ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯೂ ಮತ್ತು ಬಿ.ಎಚ್. ನಿರಗುಡಿಯೂ…!

  • ಡಾ. ಶಿವರಂಜನ್ ಸತ್ಯಂಪೇಟೆ

ಬಾಬು ಹಾಗೂ ನಿರಗುಡಿ ಎಂಬ ಹೆಸರಿನಿಂದ ಜಿಲ್ಲೆಯಾದ್ಯಂತ ಚಿರಪರಿಚಿರಾಗಿರುವ ಬಿ.ಎಚ್. ನಿರಗುಡಿಯವರು ಈ ಬಾರಿಯ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಮೂಲತಃ ಆಳಂದ ತಾಲ್ಲೂಕಿನ ಕವಲಗಾ ಗ್ರಾಮದವರಾದರೂ ಬಾಲ್ಯದಿಂದಲೇ ಕಲಬುರಗಿಯಲ್ಲಿ ವಾಸವಾಗಿದ್ದಾರೆ. ಕನ್ನಡ ಎಂ.ಎ., ಎಂ.ಫಿಲ್ ಹಾಗೂ ಎಂ.ಇಡಿ ಪದವೀಧರರಾಗಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ, ಕನ್ನಡ ಭಾಷೆ ಹಾಗೂ ವ್ಯಾಕರಣ, ಕನ್ನಡ ಸಾಹಿತ್ಯ ದರ್ಪಣ, ಅಬ್ದುಲ್ ಕಲಾಂ, ಮಾಧ್ಯಮ ಲೋಕ, ಆದರ್ಶ ಶಿಕ್ಷಕ ಹೇಗಿರಬೇಕು?, ಕಾವ್ಯ ಸಂಭ್ರಮ ಸೇರಿದಂತೆ ಸುಮಾರು 11ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷರಾಗಿ ಸಾಕಷ್ಟು ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಿ ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಹಿಂದೆ ಕಸಾಪ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಅವಧಿಯಲ್ಲಿ ಗೌರವ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮೇಲಾಗಿ ಮಹಿಪಾಲರೆಡ್ಡಿ ಮುನ್ನೂರ ಗೆಲುವಿನಲ್ಲಿ ಸಾಕಷ್ಟು ಶ್ರಮವಹಿಸಿ ತಮ್ಮ ಕತೃತ್ವ ಶಕ್ತಿಯನ್ನು ಸಾಬೀತುಪಡಿಸಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪರಾಭವಗೊಂಡು ಈ ಬಾರಿ ಮತ್ತೆ ಕಣಕ್ಕಿಳಿದು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಸಾಹಿತ್ಯ ಸಾರಥಿ ಎಂಬ ಮಾಸಿಕ ಪತ್ರಿಕೆ ಆರಂಭಿಸಿ ಅನೇಕ ಉದಯೋನ್ಮುಖರಿಗೆ ವೇದಿಕೆ ಒದಗಿಸಿದ್ದಾರೆ.

ಪತ್ರಕರ್ತರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಾಗಿದ್ದಾರೆ. ನಗರದ ಖಾಸಗಿ ಕಾಲೇಜಿನ ಕನ್ನಡ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ಯುವ ಪ್ರಶಸ್ತಿ, ರಾಜ್ಯ ಯುವ ಪ್ರಶಸ್ತಿ, ಗುಲ್ಬರ್ಗ ವಿವಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಶ್ರೇಷ್ಠ ಶಿಕ್ಷಕ ಪ್ರಶಸ್ತಿ, ದೇವರಾಜ ಅರಸ ಪ್ರಶಸ್ತಿ, ಕರುನಾಡು ಪ್ರಶಸ್ತಿ, ಅಕ್ಷರ ಲೋಕದ ನಕ್ಷತ್ರ ಪ್ರಶಸ್ತಿ, ಗೌಡ ಗೌರವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಣಾಳಿಕೆ: ಬಾಪೂಗೌಡ ದರ್ಶನಾಪುರ ರಂಗ ಮಂದಿರಕ್ಕೆ ಅತ್ಯಾಧುನಿಕ ಧ್ವನಿ ವರ್ಧಕ, ಬೆಳಕು, ಸುಖಾಸನ ಅಳವಡಿಸಿಸುವುದು, ಪ್ರತಿ ವರ್ಷ ಪುಸ್ತಕ ಸಂತೆ ಆಯೋಜಿಸುವುದು, ಶಿಕ್ಷಕರ, ಮಕ್ಕಳ, ಮಹಿಳಾ, ವೈದ್ಯ, ಕೃಷಿ ಸಮ್ಮೇಳನ ನಡೆಸುವುದು, ಬಯಲು ರಂಗ ಮಂದಿರ ನಿರ್ಮಾಣಕ್ಕೆ ಆದ್ಯತೆ, ಸಾಹಿತ್ಯಕ ಮತ್ತು ಕನ್ನಡಪರ ಸಂಘಟನೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಿಗೆ ಕನ್ನಡ ಭವನದ ರಂಗ ಮಂದಿರವನ್ನು ರಿಯಾಯಿತಿ ದರದಲ್ಲಿ ನೀಡುವುದು ಸೇರಿದಂತೆ ಹತ್ತು ಹಲವಾರು ಯೋಜನೆಗಳನ್ನು ತಮ್ಮ ಪ್ರಣಾಳಿಕೆಯ ಪಟ್ಟಿ ಮಾಡಿಕೊಂಡು ಮತದಾರರ ಮನೆ, ಮನ ತಟ್ಟುತ್ತಿದ್ದಾರೆ.

ಜಿಲ್ಲೆಯ ಸಾಮನ್ಯ ಮತದಾರರ ಜೊತೆಗೆ ಪ್ರಜ್ಞಾವಂತ, ಪ್ರಗತಿಪರ ಹಾಗೂ ಸ್ವಾಮೀಜಿಗಳ ಬೆಂಬಲ ತಮಗಿದ್ದು, ಗೆಲುವಿಗಾಗಿ ಕಳೆದ ಸಲಕ್ಕಿಂತ ಈ ಬಾರಿ ಸಾಕಷ್ಟು ಶ್ರಮಿಸುತ್ತಿದ್ದೇನೆ. ಮತದಾರರು ಈ ಬಾರಿ ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನಾನು, ಒಂದು ಬಾರಿ ಅಧ್ಯಕ್ಷನಾಗಿ ಆಯ್ಕೆಯಾದರೆ ಮತ್ತೊಂದು ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಮುಂದಿನ ಸಲ ಮತ್ತೊಬ್ಬರಿಗೆ ಅವಕಾಶ ಮಾಡಿ ಕೊಡುವೆ. ದಯವಿಟ್ಟು ಮತ ಹಾಕಿ ಗೆಲ್ಲಿಸಿ. – ಬಿ.ಎಚ್. ನಿರಗುಡಿ

emedialine

View Comments

  • ಲೇಖನ ತುಂಬಾ ಚೆನ್ನಾಗಿ ಇದೆ ಸರ್...

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

2 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

8 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

20 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

20 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420