ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ರೈತರು ವರ್ಷವಿಡೀ ನಡೆಸಿರುವ ಉತ್ಸಾಹಭರಿತ, ಸ್ಪೂರ್ತಿದಾಯಕ ಮತ್ತು ಧೀರ ಹೋರಾಟದ ಐತಿಹಾಸಿಕ ವಿಜಯಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) CPI(M) ವೀರವಂದನೆಗಳನ್ನು ಸಲ್ಲಿಸುತ್ತದೆ.
ಹಟಮಾರಿ ಪ್ರಧಾನಿ ಮತ್ತು ಅವರ ಸರ್ಕಾರವು ಬಗ್ಗಲೇ ಬೇಕಾಗಿ ಬಂದಿದೆ. ಆದರೂ ಮೋದಿಯವರು ಈ ಕರಾಳ ಕಾಯ್ದೆಗಳನ್ನು ಸಮರ್ಥಿಸಿ ಕೊಳ್ಳುತ್ತಲೇ ಇದ್ದಾರೆ. ರೈತರ ಒಂದು ವರ್ಗವನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ದೂಷಿಸುತ್ತಿದ್ದಾರೆ. ನಮ್ಮ ರೈತರ ಸಾವಿನ ಬಗ್ಗೆ ಅಥವಾ ಅವರ ಮೇಲಿನ ದಾಳಿಗಳ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ.
ಈ ಕರಾಳ ಕಾನೂನುಗಳನ್ನು ರದ್ದುಗೊಳಿಸುವಾಗ ಸಂಸತ್ತು ಎಲ್ಲಾ ಕೃಷಿ ಬೆಳೆಗಳನ್ನು ಕನಿಷ್ಟ ಬೆಂಬಲ ಬೆಲೆ (ಎಂಎಸ್ಪಿ) ಗಳಲ್ಲಿ ಮಾರಾಟ ಮಾಡುವ ಕಾನೂನುಬದ್ಧ ಹಕ್ಕನ್ನು ರೂಪಿಸಬೇಕು ಎಂದು ಸಿಪಿಐಎಂ ಮತ್ತೊಮ್ಮೆ ಆಗ್ರಹಿಸುತ್ತದೆ
ಈ ಹೋರಾಟದಲ್ಲಿ 750ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಅವರು ಬಿಜೆಪಿ ಆಡಳಿತದಿಂದ ಮಿಲಿಟರಿ ಮಾದರಿಯ ರಸ್ತೆ ತಡೆಗಳು, ಬೆದರಿಕೆಗಳು, ಭೀತಿಕಾರಕ ಕೃತ್ಯಗಳು ಮತ್ತು ಕೊಲೆಗಡುಕ ದೈಹಿಕ ದಾಳಿಗಳನ್ನು ಎದುರಿಸಿದರು.
ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಮ್ಮ ರೈತರ ದೃಢಸಂಕಲ್ಪ ಶ್ಲಾಘನಾರ್ಹ. ಮತ್ತು ಅವರು ತಮ್ಮ ಹಳ್ಳಿಗಳಿಗೆ ಹಿಂದಿರುಗುವ ಮೊದಲು ಈ ಭರವಸೆಗಳು ಸಾಕಾರಗೊಳ್ಳುವವರೆಗೆ ಕಾಯುತ್ತಾರೆ ಎಂದಿರುವ ಸಂಯುಕ್ತ ಕಿಸಾನ್ ಮೋರ್ಚಾದ ನಿಲುವನ್ನು ಸಿಪಿಐಎಂ ಲಿಂಗಸ್ಗೂರು ತಾಲೂಕು ಸಮಿತಿ ಅನುಮೋದಿಸುತ್ತದೆ.
ರಮೇಶ ವೀರಾಪೂರು
ಕಾರ್ಯದರ್ಶಿ, CPI(M) ತಾಲೂಕು ಸಮಿತಿ, ಲಿಂಗಸ್ಗೂರು
ಕಲಬುರಗಿ: ಕಮಲಾಪೂರ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನಿರ್ಮಲಾ ವೀರಭದ್ರಪ್ಪ ದೇಸಾಯಿ ಇವರ…
ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…