ಬಿಸಿ ಬಿಸಿ ಸುದ್ದಿ

ದೇಶದ ಹೋರಾಟನಿರತ ರೈತರಿಗೆ ಮತ್ತು ನಾಗರಿಕರಿಗೆ ಅಭಿನಂದನೆಗಳು

ಮೂರು ಕರಾಳ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುತ್ತೇವೆ ಎಂದು ಪ್ರಧಾನ ಮಂತ್ರಿಗಳು ಘೋಷಣೆ ಮಾಡಿದ್ದಾರೆ. ಇದು ರೈತ ಚಳುವಳಿಯಲ್ಲೇ ಚಾರಿತ್ರಿಕ ವಿಜಯ. ಇದು ಆರ್ ಕೆ ಎಸ್ (ಎ ಐ ಕೆ ಕೆ ಎಂಎಸ್) ಕೂಡ ಮುಖ್ಯ ಭಾಗವಾಗಿರುವ ಎಸ್ ಕೆ ಎಂ ಪತಾಕೆಯಡಿ ನಡೆದ ರೈತ ಚಳುವಳಿ ಈ ವಿಜಯಕ್ಕೆ ವಿಶ್ವವ್ಯಾಪಿ ಮಹತ್ವವಿದೆ. ಇದು 700 ಹುತಾತ್ಮ ರೈತರ ಜೀವ ಕೊಟ್ಟು ರೈತರು ಗಳಿಸಿದ ವಿಜಯ; ಅವರ ಪರಿಶ್ರಮದಾಯಕ ಹೋರಾಟಗಳಿಂದ, ಬಲಿದಾನಗಳಿಂದ ಗಳಿಸಿದ ವಿಜಯ. ಹುತಾತ್ಮ ರೈತರಿಗೆ ಹೃದಯದಾಳದ ಶ್ರದ್ದಾಂಜಲಿಗಳು!

ಇತಿಹಾಸವನ್ನು ಬರೆಯುವವರು ಜನರೇ ಎಂದು ಮತ್ತೊಮ್ಮೆ ಸಾಬೀತಾಗಿದೆ. ಹೋರಾಟ ನಡೆಯುತ್ತಿದೆ. ವಿದ್ಯುತ್ ಮಸೂದೆ ವಾಪಸ್ ತೆಗೆದುಕೊಂಡಿಲ್ಲ. ಉತ್ಪಾದನಾ ವೆಚ್ಚದ ಮೇಲೆ ಶೇ. 50ರಷ್ಟು ಹೆಚ್ಚಿರುವ ಕನಿಷ್ಠ ಬೆಂಬಲ ಬೆಲೆಯಲ್ಲಿ ಎಲ್ಲಾ ಬೆಳೆಗಳನ್ನು ಖರೀದಿಸುವುದನ್ನು ಖಚಿತಪಡಿಸುತ್ತವೆ ಎಂದು ಘೋಷಿಸಿಲ್ಲ.

ದೇಶದ ಎಲ್ಲೆಡೆ ರೈತರ ಮೇಲೆ ಹಾಕಿರುವ ಮೊಕದ್ದಮೆಗಳನ್ನು ವಾಪಸ್ ತೆಗೆದುಕೊಂಡಿಲ್ಲ. ರೈತರ ಚಳುವಳಿಯ ಮೇಲೆ ದಾಳಿ ಮಾಡಿದವರಿಗೆ ಶಿಕ್ಷೆಯಾಗಿಲ್ಲ. ಮತ್ತೊಂದು ವಿಷಯವೆಂದರೆ, ಹುತಾತ್ಮ ರೈತರ ಕುಟುಂಬಗಳ ಜವಾಬ್ದಾರಿಯನ್ನು ಮೋದಿ ಸರ್ಕಾರ ತೆಗೆದುಕೊಳ್ಳಬೇಕು.

ಎಲ್ಲಾ ಹೋರಾಟ ನಿರತ ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು, ವಿದ್ಯಾರ್ಥಿಗಳು, ಸುಚಿಂತಕರು ಹಾಗೂ ಎಲ್ಲಾ ನಾಗರಿಕರಿಗೂ ಹೃದಯಪೂರ್ವಕ ಕೃತಜ್ಞತೆಗಳು. ಹುತಾತ್ಮ ರೈತರು ಅಮರವಾಗಲಿ! ಚಳುವಳಿ ಅಮರವಾಗಲಿ!

ಕ್ರಾಂತಿ ಚಿರಾಯುವಾಗಲಿ!
ರೈತ ಕಾರ್ಮಿಕರ ಒಗ್ಗಟ್ಟು ಚಿರಾಯುವಾಗಲಿ!
ಆರ್ ಕೆ ಎಸ್ (ಎ ಐ ಕೆ ಕೆ ಎಂ ಎಸ್) ಜಿಂದಾಬಾದ್!
ಎಸ್ ಕೆ ಎಂ ಜಿಂದಾಬಾದ್!

ಕಾಮ್ರೇಡ್ ಸತ್ಯವಾನ್
ಅಧ್ಯಕ್ಷರು

ಕಾಮ್ರೇಡ್ ಶಂಕರ್ ಘೋಷ್
ಪ್ರಧಾನ ಕಾರ್ಯದರ್ಶಿ

 

ಸುದ್ದಿ ಇವರಿಂದ,

ಮಹೇಶ್ ಎಸ್. ಬಿ.
(ಜಿಲ್ಲಾ ಕಾರ್ಯದರ್ಶಿ, RKS, ಕಲಬುರಗಿ)

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago