ಬಿಸಿ ಬಿಸಿ ಸುದ್ದಿ

ರೈತರ ಐತಿಹಾಸಿಕ ಪ್ರತಿರೋಧಕ್ಕೆ ಮಣಿದ ಮೋದಿ ಸರಕಾರ – ಕೆಪಿಆರ್ ಎಸ್

ದೇಶದ ಕೃಷಿಯನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸಿಕೊಡುವ ನರೇಂದ್ರ ಮೋದಿಯವರ ಒಕ್ಕೂಟ ಸರಕಾರದ ದೇಶ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ಪ್ರತಿರೋಧಿಸಿ, ಕಳೆದೆರಡು ವರ್ಷಗಳಿಂದ ದೇಶವ್ಯಾಪ್ತಿಯಾಗಿ ಕೋಟ್ಯಾಂತರ ಜನ ಮತ್ತು ಮುಖ್ಯವಾಗಿ ದೆಹಲಿ ಸುತ್ತಲಿನ ಐದು ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಿ ಕಳೆದ 360 ದಿನಗಳಿಂದ ನಿರಂತರವಾಗಿ ನಡೆಸುತ್ತಿದ್ದ ಐತಿಹಾಸಿಕ ಮತ್ತು ಜಾಗತಿಕ ಗಮನ ಸೆಳೆದ ಸಮರ ಶೀಲ ಪ್ರತಿರೋಧಕ್ಕೆ ಮಣಿದ ಒಕ್ಕೂಟ ಸರಕಾರ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ಕಾಯ್ದೆಗಳನ್ನು ವಾಪಾಸು ಪಡೆದಿರುವುದಾಗಿ ಪ್ರಕಟಿಸಿರುವುದು ದೇಶದ ರೈತರು, ಕಾರ್ಮಿಕರು ಹಾಗೂ ನಾಗರೀಕರ ಸಮರ ಶೀಲ ಹೋರಾಟಕ್ಕೆ ಸಂದ ಜಯವಾಗಿದೆ.

ಇದರಿಂದ ದೇಶದ ಕೃಷಿಯನ್ನು ಹಾಗೂ ಸ್ವಾವಲಂಬನೆಯನ್ನು ಕಬಳಿಸುವ ಕಾರ್ಪೋರೇಟ್ ಕಂಪನಿಗಳ ಹುನ್ನಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆಯೆಂದು ಕರ್ನಾಟಕ ಪ್ರಾಂತ ರೈತ ಸಂಘ ಹರ್ಷ ವ್ಯಕ್ತ ಪಡಿಸುತ್ತದೆ. ಹೋರಾಟದಲ್ಲಿ ತೊಡಗಿದ ಎಲ್ಲರನ್ನು ಹರತ್ಪೂರ್ವಕವಾಗಿ ಅಭಿನಂದಿಸಿದೆ.

ಆದರೇ, ಇದು ಶ್ರೀ ನರೇಂದ್ರ ಮೋದಿಯವರು ಈ ಕುರಿತು ಸಂಸತ್ತಿನಲ್ಲಿ ಕ್ರಮವಹಿಸಿ ಖಾತರಿ ಪಡಿಸುವ ಮೂಲಕ ಮಾತ್ರವೇ ನಿಜವಾಗಲಿದೆ.

ಒಕ್ಕೂಟ ಸರಕಾರ ಈ ಕಾರ್ಪೊರೇಟ್ ಕೃಷಿಯನ್ನು ದೇಶದ ಮೇಲೆ ಬಲವಂತವಾಗಿ ಹೇರಲು ಹಟಮಾರಿ ನಿಲುವನ್ನು ತಾಳಿದ್ದರಿಂದ, ಹೋರಾಟ ನಿರತರು, ಸಾವಿರಾರು ರೈತರು ಹೋರಾಟದ ಕಣದಲ್ಲಿಯೇ ಸಾವಿಗೀಡಾಗುವಂತಾಯಿತು. ಲಾಠಿ ಚಾರ್ಜ, ಟಿಯರ್ ಗ್ಯಾಸ್ ಹಾಗೂ ವಾಟರ್ ಕೆನಾನ್ , ಲಖಿಂಪುರದಲ್ಲಿ ವಾಹನಗಳನ್ನು ಹಾಯಿಸಿ ಕೊಲ್ಲುವ ದಾಳಿಗಳನ್ನು, ಗುಂಡಾ ದಾಳಿಗಳನ್ನು ಪೋಲೀಸರ ಹಿಂಸೆಗಳು, ಕೇಸುಗಳನ್ನು ಎದುರಿಸುವಂತಾಯಿತು.

ಹೋರಾಟ ನಿರತರನ್ನು ನಕಲಿ ರೈತರೆಂದು ಅವಾಚ್ಯವಾಗಿ ನಿಂದಿಸಲಾಯಿತು. ಇದಕ್ಕೆಲ್ಲಾ ಬಿಜೆಪಿ ನೇತೃತ್ವದ ಒಕ್ಕೂಟ ಸರಕಾರವೇ ನೇರ ಹೊಣೆಗಾರನಾಗಿದೆಯೆಂದು ಕರ್ನಾಟಕ ಪ್ರಾಂತ ರೈತ ಸಂಘ ಖಂಡಿಸುತ್ತದೆ.

