ಗ್ರಂಥಾಲಯದಲ್ಲಿ ಸಾಹಿತ್ಯ ಚರ್ಚೆ ೧೩ ರಂದು

0
14

ವಾಡಿ: ಸಂಚಲನ ಸಾಹಿತ್ಯ-ಸಾಂಸ್ಕೃತಿಕ ವೇದಿಕೆ ವತಿಯಿಂದ ನ.೧೩ ರಂದು ಇಂಗಳಗಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಾಲಯ ನಮ್ಮೂರ ಜ್ಞಾನ ದೀಪ ಎಂಬ ಸಾಹಿತ್ಯ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.

ರಾವೂರ ಸಚ್ಚಿದಾನಂದ ಪಪೂ ಕಾಲೇಜಿನ ಪ್ರಾಚಾರ್ಯ ಕೆ.ಐ.ಬಡಿಗೇರ ವಿಚಾರ ಮಂಡಿಸಲಿದ್ದು, ಸಂಚಲನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಕಾಶೀನಾಥ ಹಿಂದಿನಕೇರಿ ಅಧ್ಯಕ್ಷತೆ ವಹಿಸುವರು.

Contact Your\'s Advertisement; 9902492681

ಸಂಚಲನ ವೇದಿಕೆಯ ಸಹ ಕಾರ್ಯದರ್ಶಿ ಮಲಿಕ್‌ಪಶಾ ಮೌಜನ್ ಪ್ರಾಸ್ತಾವಿಕ ನುಡಿವರು. ರಾಯಚೂರ ಜಿಲ್ಲಾ ಗ್ರಂಥಾಲಯದ ಗ್ರಂಥಪಾಲಕ ಸತೀಶ ಮರತೂರ, ಗ್ರಾಪಂ ಅಧ್ಯಕ್ಷ ಸುಭಾಶ್ಚಂದ್ರ ಯಾಮೇರ, ಸರಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಸರೋಜ್ ಮಂಜುಳಾ ರಾಣಿ, ಗ್ರಾಮದ ಮುಖಂಡ ಬಸವರಾಜ ಸ್ಥಾವರಮಠ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಸಂಚಲನ ಸಾಹಿತ್ಯ ವೇದಿಕೆಯ ಪ್ರಧಾನ ಕಾರ್ಯದರ್ಶಿ ದಯಾನಂದ ಖಜೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here