೧೧ ನವೆಂಬರ್ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನಾ ದಿನ

ಕಲಬುರಗಿ: ’ಅತ್ಯಂತ ತರಾತುರಿಯಲ್ಲಿ ಎನ್‌ಇಪಿ-೨೦೨೦ರ ಹೇರಿಕೆಯನ್ನು ಒಪ್ಪುವುದಿಲ್ಲ’, ’ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್ ಒದಗಿಸಿ’ ಎಂಬ ಘೋಷಣೆಗಳನ್ನು ಕೂಗುತ್ತಾ, ಇಂದು ನಗರದ ಜಿಲ್ಲಾಧಿಕಾರಿ ಕಛೇರಿ ಎದರುಗಡೆ ಹತ್ತಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಎಐಡಿಎಸ್‌ಓ ನೇತೃತ್ವದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಸಭೆಯನ್ನು ಉದ್ದೇಶಿಸಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಎಐಡಿಎಸ್‌ಓ ನ ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿ?ನಿ ರವರು, ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಕರ್ನಾಟಕ ರಾಜ್ಯದಲ್ಲಿ ಎನ್‌ಇಪಿ-೨೦೨೦ ಅನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಲಾಗಿದೆ. ಇದನ್ನು ರಾಜ್ಯದ ಶಿಕ್ಷಣ ತಜ್ಞರು, ಉಪನ್ಯಾಸಕರು, ಸಾಹಿತಿಗಳು, ವಿದ್ಯಾರ್ಥಿಗಳು ಹಾಗು ಪೋಷಕರು ವ್ಯಾಪಕ ವಿರೋಧಿಸಿದ್ದೇವೆ. ಅತ್ಯಂತ ತರಾತುರಿಯಲ್ಲಿ, ಯಾವುದೇ ಪೂರ್ವಭಾವಿ ತಯಾರಿ ಇಲ್ಲದೆ ಏಕಾಏಕಿ ಎನ್‌ಇಪಿ-೨೦೨೦ರ ಭಾಗವಾಗಿರುವ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಅನುಷ್ಠಾನಕ್ಕೆ ತಂದಿದೆ. ತರಗತಿಗಳು ಆರಂಭವಾಗಿದ್ದರೂ ಸಹ, ಸರ್ಕಾರದ ಬಳಿ ಪಠ್ಯಕ್ರಮ ತಯಾರಿಲ್ಲ, ಪಠ್ಯಪುಸ್ತಕಗಳು ಇಲ್ಲ. ಆ ಮೂಲಕ ರಾಜ್ಯದ ಶಿಕ್ಷಕ ವರ್ಗ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಂಧಕಾರವಾಗಿದೆ. ಎಂದು ಅಭಿಪ್ರಾಯ ಪಟ್ಟರು.

ಮುಂದುವರೆದು, ರಾಷ್ಟ್ರೀಯ ಶಿಕಸಷ ಣಿತಿ-೨೦೨೦ ಅನ್ನು ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರ, ಹಿಂದಿನ ಶೈಕ್ಷಣಿಕ ನೀತಿಯಲ್ಲಿ ಯಾವ ಲೋಪದೋಷಗಳಿದ್ದವು, ಯಾವ ಕಾರಣಕ್ಕೆ ನೂತನ ನೀತಿಯ ಅನುಷ್ಠಾನ ಆಗುತ್ತಿದೆ ಎಂಬ ವಿಷಯಗಳ ಬಗ್ಗೆ ಯಾವುದೇ ಉತ್ತರ ನೀಡಿಲ್ಲ ಅಷ್ಟೇ ಅಲ್ಲ, ಅತ್ಯಂತ ವ್ಯಾಪಕ ವಿರೋಧಗಳ ನಡುವೆಯೂ, ಅಪ್ರಜಾತಾಂತ್ರಿಕವಾಗಿ, ತರಾತುರಿಯಲ್ಲಿ ಶಿಕ್ಷಣ ನೀತಯನ್ನು ಜಾರಿ ಮಾಡುತ್ತಿದೆ.

