ಪೆಟ್ರೋಲ್ ಬಂಕ್ ಸ್ಥಳಾಂತರಕ್ಕೆ ಆಗ್ರಹಿಸಿ ಜೈಕನ್ನಡಿಗರ ಸೇನೆ ಪ್ರತಿಭಟನೆ

ಕಲಬುರಗಿ: ವಾರ್ಡ ನಂ.೪೯ರಲ್ಲಿ ಬರುವ ನಗರದ ಹಳೆ ಜೇವರ್ಗಿ ರಸ್ತೆ ರೈಲ್ವೆ ಕೆಳ ಸೇತುವೆ ಮುದ್ದಿ ಹನುಮಾನ ದೇವಸ್ಥಾನದ ಹತ್ತಿರ ನಿರ್ಮಾಣ ಮಾಡಲಾಗುತ್ತಿರುವ ಪೆಟ್ರೋಲ್  ಬಂಕ್ ಇಲ್ಲಿಂದ ಸ್ಥಳಾಂತರಿಸುವಂತೆ ಆಗ್ರಹಿಸಿ ಜೈಕನ್ನಡಿಗರ ಸೇನೆ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿತು.

ರೈಲ್ವೆ ಕೆಳ ಸೇತುವೆಗೆ ಹೊಂದಿಕೊಂಡಿರುವ ಮುದ್ದಿ ಹನುಮಾನ ದೇವಸ್ಥಾನಕ್ಕೆ ಪ್ರತಿನಿತ್ಯ ಭಕ್ತರು ಭೇಟಿ ನೀಡುತ್ತಾರೆ ಮೀಗಿಲಾಗಿ ಇಕ್ಕಟಾಗಿರುವ ರೈಲ್ವೆ ಕೆಳ ಸೇತುವೆ ರಸ್ತೆಯಲ್ಲಿನ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿ ಟ್ರಾಫಿಕ ಜಾಮ್ ಆಗುವ ಸಾಧ್ಯತೆ ಇರುವುದರಿಂದ ಇಲ್ಲಿ ನಿರ್ಮಿಸಲು ಉದ್ದೇಶಿಸಿರುವ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಸಂಸ್ಥೆಯ ಪೆಟ್ರೋಲ್ ಬಂಕ್ ಮತ್ತು ತೈಲ ಸಂಗ್ರಾಹಲಯ ಘಟಕವನ್ನು ಬೆರೆಕಡೆ ಸ್ಥಳಾಂತರ ಗೊಳಿಸಬೇಕೆಂದು ಸೇನೆಯ ಅಧ್ಯಕ್ಷ ದತ್ತು ಎಚ್.ಭಾಸಗಿ ಅವರು ಆಗ್ರಹಿಸಿದರು.ಹಳೆ ಜೇವರ್ಗಿ ರಸ್ತೆ ರೈಲ್ವೆ ಕೆಳ ಸೇತುವೆಗೆ ಹೊಂದಿಕೊಂಡು ಪೆಟ್ರೊಲ್ ಬಂಕ್ ಹಾಗೂ ತೈಲ್ ಸಂಗ್ರಾಹಲಯ ಘಟಕ ನಿರ್ಮಾಣಕ್ಕೆ ಅವಕಾಶ ನೀಡಬಾರರು, ಇದು ಜನಸಂದಣಿಯ ಸಾರ್ವಜನಿಕ ವಲಯದ ಪ್ರದೇಶವೂ ಆಗಿರುತ್ತದೆ.

ಈ ಮಾರ್ಗದಲ್ಲಿ ಸಂಚರಿಸುವ ವಿದ್ಯುತ ಚಾಲಿತ ರೈಲ್ವುಗಳ ಕಂಬಗಳು, ವಿದ್ಯುತ ತಂತಿಗಳು ಇಲ್ಲಿಂದ ಹಾದು ಹೋಗಿವೆ ಅಲ್ಲದೆ ರೈಲ್ವೆ ಪ್ರಯಾಣಿಕರಲ್ಲಿ ಯಾರಾದರೂ ಅಕಸ್ಮೀಕವಾಗಿ ಬೆಂಕಿಕಟ್ಟಿ ಏನಾದರೂ ಕಿಡಕಿಗಳಿಂದ ಎಸೆದಿದೇ ಆದಲ್ಲಿ ಭಾರಿ ಪ್ರಮಾಣದ ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ ಈ ಪ್ರದೇಶದ ಸುತ್ತಲಿನ ಜನವಸತಿ ಬಡಾವಣೆಗಳ ನಾಗರಿಕರು ಬೊರವೆಲ್‌ಗಳನ್ನು ಕೊರೆಸಿದ್ದಾರೆ ಅವರ ಅಂತರ ಜಲ ಕಲುಷಿತಗೊಳ್ಳುತ್ತದೆ.

ಬೆಂಕಿ ದುರೈತ ಏನಾದರು ಸಂಭವಿಸಿ ತಮ್ಮ ಮನೆಗಳಿಗೆ ಬೆಂಕಿ ಅವರಿಸಿ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂಬ ಭಯ ಅವರಲ್ಲಿ ದಿನನಿತ್ಯ ಕಾಡುತ್ತಲಿರುತ್ತದೆ. ಇಲ್ಲಿನ ನಾಗರಿಕರಲ್ಲಿ ಆವರಿಸಿರುವ ಭಯ ಮತ್ತು ಆತಂಕವನ್ನು ದೂರ ಮಾಡಲು ಹಾಗೂ ಭವಿಷ್ಯತ್ತಿನಲ್ಲಿ ಮುಂದೆ ಸಂಭವಿಸಲಿರುವ ಅಪಾಯವನ್ನು ತಪ್ಪಿಸಲು ಮತ್ತು ಪರಿಸರ ರಕ್ಷಣೆಯ ಉದ್ದೇಶದಿಂದ ಇಲ್ಲಿ ನಿರ್ಮಾಣಗೊಳ್ಳುತ್ತಿರುವ ಪೆಟ್ರೊಲ್ ಬಂಕ್ ಕೂಡಲೇ ಇಲ್ಲಿಂದ ಸ್ಥಳಾಂತರಗೊಳಿಸ ಬೇಕೆಂಬ ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಹುಸೇನ, ಶಿವು ಮಡಕಿ, ರಾಮಾ ಪೂಜಾರಿ, ಶ್ರೀಶೈಲ, ಸಾಗರ ಕುಮಸಿ, ಸಂಜೀವಕುಮಾರ ಮಾಳಗಿ, ವಿಶ್ವಜಿತ,ಪ್ರಶಾಂತ ಬಾಪುನಗರ ಇದ್ದರು.

emedialine

Recent Posts

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

1 hour ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

15 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

15 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

15 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

15 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420