ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾಗಿ ಶಾಬಾದಿ ಆಯ್ಕೆ

0
33

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ರವೀಂದ್ರ ಶಾಬಾದಿ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ ನ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ್ ಸತ್ಯಂಪೇಟೆ ತಿಳಿಸಿದ್ದಾರೆ.

ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಬಸವರಾಜ ಚಟ್ನಳ್ಳಿ ರಾಜೀನಾಮೆ ಸಲ್ಲಿಸಿದ್ದರಿಂದ ಸೋಮವಾರ ಸಂಜೆ ಸಭೆ ಸೇರಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ರವೀಂದ್ರ ಶಾಬಾದಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪರಿಷತ್ ರಾಜ್ಯ ಉಪಾಧ್ಯಕ್ಷ ಶರಣಬಸವ ಕಲ್ಲಾ, ಜಿಲ್ಲಾ ಉಪಾಧ್ಯಕ್ಷ ನೀಲಕಂಠ ಅವುಂಟಿ, ನಿಕಟಪೂರ್ವ ಅಧ್ಯಕ್ಷ ಡಾ. ಬಸವರಾಜ ಚಟ್ನಳ್ಳಿ, ಸಂಚಾಲಕ ಸತೀಶ ಸಜ್ಜನ್, ಸದಸ್ಯರಾದ ಪರಮೇಶ್ವರ ಶೆಟಕಾರ, ಸಂಗಣ್ಣ ಜಿ. ಸತ್ಯಂಪೇಟೆ, ಬಸವರಾಜ ಕಲ್ಲಾ, ಶಿವರಾಜ ಅಂಡಗಿ, ಅಯ್ಯಣ್ಣ ನಂದಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here