ನನಗೆ ಮತ ನೀಡಿ ಗೆಲ್ಲಿಸಬೇಕೆಂದು ತೇಗಲತಿಪ್ಪಿ ಮತದಾರರಲ್ಲಿ ಮನವಿ

ಶಹಾಬಾದ: ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತಿನ ಜಿಲ್ಲಾ ಘಟಕಕ್ಕೆ ಇದೇ ನವೆಂಬರ್ ೨೧ ರಂದು ನಡೆಯಲಿರುವ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಿಂತಿರುವ ನನಗೆ ಮತ ನೀಡುವ ಮೂಲಕ ಗೆಲ್ಲಿಸಬೇಕೆಂದು ಕಸಾಪ ಮತದಾರರಲ್ಲಿ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮನವಿ ಮಾಡಿದರು.

ಅವರು ಶುಕ್ರವಾರ ಶಹಾಬಾದ , ಭಂಕೂರ ಹಾಗೂ ಹೊನಗುಂಟಾ ಗ್ರಾಮಗಳಿಗೆ ಬೇಡಿ ನೀಡಿ, ಮತದಾರರಲ್ಲಿ ಮತ ನೀಡುವಂತೆ ಮತಯಾಚಿಸಿದರು.

ಕಳೆದ ಎರಡು ದಶಕಗಳಿಂದ ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ,ನೆಲ,ಜಲ, ಭಾಷೆ,ಗಡಿ, ಕವಿಗೋಷ್ಠಿ, ವಿಚಾರ ಸಂಕೀರ್ಣಗಳು, ಸಮ್ಮೇಳನಗಳು, ಸಾವಿರಾರು ಕಾರ್ಯಕ್ರಮಗಳು ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಾ, ಹೋಬಳಿ, ಗ್ರಾಮ ಮಟ್ಟದಲ್ಲಿ ನಿತ್ಯ ನಿರಂತರ ಕನ್ನಡದ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದೆನೆ. ಜಿಲ್ಲೆಯ ಉದಯೋನ್ಮುಖ ಸಾಹಿತಿಗಳು, ಲೇಖಕರು ಹಾಗೂ ಕಲಾವಿದರಿಗೆ ಗೌರವ ಸನ್ಮಾನ ಮಾಡುವದರ ಮೂಲಕ ಪ್ರೋತ್ಸಾಹಿಸಲಾಗಿದೆ.

ಸಾಹಿತ್ಯ ಪರಿ?ತ್ತಿನ ಚಟುವಟಿಕೆಗಳನ್ನು ಹೋಬಳಿ ಮಟ್ಟಕ್ಕೂ ವಿಸ್ತರಿಸಿ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ. ಮಾಡಿದ ಕೆಲಸಗಳು ಸಾಕಷ್ಟಿದ್ದರೂ ಮಾಡಬೇಕಾದದು ಇನ್ನೂ ಬಹಳ? ಇದೆ ಎಂಬುದು ನನ್ನ ಅರಿವಿನಲ್ಲಿದೆ.ಈ ದಿಸೆಯಲ್ಲಿ ಕನ್ನಡ ಸಾಹಿತ್ಯ ಪರಿ?ತ್ತನ್ನು ಸಜ್ಜುಗೊಳಿಸುವ ಕಾರ್ಯದತ್ತ ನಾವು ಸಾಗಬೇಕಾಗಿದೆ. ಕನ್ನಡ ಸಾಹಿತ್ಯ ಪರಿ?ತ್ತಿನ ಗ್ರಾಮ ಘಟಕಗಳನ್ನು ಸ್ಥಾಪಿಸುವದರ ಮುಖಾಂತರ ಗ್ರಾಮೀಣ ಪ್ರದೇಶದಲ್ಲಿ ಸಾಹಿತ್ಯಕ ವಾತಾವರಣ ನಿರ್ಮಿಸುವುದು, ಯುವ ಕವಿ, ಲೇಖಕ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸುವ ಹಿರಿಯಾಸೆ ನನ್ನದಾಗಿದೆ.

ಈ ಎಲ್ಲ ಕಾರಣಗಳಿಂದಾಗಿ ನಾನು ನಿಮ್ಮೆಲ್ಲರ ಮುಂದೆ ಬಂದಿದ್ದೇನೆ.ಈ ಬಾರಿ ಬೆನ್ನು ತಟ್ಟಿ ಆಶೀರ್ವದಿಸಿ, ಸಾಹಿತ್ಯ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು,. ಕನ್ನಡವನ್ನು ಕಟ್ಟುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಸಾಹಿತ್ತಿಕ ಬೆಳವಣಿಗೆಗೆ ತಮ್ಮ ಸಲಹೆ-ಸಹಕಾರವನ್ನು ಯಾಚಿಸುತ್ತೇನೆ. ತಾವು ನನ್ನನ್ನು ಬೆಂಬಲಿಸುವ ಮೂಲಕ ಕಸಾಪ ಜಿಲ್ಲಾ ಘಟಕ್ಕೆ ಅಧ್ಯಕ್ಷನಾಗಿ ಆಯ್ಕೆಮಾಡುವಂತೆ ವಿನಂತಿಸಿಕೊಂಡರು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಸುರೇಶ ಬಡಿಗೇರ್, ಸೋಮಶೇಖರ ನಂದಿಧ್ವಜ, ಸಿದ್ದು ಬಾಳಿ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

11 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420