ರಾಜ್ಯದ ಶಿಕ್ಷಣ ವ್ಯವಸ್ಥೆ ಈಗಾಗಲೇ ಅತ್ಯಂತ ಅಧೋಗತಿಯ ಸ್ಥಿತಿಯಲ್ಲಿ ಇದೆ. ಶಿಕಷಣದ ಖಾಸಗೀಕರಣ, ದುಬಾರಿ ಶುಲ್ಕಗಳಿಂದ ಶಿಕ್ಷಣ ಪಡೆಯುವವರ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ. ಕಳೆದ ೧೫ ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು ೯ ಸಾವಿರ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ಏಕ ಶಿಕ್ಷಕ ಶಾಲೆಗಳು ಶೇ.೫೮ರಷ್ಟುಇದೆ. ಕೇವಲ ೧೩ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಇದ್ದರೆ, ಬರೋಬ್ಬರಿ ೨೧೦ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಕಳೆದ ಕೆಲವು ವರ್ಷಗಳಲ್ಲಿ ತಲೆ ಎತ್ತಿವೆ. ೧೭ ಸರ್ಕಾರಿ ವೈದ್ಯಕೀಯ ಕಾಲೇಜುಗಳಿದ್ದರೆ, ೩೮ ಖಾಸಗೀ ವೈದ್ಯಕೀಯ ಕಾಲೇಜುಗಳಿವೆ. ಅಂದರೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಏರುತ್ತಿದೆ, ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಇಳಿಮುಖವಾಗುತ್ತಿದೆ.

ಈ ಸವಾಲುಗಳಿಗೆ ಎನ್‌ಇಪಿ-೨೦೨೦ ಉತ್ತರ ನೀಡಿದೆಯೇ? ಸರ್ಕಾರಿ ಶಾಲೆಗಳಲ್ಲಿ ೩೦ಕ್ಕಿಂತ ಕಡಿಮೆ ಇರುವ ಶಾಲೆಗಳನ್ನು ಒಂದೆಡೆ ಸೇರಿಸಿ ’ಸಮೂಹ ಶಾಲೆ’ಗಳಾಗಿ ಮಾಡುತ್ತೇವೆ ಎಂದು ಪ್ರತಿಪಾದಿಸುವ ಎನ್‌ಇಪಿ, ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು, ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಶಿಕ್ಷಕರ ನೇಮಕಾತಿ ಮಾಡಲು ಅಥವಾ ೩.೨ ಕೋಟಿಯಷ್ಟು ಮಕ್ಕಳು ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಸಂದರ್ಭದಲ್ಲಿ, ಅವರನ್ನು ಹೇಗೆ ವಾಪಸ್ ಶಿಕ್ಷಣದ ಪರಿಧಿಗೆ ತರಬೇಕು, ಅವರನ್ನು ಹೇಗೆ ಪ್ರೇರೇಪಿಸಬೇಕು, ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸಮೂಹ ಶಾಲೆ ಎಂಬ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ದುರಂತ.

ಇದರೊಂದಿಗೆ, ಈ ನೀತಿಯಲ್ಲಿ ಪ್ರಸ್ತಾಪವಾಗಿರುವ ಹಲವು ಅಂಶಗಳು ನೇರವಾಗಿ ಶಿಕ್ಷಣದ ಖಾಸಗೀಕರಣ, ಕೇಂದ್ರೀಕರಣ ಹಾಗು ಕೋಮುವಾದಿಕರಣಕ್ಕೆ ಕಾರಣವಾಗುತ್ತದೆ ಎಂಬುದರ ಕುರಿತು ಅಭಿಪ್ರಾಯಗಳು ಬಂದಿವೆ. ಈ ಎಲ್ಲ ಕಾರಣಗಳಿಂದ, ರಾಜ್ಯ ಸರ್ಕಾರ ಶಿಕ್ಷಣದಲ್ಲಿ ಹೇರಿರುವ ಎನ್‌ಇಪಿ-೨೦೨೦ ಅನ್ನು ವಾಪಸ್ ಪಡೆಯಬೇಕು ಎಂದು ವಿದ್ಯಾರ್ಥಿಗಳು, ಶಿಕ್ಷಕರು ಆಗ್ರಹಿಸುತ್ತೇವೆ ಎಂದು ಹೇಳಿದರು.

