ನಿರಗುಡಿ ಗೆಲುವಿಗೆ ಮತ ನೀಡಲು ಮನವಿ

0
56

ಕಲಬುರಗಿ:ಇದೇ ತಿಂಗಳ 21 ರಂದು ನಡೆಯಲಿರುವ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಸಾಹಿತಿ,ಲೇಖಕ ಬಿ.ಹೆಚ್.ನಿರಗುಡಿ ಅವರನ್ನು ಮತ ನೀಡಿ ಗೆಲ್ಲಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಹಾಗೂ ಗೌರವಾಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಅವರು ಮನವಿ ಮಾಡಿದ್ದಾರೆ.

ನಿರಗುಡಿ ಅವರು ಒಳ್ಳೆಯ ಸಾಹಿತಿ ಹಾಗೂ ಲೇಖಕರಾಗಿ ಸುಮಾರು 25 ಪುಸ್ತಕಗಳನ್ನು ರಚಿಸಿದ್ದಾರೆ.ಅನೇಕ ಕವನಗಳನ್ನು ಬರೆದಿದ್ದಾರೆ.ಇದಲ್ಲದೆ ನೂರಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

Contact Your\'s Advertisement; 9902492681

ಹತ್ತಾರು ಸಾಹಿತಿಗಳಿಗೆ ವೇದಿಕೆ ನೀಡಿದ್ದಾರೆ. ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಿರಗುಡಿ ಅವರು ಅಧ್ಯಕ್ಷರಾದರೆ ಕನ್ನಡ ಭವನದಲ್ಲಿ ವರ್ಷವಿಡೀ ಸಾಂಸ್ಕೃತಿಕ ಕಾರ್ಯಕ್ರಮ ಜರುಗುತ್ತವೆ.ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ.

ನಿರಗುಡಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರು, ಹಿರಿಯ ಸಾಹಿತಿಗಳು ಲೇಖಕರು,ಸಂಘ ಸಂಸ್ಥೆಗಳು, ಶಿಕ್ಷಕರು,ಉಪನ್ಯಾಸಕು, ಹೋರಾಟಗಾರರು, ಬುದ್ಧಿ ಜೀವಿಗಳು ಸೇರಿದಂತೆ ಅನೇಕರು ಈಗಾಗಲೇ ಅವರ ಗೆಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಜಾತ್ಯಾತೀತ ಮನೋಭಾವ ಹೊಂದಿರುವ ನಿರಗುಡಿ ಅವರಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here