ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಒಡೆದ ಟೆಂಗು ಗುತ್ತಿಗೆ ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಲು ಆಗ್ರಹ

ಕಲಬುರಗಿ: ಕಾಳಗಿ ತಾಲೂಕಿನ ರೇವಣ್ಣ (ರಟಕಲ್) ಗ್ರಾಮದಲ್ಲಿರುವ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಒಡೆದ ಟೆಂಗು (ಹಸಿ ಟೆಂಗು) ಗುತ್ತಿಗೆ ಹರಾಜು ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹಿಂದಿನ ಪದ್ಧತಿಯಂತೆ ಅರ್ಚಕರಿಗೆ ನೀಡುವಂತೆ ವಿರಶೈವ ಸಮಾಜದ ಚಿಂಚೋಳಿ ತಾಲ್ಲೂಕು ಅಧ್ಯಕ್ಷರಾದ ಸಂಜೀವ್ ಕುಮಾರ್ ಪಾಟೀಲ್ ಅವರ ನೇತೃತ್ವದಲ್ಲಿ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.

15 ರಂದು 1 ವರ್ಷದ ಅವಧಿಗೆ ಗುತ್ತಿಗೆ ನೀಡಲು ಬಹಿರಂಗವಾಗಿ ಹರಾಜು ಮಾಡಲು ಪ್ರಕಟಣೆ ಹೊರಡಿಸಿದ್ದು, ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಅರ್ಚಕರು ಸುಮಾರು 200 ವರ್ಷಗಳಿಂದ ದೇವರ ಪೂಜೆ ಮಾಡುತ್ತಾ ಬರುತ್ತಿದ್ದು ಹಾಗೂ ಅವರ ಉಪ ಜೀವನವನ್ನು ದೇವಸ್ಥಾನಕ್ಕೆ ಬರುವ ಭಕ್ತರು ಒಡೆದ ಟೆಂಗಿನಿಂದ ಬರುವ ಅಲ್ಪ ಸ್ವಲ್ಪ ಆದಾಯದಿಂದಲೇ 5 ಕುಟುಂಬಗಳು ಉಪ ಜೀವನವನ್ನು ಮಾಡುತ್ತಾ ತಲೆತಲಾಂತರದಿಂದ ಬರುತ್ತಿದ್ದಾರೆ ಹಾಗೂ ಅವರು ಸರ್ಕಾರದಿಂದ ಯಾವುದೇ ವೇತನವನ್ನು ಪಡೆಯದೇ ದೇವರ ಪೂಜೆಯನ್ನು ನಿರ್ವಹಿಸುತ್ತಾ ಬರುತ್ತಿದ್ದಾರೆ.

ಸದರಿ ದೇವಸ್ಥಾನದ ಹಳಯೆ ಪದ್ದತಿಯಂತೆ ಅರ್ಚಕರ ಉಪ ಜೀವನಕ್ಕಾಗಿ ಅನುಕೂಲವಾಗುವಂತೆ ದೇವಸ್ಥಾನದಲ್ಲಿ ಭಕ್ತಾರು ಒಡೆಯುವ ಟೆಂಗು (ಹಸಿ ಟೆಂಗು) ಹರಾಜು ಪ್ರಕ್ರಿಯೆಯನ್ನು ಕೈಬಿಟ್ಟು ಹಳೆಯ ಪದ್ಧತಿಯನ್ನು ಅರ್ಚಕರಿಗೆ ನೀಡಬೇಕೆಂದು ವೀರಶೈವ ಸಮಾಜ ವತಿಯಿಂದ ವಿನಂತಿಸಿದ್ದು, ಹರಾಜು ಪ್ರಕ್ರಿಯೆಯನ್ನು ರದ್ದುಗೊಳಿಸದಿದ್ದರೆ ರೇವಣ್ಣ (ರಟಕಲ್) ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆಂದು ಎಂದು ಸಮಾಜ ತಾಲೂಕ ಯುವ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ, ತಾಲೂಕ ವೀರಶೈವ ಸಮಾಜದ ಮುಖಂಡರಾದ ಆನಂದ್ ಹಿತ್ತಲ್, ಶಂಕರ ಶಿವಪುರಿ, ನಾಗರಾಜ್ ಮಲಕೂಡ್, ನಾಗರಾಜ ಸೀಳಿನ್, ನಾಗೇಶ್ ಸುಂಕದ, ಸುನಿಲಕುಮಾರ ಮನ್ನಳ್ಳಿ, ಹಣಮಂತ ಕೋರೆ, ವಿಶ್ವನಾಥರೆಡ್ಡಿ ಚಿಮ್ಮಂಚೋಡ ಸೇರಿದಂತೆ ಇತರರು ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420