಷೇಧ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಧ್ಯೇಯ ಉದ್ದೇಶಗಳು ಮತ್ತು ಜನತಾ ನ್ಯಾಯಾಲಯ ವಿಷಯಗಳ ಕುರಿತು ಮಾತನಾಡಿ,ಮಹಿಳೆಯರು ಕೆಲಸ ಮಾಡುತ್ತಿರುವ ಸ್ಥಳದಲ್ಲಿರುವ ಮೇಲಾಧಿಕಾರಿ ಅಥವಾ ಸಹೋದ್ಯೋಗಿ ಮಹಿಳೆಯರ ಉಡಿಗೆ ತೊಡಿಗೆ ಬಗ್ಗೆ ಹಿಯ್ಯಾಳಿಸುವುದು,ಅಶ್ಲೀಲವಾಗಿ ಸನ್ನೆ ಮಾಡುವುದು,ಲೈಂಗಿಕ ಕಿರಕುಳ ನೀಡುವುದು ಅಪರಾಧವಾಗಿದ್ದು ಇಂತಹ ಸಂದರ್ಭದಲ್ಲಿ ಮಹಿಳೆ ಕಾನೂನಿನ ನೆರವು ಪಡೆಯಬಹದು ಮತ್ತು ಮೇಲಾಧಿಕಾರಿಗಳಿಗೆ ದೂರು ನೀಡಬಹುದು ಎಂದರು.

ಅಲ್ಲದೆ 1 ಲಕ್ಷ ಒಳಗಿನ ಆದಾಯ ಇರುವವರಿಗೆ,ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡದವರಿಗೆ ಉಚಿತ ಕಾನೂನು ನೆರವು ದೊರೆಯಲಿದೆ ಅಲ್ಲದೆ ಯಾರಾದರು ತಮ್ಮ ಆಸ್ತಿ ಪ್ರಕರಣ,ಸಂಬಂಧಿಕರೊಂದಿಗಿನ ಪ್ರಕರಣ ಹಾಗು ವೈಯಕ್ತಿಕ ಪ್ರಕರಣಗಳು ಜನತಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು ಎಂದರು.

ನಂತರ ಪಿಎಸ್‍ಐ ಕೃಷ್ಣಾ ಸುಬೇದಾರ ಮಾತನಾಡಿ,ಸಾರ್ವಜನಿಕರು ಅನುಕೂಲಕ್ಕಾಗಿ ಯಾವುದೇ ಸಂದರ್ಭದಲ್ಲಿ 112 ಉಚಿತ ಕರೆಯ ಮೂಲಕ ಪೊಲೀಸ್ ನೆರವನ್ನು ಪಡೆಯಲು ಸಾಧ್ಯವಿದೆ.ಆದ್ದರಿಂದ ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ತಿಳಿಸಿ,ನಂತರ 112 ನಂಬರ್‍ಗೆ ಕರೆ ಮಾಡಿ ಕೆಲವೆ ಸಮಯದಲ್ಲಿ ಪೊಲೀಸ್ ವಾಹನ ಹೇಗೆ ಬರಲಿದೆ ಎಂಬುದರ ಕುರಿತು ಪ್ರತ್ಯಕ್ಷವಾಗಿ ಕರೆ ಮಾಡಿ ತೋರಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಕಿಲ್ಲೇದಾರ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷೆ ಶ್ರೀದೇವಿ ಪಾಟೀಲ್,ಬಿಇಒ ಮಹಾದೇವರಡ್ಡಿ,ಅರಣ್ಯಾಧಿಕಾರಿ ಮೌಲಾಲಿಸಾಬ್ ವಕೀಲರಾದ ದೇವಿಂದ್ರಪ್ಪ ಬೇವಿನಕಟ್ಟಿ ಮತ್ತು ನಿಂಗಣ್ಣ ಚಿಂಚೋಡಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆ ಮೇಲೆ ಸಹಾಯಕ ಸರಕಾರಿ ಅಭಿಯೋಜಕ ರಾಘವೇಂದ್ರ ಜಹಾಗೀರದಾರ,ಹೆಚ್ಚುವರಿ ಸಹಾಯಕ ಸರಕಾರಿ ಅಭಿಯೋಜಕರಾದ ದಿದ್ಯಾರಾಣಿ,ನ್ಯಾಯವಾದಿ ಉದಯಸಿಂಗ್,ವಕೀಲರ ಸಂಘದ ಉಪಾಧ್ಯಕ್ಷ ಅಶೋಕ ಬಿ.ಕವಲಿ ವೇದಿಕೆ ಮೇಲಿದ್ದರು.

ಗೋಪಾಲ ತಳವಾರ ನಿರೂಪಿಸಿದರು,ಆದಪ್ಪ ಹೊಸ್ಮನಿ ಸ್ವಾಗತಿಸಿದರು ವಕೀಲ ನಾಗಪ್ಪ ಚವಲ್ಕರ್ ವಂದಿಸಿದರು.ಪರಮಾನಂದ ದೇಸಾಯಿ ಸೇರಿದಂತೆ ಅನೇಕ ಜನ ಶಿಕ್ಷಕಿಯರು ಹಾಗು ಸಾರ್ವಜನಿಕರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420