ಅದೆರಿತೀಯಾಗಿ ಪ್ರತಿಭಟನೆಯನ್ನು ಉದ್ದಶಿಸಿ ಜಿಲ್ಲಾ ಸಮಿತಿ ಸದಸ್ಯರಾದ ತುಳಜರಾಮ ಎನ್ ಕೆ ಮಾತನಾಡುತ್ತಾ ಪ್ರತಿಭಟನಾ ದಿನದ ಮತ್ತೊಂದು ಬೇಡಿಕೆಯಾಗಿದ್ದ ಉಚಿತ ಬಸ್‌ಪಾಸ್ ಎಲ್ಲ ವಿದ್ಯಾರ್ಥಿಗಳಿಗೂ ಒದಗಿಸಿ ಎಂದು ಆಗ್ರಹಿಸಿದರು. ಕೋವಿಡ್ ಮಾಹಾಮಾರಿ ಅಪ್ಪಳಿಸಿ, ಲಾಕ್‌ಡೌನ್ ಆದ ಹೊನ್ನೆಲೆಯಲ್ಲಿ ಶೈಕ್ಷಣಿಕ ವರ್ಷವೇ ಏರುಪೇರಾಗಿತ್ತು. ಲಕ್ಷಾಂತರ ಕುಟುಂಬಗಳು ಆರ್ಥಿಕವಾಗಿ ನಲುಗಿರುವ ಹಿನ್ನೆಲೆಯಲ್ಲಿ, ಸರ್ಕಾರ ಶಾಲಾ ಕಾಲೇಜು ಶುಲ್ಕದ ಜೊತೆ ಬಸ್‌ಪಾಸ್ ಶುಲ್ಕವನ್ನು ಕಟ್ಟಬೇಕು ಎಂಬ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹೊರಿಸಬಾರದು. ಈ ವರ್ಷ ಎಲ್ಲ ವಿದ್ಯಾರ್ಥಿಗಳಿಗೂ ಬಸ್‌ಪಾಸ್ ಉಚಿತವಾಗಿ ನೀಡಬೇಕು ಎಂದು ಹೇಳಿದರು.

ಪ್ರತಿಭಟನೆಯ ನೆತೃತ್ವವನ್ನು ಜಿಲ್ಲಾ ಸಮಿತಿ ಸದಸ್ಯರಾದ ಅರುಣ್ ಹಿರೆಬಾನೂರ ವಹಿಸಿದ್ದರು. ಸಭೆಯಲ್ಲಿ ಎಐಡಿಎಸ್‌ಓ ಜಿಲ್ಲಾಧ್ಯಕ್ಷರಾದ ಹಣಮಂತ ಎಸ್ ಹೆಚ್, ಜಿಲ್ಲಾ ಸಮಿತಿ ಸದಸ್ಯರಾದ ಶಿಲ್ಪಾ ಬಿ ಕೆ,ವೆಂಕಟೇಶ, ಪ್ರೀತಿ ದೊಡ್ಡಮನಿ, ಕಿರಣ್ ಜಿ ಮಾನೆ, ನಾಗರಾಜ ರಾವೂರ್ ಹಾಗೂ ಹಲವಾರು ವಿದ್ಯಾ??ಗಳು ಭಾಗಿಯಾಗಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

11 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

11 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

11 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

11 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

12 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420