ಕರ್ನಾಟಕ ಸರಕಾರ ಒಕ್ಕೂಟ ಸರಕಾರದ ಈ ನೀತಿಗಳನ್ನು ಜಾರಿಗೊಳಿಸುವಲ್ಲಿ ತಾನೇ ಮೊದಲಿಗನೆಂದು ಬೀಗಿ, ಕಾರ್ಪೋರೇಟ್ ಕಂಪನಿಗಳಿಗೆ ರಾಜ್ಯದ ಕೃಷಿಯನ್ನು ವಹಿಸುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಏಪಿಎಂಸಿ ತಿದ್ದುಪಡಿ ಕಾಯ್ದೆ ಮತ್ತು ಜಾನುವಾರು ಹತ್ಯಾ ನಿಷೇಧ ತಿದ್ದುಪಡಿ ಕಾಯ್ದೆಗಳನ್ನು ಜಾರಿಗೊಳಿಸಿದ್ದು ಇವುಗಳನ್ನು ವಾಪಾಸು ಪಡೆಯುವ ಕುರಿತು ರಾಜ್ಯ ಸರಕಾರ ಮಾತನಾಡದೇ ಈಗಲೂ ಮೌನವಾಗಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ ಬಲವಾಗಿ ಖಂಡಿಸುತ್ತದೆ. ತಕ್ಷಣವೇ ರಾಜ್ಯ ಸರಕಾರವೂ ಒಕ್ಕೂಟ ಸರಕಾರದಂತೆ ಕ್ರಮವಹಿಸಿ ಈ ಕೃಷಿ ವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯುವಂತೆ ಬಲವಾಗಿ ಒತ್ತಾಯಿಸುತ್ತದೆ.

ರಾಜ್ಯ ಸರಕಾರ ಈ ಕಾಯ್ದೆಗಳನ್ನು ವಾಪಾಸು ಪಡೆಯದೇ, ಕೇವಲ ಒಕ್ಕೂಟ ಸರಕಾರ ವಾಪಾಸು ಪಡೆದುದರ ಪ್ರಯೋಜನ ನಮಗಿಲ್ಲವೆಂದು ರಾಜ್ಯದ ಜನತೆಗೆ ಸ್ಪಷ್ಟಪಡಿಸಿದೆ. ಹೀಗಾಗಿ, ರಾಜ್ಯದ ರೈತರು – ನಾಗರೀಕರು ಹೋರಾಟವನ್ನು ತೀವ್ರ ಗೊಳಿಸಲು ಕರೆ ನೀಡುತ್ತದೆ.

ಒಕ್ಕೂಟವಾದಿ ಸರಕಾರವೂ, ನಮ್ಮ ಹಕ್ಕೊತ್ತಾಯ ಗಳ ಹಲವು ಅಂಶಗಳನ್ನು ಪರಿಗಣಿಸಿಲ್ಲ. ಮುಖ್ಯವಾಗಿ ರೈತರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತರಿ ಪಡಿಸುವ ಕಾಯ್ದೆ ಹಾಗೂ ರೈತರ – ಕೃಷಿಕೂಲಿಕಾರರ ಸಾಲ ಮನ್ನಾ ಮಾಡುವ ಋಣ ಮುಕ್ತ ಕಾಯ್ದೆ ರಚನೆ ಕುರಿತು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆ ವಾಪಾಸು ಪಡೆಯುವ ಕುರಿತು ಮೌನ ವಹಿಸಿದೆ ಮಾತ್ರವಲ್ಲಾ, ದೇಶದ ಕಾರ್ಮಿಕ ವರ್ಗವನ್ನು ಕಾರ್ಪೋರೆಟ್ ಸುಲಿಗೆಗೊಳಪಡಿಸಿದ ಕಾರ್ಮಿಕ ಸಂಹಿತೆಗಳ ಕುರಿತು ಏನನ್ನು ಮಾತನಾಡಿಲ್ಲ.

ಹೀಗಾಗಿ ಈ ಪ್ರಶ್ನೆಗಳಿಗಾಗಿ ಹೋರಾಟ ಮುಂದುವರೆಯಲಿದೆಯೆಂದು ಸ್ಪಷ್ಢ ಪಡಿಸಿದೆ. ಈ ಎಲ್ಲಾ ಜನಪರ ಹಾಗೂ ದೇಶದ ಸ್ವಾವಲಂಬಿ ಹೋರಾಟವನ್ನು ತೀವ್ರಗೊಳಿಸುವಂತೆ ಜನತೆಗೆ ಕರೆ ನೀಡಿದೆ. ತೀವ್ರ ತೆರನಾದ ಮತ್ತು ದೀರ್ಘಕಾಲದ ನಿರಂತರ ಹೋರಾಟಗಳು ಜನತೆಗೆ ಜಯವನ್ನು ತಂದುಕೊಡಲಿವೆಯೆಂಬುದಕ್ಕೆ ಈ ಚಳುವಳಿ ಸಾಕ್ಷಿಯಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ ವಿವರಿಸಿದೆ.

ಶರಣಬಸಪ್ಪಾ ಮಮಶೆಟ್ಟಿ
ಜಿಲ್ಲಾ ಅಧ್ಯಕ್ಷರು KPRS

*ಯು.ಬಸವರಾಜ*
ಪ್ರಧಾನ ಕಾರ್ಯದರ್ಶಿ

emedialine

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

3 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

15 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

16 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

17 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

17 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

18 hours ago