ಸುರಪುರ: ಕೃಷ್ಣಾ ಎಡದಂಡೆ ಕಾಲುವೆ ಭಾಗದ ರೈತರು ಹಿಂಗಾರು ಬೆಳೆಗೆ ನೀರು ಬರುವ ಬಗ್ಗೆ ಇನ್ನೂ ಗೊಂದಲಿದ್ದಾರೆ. ಆದ್ದರಿಂದ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆದು ರೈತರಿಗಿರುವ ಗೊಂದಲವನ್ನು ಪರಿಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳೆಕೆ ನೀಡಿರುವ ಅವರು,ಬಸವಸಾಗರ ಜಲಾಶಯದಲ್ಲಿ 68 ಟಿ.ಎಮ್.ಸಿ ಮತ್ತು ಆಲಮಟ್ಟಿ ಜಲಾಶಯದಲ್ಲಿ 12 ಟಿ.ಎಮ್.ಸಿ ನೀರು ಲಭ್ಯವಿದೆ.ಆದರೂ ಮೀನಾ ಮೇಷ ಎಣಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
80 ಟಿ.ಎಮ್.ಸಿ ನೀರು ಲಭ್ಯವಿದೆ,ಅದರಲ್ಲಿ 20 ಟಿ.ಎಮ್.ಸಿ ಕುಡಿಯಲು ಮತ್ತು 20 ಟಿ.ಎಮ್.ಸಿ ಡೆಡ್ ಸ್ಟೋರೆಜ್ ಮತ್ತು ಕೆನಾಲ್ಗೆ ವಾರಬಂದಿ ನಿಯಮದಲ್ಲಿ ನೀರು ಹರಿಸಿದರು ಮಾರ್ಚ್ 15ರ ವರೆಗೂ ನೀರು ಬರಲಿವೆ.ಇನ್ನೂ ಆಲಮಟ್ಟಿ ಡ್ಯಾಂನಿಂದ ನೀರು ಬಂದರೆ ಮಾಚ್ 31ರ ವರೆಗೆ ನೀರು ಹರಿಸಬಹುದು.ಆದ್ದರಿಂದ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ರೈತರಿಗೆ ತಿಳಿಸಬೇಕು ಎಂದರು.
ಅಲ್ಲದೆ ಈಗಾಗಲೇ ಭತ್ತ ಕಟಾವು ಆರಂಭಗೊಂಡಿದ್ದು ಭತ್ತ ಖರಿದಿ ಕೇಂದ್ರ ಆರಂಭಿಸಬೇಕು,ನೆರೆ ಬರ ಪರಿಹಾರದ ಹಣವನ್ನು ಶೀಘ್ರವೆ ಬಿಡುಗಡೆ ಮಾಡಬೇಕು,ಸರಕಾರದಿಂದ ವೇಬ್ರೀಡ್ಜ್ಗಳನ್ನು ಆರಂಭಿಸಿ ರೈತರಿಗೆ ತೂಕದಲ್ಲಿ ಆಗುತ್ತಿರುವ ಮೋಸವನ್ನು ತಪ್ಪಿಸಬೇಕು.ಅಲ್ಲದೆ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕೇವಲ ಬೆಂಗಳೂರು ಮತ್ತು ಆಲಮಟ್ಟಿಗೆ ಸೀಮಿತಗೊಳಿಸದೆ ಯಾದಗಿರಿಯಲ್ಲಿ ಸಭೆ ನಡೆಸಲು ಕ್ರಮ ಕೈಗೊಳ್ಳಬೇಕು.
ಈ ಎಲ್ಲಾ ಬೇಡಿಕೆಗಳಿಗಾಗಿ ಇದೇ ತಿಂಗಳು 26ನೇ ತಾರೀಖು ರಾಷ್ಟ್ರೀಯ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ಹತ್ತಿಗುಡೂರು ಡಾಬಾ ಕ್ರಾಸ್ಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…