ಬಿಸಿ ಬಿಸಿ ಸುದ್ದಿ

ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್.ಸಿ ಮೋರ್ಚಾದಿಂದ ಪ್ರತಿಭಟನೆ

ಶಹಾಬಾದ: ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಬುಧವಾರ ಭಾರತೀಯ ಜನತಾ ಪಾರ್ಟಿ, ಎಸ್.ಸಿ ಮೋರ್ಚಾದ ನಗರಾಧ್ಯಕ್ಷ ಸಂಜಯ ವಿಠಕರ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ನಗರದ ನೆಹರು ವೃತ್ತದ ಬಳಿ ಸಿದ್ದರಾಮಯ್ಯ ಪ್ರತಿಕೃತಿ ದಹನ ಮಾಡಿ, ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶರಣು ವಸ್ತ್ರದ ಮತ್ತು ಚಂದ್ರಕಾಂತ ಗೊಬ್ಬೂರಕರ, ಸಿದ್ಧರಾಮಯ್ಯನವರು ಅಹಿಂದ ಸೋಗಿನಲ್ಲಿ ಜನತಾ ದಳವನ್ನು ತ್ಯಜಿಸಿ ಅಧಿಕಾರದ ದಾಹಕ್ಕಾಗಿ ಕಾಂಗ್ರೇಸ್ ಸೇರಿ, ಕಾಂಗ್ರೆಸ್‌ನಲ್ಲಿದ್ದ ವಿ.ಶ್ರೀನಿವಾಸ ಪ್ರಸಾದ ಹಾಗೂ ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ, ಹೆಚ್. ಮುನಿಯಪ್ಪಾ, ಮೊದಲಾದ ಹೆಸರಾಂತ ದಲಿತ ರಾಜಕಾರಣಿಗಳನ್ನು ಮುಖ್ಯಮಂತ್ರಿ ಗಾದಿಯಿಂದ ವಂಚಿಸಿ ಮುಖ್ಯಮಂತ್ರಿಯಾಗಿ ತಮ್ಮ ಮಗನನ್ನು ಕೂಡ ಶಾಸಕನಾಗಿ ಮಾಡಿದ ಸಿದ್ರಾಮಯ್ಯರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಕೂಡಲೇ ದಲಿತ ಸಮುದಾಯದ ಕ್ಷಮೆಯನ್ನು ಕೇಳಬೇಕು ಎಂದರು.

ಪ್ರತಿಭಟನೆಯಲ್ಲಿ ಮಂಡಲ ಅಧ್ಯಕ್ಷರಾದ ಅಣವೀರ ಇಂಗಿನ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸದಾನಂದ ಕುಂಬಾರ, ಎಸ್.ಸಿ.ಮೊರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಅಮರ ಕೋರೆ, ಸುಭಾ? ಕುಸಾಳೆ, ಉಮೇಶ ಪೋಚಟ್ಟಿ, ಸಂತೋಷ ಹುಲಿ, ಪ್ರಮುಖರಾದ ಕನಕಪ್ಪ ದಂಡಗುಲಕರ, ಸೂರ್ಯಕಾಂತ ವಾರದ, ಸುಭಾ? ಜಾಪೂರ, ಪರಶುರಾಮ ದಂಡಗುಲಕರ, ನಿಂಗಣ್ಣ ಹುಳಗೊಳಕರ, ಬಸವರಾಜ ಬಿರಾದಾರ, ನಗರಸಭೆಯ ಸದಸ್ಯರಾದ ಪಾರ್ವತಿ ಪವಾರ, ಅನೀಲ ದತ್ತಾ, ಅಣ್ಣಪ್ಪ ದಸ್ತಾಪೂರ, ಶಂಕರ ಭಗಾಡೆ, ಭೀಮಯ್ಯ ಗುತ್ತೆದಾರ, ಯುವ ಮೋರ್ಚಾ ಅಧ್ಯಕ್ಷ ದಿನೇಶ ಗೌಳಿ, ಶ್ರೀನಿವಾಸ ನೇದಲಗಿ,ರೇವಣಸಿದ್ಧ ಮತ್ತಿಮಡು, ಶರಣು ಕವಲಗಿ,ಪ್ರಭು ಹಳ್ಳಿ, ನಾರಾಯಣ ಕಂದಕೂರ,ಮನೋಹರ ಮೇತ್ರೆ, ರಾಮು ಕುಸಾಳೆ,ಶ್ರೀನಿವಾಸ ದೇವಕರ್,ಅರುಣ ದೇವಕರ್, ಅಂಬಾದಾಸ ಗುರೂಜಿ,ಯಲ್ಲಪ್ಪ ದಂಡಗುಲಕರ್,ದೇವೆಂದ್ರ ಯಲಗೋಡಕರ್,ದತ್ತು ಘಂಟಿ,ಯಲ್ಲಪ್ಪ ಜಾಲಹಳ್ಳಿ,ಬಸವರಾಜ ರ‍್ಯಾಪನೂರ,ಶ್ರೀಧರ ಜೋಷಿ, ಶಾಂತಕುಮಾರ ಮಾಣಿಕ,ನೀಂಗಾರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ ಸೂಡಿ,ಲತಾ ಸಂಜೀವ, ಆರತಿ ಕೂಡಿ, ಶಶಿಕಲಾ ಸಜ್ಜನ್, ಪಾರ್ವತಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

emedialine

Recent Posts

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

4 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

7 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

14 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago