ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಮೋಸ ಆರೋಪ: ಶೋಷಿತರ ಪರ ಒಕ್ಕೂಟ ಪ್ರತಿಭಟನೆ

0
7

ಸುರಪುರ: ನಗರದ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ರೈತರಿಗೆ ಮೋಸ ನಡೆಯುತ್ತಿದೆ ಎಂದು ಆರೋಪಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ಉಪ ನೊಂದಣಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಉಪ ನೊಂದಣಾಧಿಕಾರಿಗಳು ರೈತರಿಗೆ ಸುಳ್ಳು ಮಾಹಿತಿ ನೀಡುತ್ತಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು.ರೈತ ಹೋರಾಟಗಾರರಿಗೆ ಅಗೌರವ ತೋರುತ್ತಿದ್ದಾರೆ.ಉಪ ನೊಂದಣಾಧಿಕಾರಿಗಳು ರೈತರ ಕೆಲಸಗಳಿಗೆ ವಿನಾಃ ಕಾರಣ ವಿಳಂಭ ಮಾಡುವ ಮೂಲಕ ರೈತರಿಗೆ ತೊಂದರೆ ಮಾಡುತ್ತಿದ್ದಾರೆ.

Contact Your\'s Advertisement; 9902492681

ಹೊಸದಾಗಿ ಬಂದಿರುವ ಉಪ ನೊಂದಣಾಧಿಕಾರಿಗಳ ವರ್ತನೆಯ ಕುರಿತು ಲೋಕಾಯುಕ್ತರಿಂದ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಮೂಲಕ ರೈತರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಆಗ್ರಹಿಸಿ ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ,ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ್ ವಜಾಹತ್ ಹುಸೇನ್ ಮುಖಂಡರಾದ ಗೋಪಾಲ ಬಾಗಲಕೋಟೆ,ರಾಜು ದರಬಾರಿ,ಕೇಶವ ನಾಯಕ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here