ಕಲಬುರಗಿ: ಮಹಾದಾಸೋಹ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ, ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪಾ ಅಪ್ಪಾ ಜನ್ಮದಿನಾಚರಣೆಯ ನಿಮಿತ್ತ ಶರಣಬಸವ ವಿಶ್ವವಿದ್ಯಾಲಯದ ಇಂಗ್ಲಿ? ಅಧ್ಯಯನ ಮತ್ತು ಸಂಶೋಧನಾ ವಿಭಾಗವು “?ಕ್ಸ್ಪಿಯರ್ ನಾಟಕಗಳಲ್ಲಿ ಮಾನವೀಯ ದೃಷ್ಟಿಕೋನ” ಕುರಿತು ಒಂಬತ್ತು ದಿನಗಳ ವೆಬಿನಾರ್ ಆಯೋಜಿಸಿದೆ.
ವೆಬಿನಾರ್ ಉದ್ಘಾಟಿಸಿ ಮಾತನಾಡಿದ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ.ನಿಷ್ಠಿ, ಮಹಾನ್ ಅಮರ ಕವಿ ಮತ್ತು ನಾಟಕಕಾರ ಶೇಕ್ಸ್ಪಿಯರ್ ಇಂದಿಗೂ ಪ್ರಸ್ತುತವಾಗಿದ್ದು, ಆಧುನಿಕ ಕಾಲಘಟ್ಟದಲ್ಲಿ ಇಂಗ್ಲಿ? ಭಾ? ಮತ್ತು ಸಾಹಿತ್ಯದ ಅಧ್ಯಯನಕ್ಕೆ ಅದರಲ್ಲೂ ವಿಲಿಯಂ ಶೇಕ್ಸ್ಪಿಯರ್ನ ನಾಟಕಗಳ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ಬಂದಿದೆ ಎಂದು ಹೇಳಿದರು.
ಗೌರವ ಅತಿಥಿ, ಸಮ ಕುಲಪತಿ ಪ್ರೊ ವಿ ಡಿ ಮೈತ್ರಿ ಮಾತನಾಡಿ, ಇಂಗ್ಲಿ? ವಿಭಾಗವು ಇಂಗ್ಲಿ? ಮಾತ್ರವಲ್ಲದೆ ಇತರ ವಿಭಾಗಗಳ ವಿದ್ಯಾರ್ಥಿಗಳಿಗೆ ಕಲಿಕೆಯ ವೇದಿಕೆಯನ್ನು ಒದಗಿಸುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ ಮಾತನಾಡಿ, ಅವರ ವಿದ್ಯಾರ್ಥಿ ದಿನಗಳನ್ನು ಹಾಗೂ ಶೇಕ್ಸ್ಪಿಯರ್ ಅಧ್ಯಯನವನ್ನು ಸ್ಮರಿಸಿದರು. ಶರಣಬಸವ ವಿಶ್ವವಿದ್ಯಾಲಯವು ಬಹು ವಿಭಾಗಗಳಿಗೆ ಹೆಸರು ವಾಸಿಯಾಗಿರುವುದರಿಂದ ತಾಂತ್ರಿಕ ಶಿಕ್ಷಣ ಮತ್ತು ಆಂಗ್ಲ ಸಾಹಿತ್ಯದ ವಿದ್ಯಾರ್ಥಿಗಳು ಜೊತೆಯಲ್ಲಿ ಸಾಗಬೇಕು ಎಂಬ ಅಂಶವನ್ನು ಒತ್ತಿ ಹೇಳಿದರು. ವಿಜ್ಞಾನ ಮತ್ತು ಸಾಹಿತ್ಯ ಒಂದಕ್ಕೊಂದು ಪೂರಕವಾಗಿವೆ ಎಂದರು.