ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕ ಸ್ಥಾಪನೆಗೆ ಆಗ್ರಹ

0
8

ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘ ಹಾಗೂ ಸೂಲೂರು ಗ್ರಾಮಪಂಚಾಯತಿಯ ಸಂಯುಕ್ತಾಶ್ರಯದಲ್ಲಿ ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಸ್ಥಾಪಿಸಲಾಯಿತು.

ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಪರಮಪೂಜ್ಯ ಶ್ರೀ ವೀರೇಂದ್ರ ಹೆಗಡೆಯವರು ಮತ್ತು ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಆಶೀರ್ವಾದದಿಂದ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಂಘದ ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ್, ಸೂಲೂರು ಗ್ರಾಮ ಪಂಚಾಯಿತಿ ಪಿಡಿಒ.ಬಾಲಾಜಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎಂ.ನಾರಾಯಣಸ್ವಾಮಿ, ನಂದಿನಿ ಮಾಲತೇಶ್, ಮೇಷ್ಟ್ರು ನಾರಾಯಣಸ್ವಾಮಿ, ಹಾಗೂ ಗ್ರಾಮದ ಮುಖಂಡರಾದ ಬಿಸಣ್ಣ, ಚಂದ್ರೇಗೌಡ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here