ಬೆಂಗಳೂರು: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನವೆಂಬರ್ 21ರಂದು ನಡೆಯುವ ಹಿನ್ನೆಲೆಯಲ್ಲಿ ಸ್ಪರ್ಧೆಗಿಳಿದ ಅಭ್ಯರ್ಥಿಗಳ ಹಾಗೂ ಅವರ ಬೆಂಬಲಿಗರ ಪ್ರಚಾರ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿಯಾಗಿಯೇ ನಡೆದಿದೆ.
ಚುನಾವಣೆಗೆ ಇನ್ನೇನು ಕೇವಲ 5 ದಿನ ಬಾಕಿಯಿದ್ದು, ಸಾಮಾಜಿಕ ಜಾಲತಾಣಗಳಾದ ಮೆಸೆಜ್, ಮೆಸೆಂಜರ್, ವಾಟ್ಸ್ ಆಪ್, ಫೇಸ್ ಬುಕ್, ಟ್ವೀಟರ್, ಸಿಗ್ನಲ್, ಟೆಲಿಗ್ರಾಮ್ ಮುಂತಾದ ನೆಟ್ ವರ್ಕ್ ಹಾಗೂ ಆ್ಯಪ್ ಗಳ ಮೂಲಕ ಮತದಾರರ ಮನವೊಲಿಸಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ. ಅಂತೆಯೇ ಈಗೀಗ ನೀವು ಯಾವುದೇ ಆ್ಯಪ್, ಖಾತೆಗಳನ್ನು ಓಪನ್ ಮಾಡಿದರೆ ಸಾಕು ಅಲ್ಲೆಲ್ಲ ಅಭ್ಯರ್ಥಿ ಹಾಗೂ ಬೆಂಬಲಿಗರ ಅಬ್ಬರದ ಪ್ರಚಾರ ಕಂಡು ಬರುತ್ತಿದೆ.
ಬಹುತೇಕ ಅಭ್ಯರ್ಥಿಗಳು ಎಲ್ಲ ಗ್ರೂಪ್ ಗಳಲ್ಲೂ ಅದ್ಹೇಗೋ ನುಸುಳಿಕೊಂಡು ತಮ್ಮದೇ ಆದ ಕಾರ್ಯ ಚಟುವಟಿಕೆಗಳನ್ನು ಯಾವ ಎಗ್ಗಿಲ್ಲದೆ ನಡೆಸುತ್ತಿದ್ದಾರೆ. ಇದರಿಂದಾಗಿ ಆ ಗ್ರೂಪ್ ನಲ್ಲಿರುವ ಇತರೆ ಸದಸ್ಯರಿಗೆ ತುಂಬಾ ತೊಂದರೆಯಾಗುತ್ತಿದೆ. ನಾನು ಗೆದ್ದು ಬಂದರೆ ಅದು ಮಾಡುತ್ತೇನೆ. ಇದು ಮಾಡುತ್ತೇನೆ, ಹೀಗೆ ಮಾಡುತ್ತೇನೆ, ಹಾಗೆ ಮಾಡುತ್ತೇನೆ ಎಂದು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮತದಾರರಿಗೆ ಪಕ್ಕಾ ರಾಜಕಾರಣಿಗಳಂತೆ ಭರವಸೆಯ ಮಾತುಗಳನ್ನಾಡುತ್ತಿದ್ದಾರೆ.
ಅಭ್ಯರ್ಥಿಗಳ ಈ ಆಸ್ವಾಸನೆ, ಭರವಸೆಯ ಮಾತುಗಳಿಗೆ ಇದೇ 21ರಂದು ತೆರೆ ಬೀಳಲಿದೆ. ಅಲ್ಲಿಯವರೆಗೆ ಮತದಾರ ಬಾಂಧವರು ತಾಳಿಕೊಂಡು ಸುಮ್ಮನಿರಬೇಕಾಗಿದೆ. ಅದೇರೀತಿಯಾಗಿ ಪೋಸ್ಟರ್, ಪಾಂಪ್ಲೆಟ್, ಗುರುತಿನ ಚೀಟಿಗಳ ಮೂಲಕವೂ ಮತದಾರರ ಮನವೊಲಿಸುತ್ತಿದ್ದಾರೆ ಕೂಡ
ಕಸಾಪ ಚಯನಾವಣೆಯು ಯಾವುದೇ ರಾಜಕೀಯ ಪಕ್ಷಕ್ಕೂ ಕಡಿಮೆಯೇನಿಲ್ಲ ಎನ್ನುವಂತೆ ಮತದಾರರಿಗೆ ಆಸೆ-ಆಮಿಷ ತೋರಿಸಿ ಮತ ಖರೀದಿಸುವ ಪ್ರಕ್ರಿಯೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಅಂತೆಯೇ ಸಾಮಾನ್ಯರು ಈ ಚುನಾವಣೆಗಳಲ್ಲಿ ಸ್ಪರ್ಧಿ ಸುವಂತಿಲ್ಲ ಎನ್ನುವಂತಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…