ಬಿಸಿ ಬಿಸಿ ಸುದ್ದಿ

ನಿಯಮಗಳ ಹೆಸರಲ್ಲಿ ಭ್ರಷ್ಟ ಸರ್ಕಾರವನ್ನು ರಕ್ಷಿಸುತ್ತಿರುವ ಸ್ಪೀಕರ್: ಅಂಬಾರಾಯ ಅಷ್ಟಗಿ

ಕಲಬುರಗಿ: ರಾಜ್ಯ ಸಮ್ಮಿಶ್ರ ಸರ್ಕಾರವು ಅತ್ಯಂತ ಭ್ರಷ್ಟಾಚಾರದ ಕೂಪವಾಗಿದ್ದೂ, ಇಂತಹ ಸರ್ಕಾರವನ್ನು ಸ್ಪೀಕರ್ ಕೆ ಆರ್ ರಮೇಶ ಕುಮಾರ್ ಅವರು ನಿಯಮಗಳ ಹೆಸರಲ್ಲಿ ರಕ್ಷಿಸುತ್ತರುವುದು ಕರ್ನಾಟಕದ ಜನತೆಗೆ ಮಾಡುತ್ತಿರುವ ದ್ರೋಹ ವಾಗಿದೆ ಎಂದು ಕಲಬುರಗಿ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಹಾಗೂ ಕಾನೂನು ಸ್ನಾತಕೋತ್ತರ ಪದವಿಧರರೂ ಆದ  ಅಂಬಾರಾಯ ಅಷ್ಟಗಿ ಖಂಡಿಸಿದ್ದಾರೆ.

ಸ್ಪೀಕರ್ ಅವರ ಕ್ರಮವು ನಿಯಮಗಳನ್ನು ಮುಂದಿಟ್ಟುಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ವಿಧಾನವನ್ನು ಅನುಸರಿಸಿಸುತ್ತಿದ್ದಾರೆ.ಶಾಸಕರು ವ್ಹಿಪ್ ಜಾರಿಗೋಳಿಸುವ ಮೋದಲೇ ರಾಜೀನಾಮೆ ನಿಡಿರುವುದರಿಂದ ಅನರ್ಹತೆ ಪ್ರಶ್ನೆಯೇ ಉದ್ಭವಿಸುವುದಿಲ್ಲ.

ಆದ್ದರಿಂದ ಈ ಕೂಡಲೇ ವಿಧಾನ ಸಭಾ ಅಧ್ಯಕ್ಷರು  ಸ್ವ- ಇಚ್ಛೆಯಿಂದ ನೀಡಿದ  ಶಾಸಕರ ರಾಜೀನಾಮೆಗಳನ್ನು  ಅಂಗೀಕರಿಸಿ ಮುಂದಿನ ಸುಭದ್ರ ಸರ್ಕಾರ ರಚನೆಗೆ ಅನುಕೂಲ ಮಾಡಿಕೊಡುವ ಮೂಲಕ ಸಂವಿಧಾನಕ್ಕೆ ಬದ್ಧವಾಗಿ ವರ್ತಿಸಿ ಸ್ಪೀಕರ್ ಹುದ್ದೆಯ ಘನತೆಯನ್ನು  ಎತ್ತಿ ಹಿಡಿಯಬೇಕೆಂದು ಮಾನ್ಯ ಸ್ಪೀಕರ್ ಅವರಿಗೆ ಅಂಬಾರಾಯ  ಅಷ್ಟಗಿ  ಆಗ್ರಹಿಸಿದ್ದಾರೆ..

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420