ಬಿಸಿ ಬಿಸಿ ಸುದ್ದಿ

15 ರಂದು ರೈತ ಕೃಷಿ ಸಾಲಕ್ಕಾಗಿ ಮತ್ತು  ಸಹಕಾರ ಸಂಘಗಳ ಉಳಿವಿಗಾಗಿ ರೈತ ಸಮಾವೇಶ

ಕಲಬುರಗಿ:  ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಇದ್ದಾಗ ರೈತರ 50,000 ಸಾಲ ಮನ್ನಾ ಮಾಡಿದ್ದಾರೆ ಆ ಹಣ ರೈತರಿಗೆ ಡಿಸಿಸಿ ಬ್ಯಾಂಕಿನವರು ಹಣಕಾಸಿನ ನಿರ್ವಹಣೆ ತಪ್ಪು ಮಾಡಿದ್ದರಿಂದ ಆ ಹಣ ಮನ್ನ ಮಾಡದೇ ರೈತರಿಗೆ ಅನ್ಯಾಯವಾಗಿದೆ ಎಂದು ಸಿಪಿಐ(ಎಂ) ಪಕ್ಷದ ಮುಖಂಡ ಶರಬಸಪ್ಪ ಮಮಶೇಟಿ ಆರೋಪಿಸಿದ್ದಾರೆ.

ಕಲಬುರಗಿ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಸಿಸಿ ಬ್ಯಾಂಕಿನ ಹಣಕಾಸಿನ ನಿರ್ವಹಣೆ ಕಾನೂನು ಕ್ರಮಬದ್ಧವಾಗಿ ನಡೆಯಲಿಲ್ಲ, 2002 ನೂರು ಜನರಿಗೆ ಬೇಕಾಬಿಟ್ಟಿಯಾಗಿ ಸಾಲ ನೀಡಿರುವುದೇ ಬ್ಯಾಂಕ್‌ ದಿವಾಳಿ ಆಗಲು ಕಾರಣವಾಗಿದೆ ಅವರಷ್ಟೇ ಡಿಸಿಸಿ ಬ್ಯಾಂಕ್‌ ದಿವಾಳಿ ಆಗಿದ್ದಲ್ಲ ಜಿಲ್ಲೆಯಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘಗಳಿಂದ ಸಾಲ ಪಡೆದ ಎಲ್ಲಾ ರೈತರಿಗೂ ಹಿಂದಿನ ಸರ್ಕಾರದ ಸಿದ್ದರಾಮಯ್ಯನವರ ಆಡಳಿತ ಸರ್ಕಾರದಲ್ಲಿ ಸಾಲ ಪಡೆದ ರೈತರಿಗೆ ಎಲ್ಲರಿಗೂ ಅನ್ಯಾಯವಾಗಿದೆ ಎಂದರು.

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ ಸತತವಾಗಿ ಈ ತಪ್ಪು ಕಳಪೆ ಹಣಕಾಸು ನಿರ್ವಹಣೆ ರೈತರ ಹಿತಾಸಕ್ತಿ ಕಡೆಗಣನೆ ಭ್ರಷ್ಟಾಚಾರ ಸ್ವಜನಪಕ್ಷಪಾತ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ ಬ್ಯಾಂಕಿನ ಸಾಲದ ನೀತಿ ಕಡೆಗಣಿಸಿ ರೈತರ ಹಿತ ಕಡೆಗಣಿಸಿ ಸಾಲಮನ್ನಾ ಮಾಡಿರುವುದು ಸೂಕ್ತವಾದ ತನಿಖೆಯಾಗಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.

ಸಾಲ ಮಂಜೂರಾತಿಯನ್ನು ಡಿಸಿಸಿ ಬ್ಯಾಂಕಿನ ಬದಲಿಗೆ ಅಪೆಕ್ಸ್‌ ಬ್ಯಾಂಕಿಗೆ ಕಾರ್ಯನಿರ್ವಹಿಸಲು ಹಣಕಾಸಿನ ವ್ಯವಹರಿಸಲು ಅನುಮತಿ, ವ್ಯವಸಾಯ ಸೇವಾ ಸಹಕಾರ ಸಂಘಗಳಲ್ಲಿ ದುಡಿಯುವ ಸಿಬ್ಬಂದಿ ಬದುಕಿನ ಉದ್ದಕ್ಕೂ ಸಂಬಳದಲ್ಲಿ ದುಡಿಯುತ್ತಿರುವವರಿಗೆ ಸೇವಾ ಸೌಲಭ್ಯಗಳು ಒದಗಿಸಿ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಳಿಗೆ ಆಗ್ರಹಿಸಿ,15 ರಂದು  ನೆಹರು ಗಂಜನ ರೈತ ಭವನ್‌ ರೈತ ಕೃಷಿ ಸಾಲಕ್ಕಾಗಿ ಸಹಕಾರ ಸಂಘಗಳ ಉಳಿವಿಗಾಗಿ ಸಮಾವೇಶ ಈ ಸಮಾವೇಶವನ್ನು ಕಾಮ್ರೇಡ್‌ ಮಾರುತಿ ಮಾನಪಡೆ ನೇತೃತ್ವದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮುಕುಂದ್ರಾವು ಪಾಟೀಲ, ರೇವಣಸಿದ್ದ ಹೆಬ್ಬಾಳ, ಅವ್ವಣ್ಣಾ ಕವುಲಗಾ, ಅಲ್ತಾಫ್‌ ಇನಾಮಂದಾರ್‌, ಬಸವರಾಜ್‌ ಬಿರಾದಾರ, ಹಾಗರಗಿ ಶಾಂತಪ್ಪ ಪಾಟೀಲ, ವಿರಬದ್ರ ಕಲಬುರಗಿ ಅಶೋಕ್‌ ಮ್ಯಾಗೇರಿ, ಸುಧಾಮ ಧನ್ನಿ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420