ಬಿಸಿ ಬಿಸಿ ಸುದ್ದಿ

ಸುರಪುರ:ಭೂ ಮಾಪಕರಿಂದ ರೈತನಿಗಾದ ಅನ್ಯಾಯ ಸರಿಪಡಿಸುವಂತೆ ಡಿಎಸ್‍ಎಸ್ ಪ್ರತಿಭಟನೆ

ಸುರಪುರ: ನಗರದ ವೆಂಕಟಾಪುರ ಗ್ರಾಮದ ರೈತನೊಬ್ಬನಿಗೆ ಭೂ ಮಾಪಕರಿಂದ ಅನ್ಯಾಯವಾಗಿದ್ದು ಇದನ್ನು ಸರಿಪಡಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಸುರಪುರ ಹೋಬಳಿ ನಗರದ ವೆಂಕಟಾಪುರದ ಬಡ ರೈತ ತಾಯಪ್ಪ ಗೋಪಣ್ಣ ಹೆಮ್ಮಡಗಿ ಎಂಬುವವರ ಗುಡಿಹಾಳ ಜೆ.ಗ್ರಾಮದ ಸರ್ವೇ ನಂಬರ್ 33/1 ರಲ್ಲಿ ಒಟ್ಟು 8 ಎಕರೆ ಜಮೀನಿದ್ದು,ಇದರಲ್ಲಿ ವಾಡಿ ಗದಗ ರೈಲ್ವೆ ಯೋಜನೆಗಾಗಿ 5 ಎಕರೆ 10 ಗುಂಟೆ ಜಮೀನು ಗಡಿಯನ್ನು ಗುರುತಿಸಲಾಗಿದೆ.

ಆದರೆ ಭೂ ಮಾಪಕ ಕೇವಲ 1 ಎಕರೆ 36 ಗುಂಟೆ ದಾಖಲಾತಿ ಮಾಡಿ ಬಡ ರೈತನಿಗೆ ಅನ್ಯಾಯ ಮಾಡಿದ್ದಾರೆ.ಆದ್ದರಿಂದ ರೈತ ತಾಯಪ್ಪ ಹೆಮ್ಮಡಗಿಗೆ ಸೇರಿದ 8 ಎಕರೆ ಜಮೀನಿನ ದಾಖಲಾತಿ ತಯಾರಿ ಮಾಡಿಕೊಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ನಂತರ ತಹಸೀಲ್ದಾರರಿಗೆ ಬರೆದ ಮನವಿಯನ್ನು ಗ್ರೇಡ-2 ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾನಪ್ಪ ಬಿಜಾಸಪುರ,ಬುದ್ಧಿವಂತ ನಾಗರಾಳ,ಜೆಟ್ಟೆಪ್ಪ ನಾಗರಾಳ,ಖಾಜಾಹುಸೇನ ಗುಡಗುಂಟಿ,ಬಾಗಪ್ಪ ದೇವಿಕೇರಿ,ದೇವಪ್ಪ ಪಟ್ಟೇದಾರ,ಮರಿಲಿಂಗಪ್ಪ ಹುಣಸಗಿ,ಮರಿಲಿಂಗಪ್ಪ ದೇವಿಕೇರಿ,ಮಹೇಶ ಸುಂಗಲ,ಮಹ್ಮದ್ ಹನೀಪ್,ಜಾವೇದ್ ಹುಸೇನಿ,ತಮ್ಮಣ್ಣ ಹೆಬ್ಬಾಳ,ಪರಶುರಾಮ ಚಿಕ್ಕನಹಳ್ಳಿ,ದೇವಪ್ಪ ಚಿಕ್ಕನಹಳ್ಳಿ ಸೇರಿದಂತೆ ರೈತ ತಾಯಪ್ಪ ಕುಟುಂಬಸ್ಥರಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

40 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago