ಕಲಬುರಗಿ: ಸಾಹಿತ್ಯ ಸಂಘಟಕ, ಕ್ರಿಯಾಶೀಲ ವ್ಯಕ್ತಿಯಾಗಿರುವ ವೀರಭದ್ರ ಸಿಂಪಿಯವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಈ ಬಾರಿ ಮತ್ತೆ ಸ್ಪರ್ಧೆ ಮಾಡಿದ್ದಾರೆ.
ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವಲ್ಲಿ ಹಾಗೂ ಅದನ್ನು ಯಶಸ್ವಿಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಸಿಂಪಿಯವರು ಈ ಬಾರಿ ಮತ್ತೆ ಸತ್ವ ಪರೀಕ್ಷಗೆ ಇಳಿದಿದ್ದಾರೆ.
ಉದಯೋನ್ಮುಖ ಯುವ ಬರಹಗಾರರ ಬಳಗದ ಮೂಲಕ ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ಕಾಲಿಟ್ಟ ಇವರು, 2004ರಲ್ಲಿ ಮೊದಲ ಬಾರಿಗೆ ಜಿಲ್ಲಾ ಕಸಾಪದ ಚುಕ್ಕಾಣಿ ಹಿಡಿದರು. ವೈವಿದ್ಯಮಯ ಸಾಹಿತ್ಯಕ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯ ಸಹೃದಯರ ಮನಸ್ಸು ಸೂರೆಗೊಂಡರು.
ಅದಾದ ಬಳಿಕ 2012ರಲ್ಲಿ ಕೇವಲ 27 ಮತಗಳ ಅಂತರದಲ್ಲಿ ಪತ್ರಕರ್ತ-ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ ಅವರಿಂದ ಪರಾಭವಗೊಂಡರು. ಕನ್ನಡದ ಬೌದ್ಧಿಕ ಬೆಳವಣಿಗೆಯ ಜೊತೆಗೆ ಕನ್ನಡ ಭವನದ ಭೌತಿಕ ಬೆಳವಣಿಗೆಗೆ ಕಾರಣರಾಗುವ ಮೂಲಕ 2016ರಲ್ಲಿ ಅತ್ಯಧಿಕ ಮತಗಳಿಂದ ಮತ್ತೆ ಪುನರಾಯ್ಕೆಯಾಗಿದ್ದಾರೆ.
ಕಲಬುರಗಿಯ ಕನ್ನಡ ಭವನವನ್ನು ಎಲ್ಲರೂ ನೋಡುವಂತೆ ಮಾಡಿರುವ ಸಿಂಪಿ ಅವರಿಗೆ ಮತ್ತೊಂದು ಬಾರಿ ಅವಕಾಶ ನೀಡಬೇಕು ಎಂದು ಕೆಲವರು ಅಭಿಮಾನದಿಂದ ಹೇಳಿದರೆ, ಇನ್ನು ಕೆಲವರು ಕನ್ನಡ ಭವನ ಒಬ್ಬರಿಗೆ ಬರೆದು ಕೊಟ್ಟಿಲ್ಲ. ಮತ್ತೊಬ್ಬರಿಗೆ ಅವಕಾಶ ನೀಡಬೇಕು ಎಂಬ ಅಪಸ್ವರಗಳೂ ಕೇಳಿ ಬರುತ್ತಿವೆ.
ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕನ್ನಡ ಭವನದ ಬಾಪೂಗೌಡ ರಂಗ ಮಂದಿರದ ಬಾಕಿಯಿರುವ ಆಂತರಿಕ ಕಾಮಗಾರಿ ಪೂರ್ಣಗೊಳಿಸುವುದು, ‘ಮರೆಯಲಿ ಹ್ಯಾಂಗ ನಿಮ್ಮ’ ಗ್ರಂಥ ಪ್ರಕಟಣೆ, ಮನದ ಮಾತು ಮುಂದುವರಿಕೆ, ‘ನಮ್ಮೂರ ಹಿರಿಯರು’ ವಿಶೇಷ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಲ್ಲ ಗ್ರಾಮಗಳ ಐತಿಹಾಸಿಕ ಚರಿತ್ರೆ ಕಟ್ಟಿಕೊಡುವುದು ಸೇರಿದಂತೆ ಹಲವು ಹತ್ತು ಕಾರ್ಯಕ್ರಮಗಳ ಪ್ರಣಾಳಿಕೆ ಇಟ್ಟುಕೊಂಡು ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.
ಆಗಬೇಕಾದ ಕೆಲಸಗಳು ಸಾಕಷ್ಟು ಇರುವುದರಿಂದ ಮತ್ತೆ ಸ್ಪರ್ಧೆ ಮಾಡಿದ್ದು, ಇದು ನನ್ನ ಕೊನೆಯ ಚುನಾವಣೆ. ಕನ್ನಡಮ್ಮನ ಸೇವೆಗೆ ಕಸಾಪ ಮತದಾರರು ಇದೊಂದು ಬಾರಿ ಅವಕಾಶ ಮಾಡಿಕೊಡಿ. – ವೀರಭದ್ರ ಸಿಂಪಿ
ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಇತರೆ ಹುರಿಯಾಳುಗಳಂತೆ ಸರಾಸರಿ ಮತ ಬಾಚಿಕೊಳ್ಳುವ ಸಿಂಪಿ ಅವರು ನಗರದಲ್ಲಿಯೇ ಹೆಚ್ಚು ಮತಗಳನ್ನು ಪಡೆಯಲಿದ್ದಾರೆ ಎಂದು ಅವರ ಹಿಂಬಾಲಕರು, ಬೆಂಬಲಿಗರು ಹೇಳುತ್ತಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…