ಶಹಾಬಾದ:ಮಕ್ಕಳೆಂದರೆ ಕೇವಲ ಪೋಷಕರಿಗೆ ಮಾತ್ರವಲ್ಲ ಮೀಸಲಾಗಿರದೆ ಇಡೀ ನಾಗರಿಕ ಸಮಾಜಕ್ಕೆ ಸೇರಿದವರು. ಮಕ್ಕಳ ಬಗ್ಗೆ ಹೆತ್ತವರಿಗಿರುವ ಜವಾಬ್ದಾರಿ ಸಮಾಜ, ಶಿಕ್ಷಕ ವೃಂದ, ಹಿರಿಯ ನಾಗರಿಕರಿಗೂ ಇದೆ ಎಂದು ಸಿಎ ಇಂಗಿನಶೆಟ್ಟಿ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ ಹೇಳಿದರು.
ಅವರು ರವಿವಾರ ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯಲ್ಲಿ ಚಾಚಾ ನೆಹರು ಅವರ ಜಯಂತಿ ನಿಮಿತ್ತ ಆಯೋಜಿಸಲಾದ ಮಕ್ಕಳ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನೆಹರೂ ಅವರಿಗೆ ಮಕ್ಕಳೆಂದರೆ ಬಲು ಪ್ರೀತಿ. ಅಲ್ಲದೆ ಅವರು ಮಕ್ಕಳನ್ನು ಗುಲಾಬಿ ಹೂವಿಗೆ ಹೋಲಿಸಿದ್ದಾರೆ. ಮಕ್ಕಳ ಮನಸ್ಸು ಗುಲಾಬಿ ಹೂವಿನಷ್ಟೇ ಸುಂದರವಾಗಿರುತ್ತದೆ. ಅಂತೆಯೇ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸುತ್ತೇವೆ. ನೆಹರು ಅವರ ಹಲವಾರು ಸಾಧನೆಗಳು ಮಕ್ಕಳಿಗೆ ಸ್ಪೂರ್ತಿ ನೀಡಬೇಕು ಎಂದು ಹೇಳಿದರು.
ಮುಖ್ಯಗುರುಮಾತೆ ಅನಿತಾ ಶರ್ಮಾ ಮಾತನಾಡಿ,ಆದರ್ಶ ಪುರುಷರ ತತ್ವಗಳು, ವೈಚಾರಿಕ ವಿಚಾರಗಳನ್ನು ಎಲ್ಲರಿಗೂ ದಾರಿದೀಪವಾಗಬೇಕಾದರೆ, ಜೀವನದಲ್ಲಿ ಸರಳತೆಯನ್ನು ಮೈಗೂಡಿಸಿಕೊಳ್ಳಬೇಕು. ಬದಲಾವಣೆ ನಿಸರ್ಗದ ನಿಯಮ.ಆ ಬದಲಾವಣೆ ಸಮಾಜಕ್ಕೆ ವಿರುದ್ಧವಾಗಿರದೇ ಒಳಿತಾಗುವಂತಿರಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಗುರುಗಳಾದ ದಮಯಂತಿ ಸೂರ್ಯವಂಶಿ, ಅನೀಲಕುಮಾರ ಕುಲಕರ್ಣಿ, ವಸಂತ ಪಾಟೀಲ, ಸಾಯಿಬಣ್ಣ ಗುಡ್ಲಾ, ಶಿಕ್ಷಕಿಯರಾದ ಗೀತಾ ಸಿಪ್ಪಿ, ಸಂಗೀತಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…