ಸುರಪುರ: ನಗರದ ವೆಂಕಟಾಪುರ ಗ್ರಾಮದ ರೈತನೊಬ್ಬನಿಗೆ ಭೂ ಮಾಪಕರಿಂದ ಅನ್ಯಾಯವಾಗಿದ್ದು ಇದನ್ನು ಸರಿಪಡಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಸುರಪುರ ಹೋಬಳಿ ನಗರದ ವೆಂಕಟಾಪುರದ ಬಡ ರೈತ ತಾಯಪ್ಪ ಗೋಪಣ್ಣ ಹೆಮ್ಮಡಗಿ ಎಂಬುವವರ ಗುಡಿಹಾಳ ಜೆ.ಗ್ರಾಮದ ಸರ್ವೇ ನಂಬರ್ 33/1 ರಲ್ಲಿ ಒಟ್ಟು 8 ಎಕರೆ ಜಮೀನಿದ್ದು,ಇದರಲ್ಲಿ ವಾಡಿ ಗದಗ ರೈಲ್ವೆ ಯೋಜನೆಗಾಗಿ 5 ಎಕರೆ 10 ಗುಂಟೆ ಜಮೀನು ಗಡಿಯನ್ನು ಗುರುತಿಸಲಾಗಿದೆ.
ಆದರೆ ಭೂ ಮಾಪಕ ಕೇವಲ 1 ಎಕರೆ 36 ಗುಂಟೆ ದಾಖಲಾತಿ ಮಾಡಿ ಬಡ ರೈತನಿಗೆ ಅನ್ಯಾಯ ಮಾಡಿದ್ದಾರೆ.ಆದ್ದರಿಂದ ರೈತ ತಾಯಪ್ಪ ಹೆಮ್ಮಡಗಿಗೆ ಸೇರಿದ 8 ಎಕರೆ ಜಮೀನಿನ ದಾಖಲಾತಿ ತಯಾರಿ ಮಾಡಿಕೊಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ತಹಸೀಲ್ದಾರರಿಗೆ ಬರೆದ ಮನವಿಯನ್ನು ಗ್ರೇಡ-2 ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾನಪ್ಪ ಬಿಜಾಸಪುರ,ಬುದ್ಧಿವಂತ ನಾಗರಾಳ,ಜೆಟ್ಟೆಪ್ಪ ನಾಗರಾಳ,ಖಾಜಾಹುಸೇನ ಗುಡಗುಂಟಿ,ಬಾಗಪ್ಪ ದೇವಿಕೇರಿ,ದೇವಪ್ಪ ಪಟ್ಟೇದಾರ,ಮರಿಲಿಂಗಪ್ಪ ಹುಣಸಗಿ,ಮರಿಲಿಂಗಪ್ಪ ದೇವಿಕೇರಿ,ಮಹೇಶ ಸುಂಗಲ,ಮಹ್ಮದ್ ಹನೀಪ್,ಜಾವೇದ್ ಹುಸೇನಿ,ತಮ್ಮಣ್ಣ ಹೆಬ್ಬಾಳ,ಪರಶುರಾಮ ಚಿಕ್ಕನಹಳ್ಳಿ,ದೇವಪ್ಪ ಚಿಕ್ಕನಹಳ್ಳಿ ಸೇರಿದಂತೆ ರೈತ ತಾಯಪ್ಪ ಕುಟುಂಬಸ್ಥರಿದ್ದರು.
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…